ಹೊಸಕುಂದುವಾಡಕ್ಕೆ ತಿಂಗಳಿಗೊಮ್ಮೆ ಕುಡಿಯುವ ನೀರು


Team Udayavani, Jul 10, 2018, 3:43 PM IST

dvg-2.jpg

ದಾವಣಗೆರೆ: ಕುಡಿಯುವ ನೀರು ಸಮರ್ಪಕ ಪೂರೈಸಲು ಒತ್ತಾಯಿಸಿ ಹೊಸಕುಂದುವಾಡ ಗ್ರಾಮಸ್ಥರು ಸೋಮವಾರ ಖಾಲಿ ಕೊಡಗಳೊಂದಿಗೆ ಪ್ರತಿಭಟಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ ಹೊಸಕುಂದವಾಡದಲ್ಲಿ 15 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿತ್ತು. ಇದೀಗ ಒಂದು ತಿಂಗಳು ಕಳೆದರೂ ನೀರು ಪೂರೈಸಿಲ್ಲ. ದಿನನಿತ್ಯ ನೀರಿಗಾಗಿ ಜನರು ಕಾಯುವಂತಾಗಿದೆ. ತಿಂಗಳಿಗೊಮ್ಮೆ ನೀರು ಬಿಟ್ಟರೂ ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ಪಕ್ಕದಲ್ಲೇ ಕುಂದುವಾಡ ಕೆರೆ ಇದ್ದರೂ ಸಹ ಕೆರೆಯ ನೀರಿನ ಭಾಗ್ಯ ಮಾತ್ರ ಸಿಗದೆ ಪರದಾಡುವಂತಾಗಿದೆ. ಕುಡಿಯಲು ಸಹ ನೀರಿಲ್ಲದೆ ಜನ, ಜಾನುವಾರುಗಳು ತತ್ತರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರು ಸಹ ನಿರ್ಲಕ್ಷ್ಯ ಮಾಡುತ್ತಾರೆ.

ಕುಂದುವಾಡ ಕೆರೆಯಿಂದ ಇಡೀ ದಾವಣಗೆರೆಗೆ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಪಕ್ಕದಲ್ಲಿಯೇ ಇರುವ ನಮಗೆ ಮಾತ್ರ ನೀರು ಕೊಡುತ್ತಿಲ್ಲ ಎಂದು ದೂರಿದರು.

ವಾರ್ಡ್‌ ಮೆಂಬರ್‌ ಗೆದ್ದ ಮೇಲೆ ಬಂದು ಹೋದರೆ ಹೊರತು ಇತ್ತ ಗಮನ ಹರಿಸಿಲ್ಲ. ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ. ಕುಡಿಯುವ ನೀರಿಲ್ಲದೆ ಹೊಲಗಳಲ್ಲಿರುವ ಬೋರ್‌ಗಳಿಂದ ನೀರು ತಂದುಕೊಂಡು ಜೀವನ ನಡೆಸಲಾಗುತ್ತಿದೆ. ಮಳೆಗಾಲದಲ್ಲೂ ಸಹ ನೀರಿಗಾಗಿ ಪರದಾಡಬೇಕಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಸಬೂಬು ಹೇಳಿ ಜಾರಿಕೊಳ್ಳುತ್ತಾರೆ. ದಾವಣಗೆರೆಯಲ್ಲಿ ವಾರಕ್ಕೆ ಎರಡು ದಿನ ಕುಡಿಯುವ ನೀರು ಬಿಡಲು ಸಿದ್ಧತೆ ನಡೆದರೂ ಹೊಸಕುಂದುವಾಡದಲ್ಲಿ ಒಂದು ತಿಂಗಳಾದರೂ ನೀರು ಪೂರೈಸುತ್ತಿಲ್ಲ. ಇನ್ನೆರಡು ದಿನಗಳಲ್ಲಿ ನೀರು ಪೂರೈಸದಿದ್ದಲ್ಲಿ ಮಹಾನಗರಪಾಲಿಕೆಗೆ ಮುತ್ತಿಗೆ ಹಾಕಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಾಗರಾಜಾಚಾರಿ,ನಾಗಪ್ಪ, ಗೋಪಾಲಪ್ಪ, ರಾಜು ಪೂಜಾರಿ, ಮೋಹನ್‌, ಮಲ್ಲಿಕಾರ್ಜುನ್‌, ಹರೀಶ್‌, ಪ್ರವೀಣ್‌, ರಘು, ಬಸವರಾಜ್‌ ಇತರರು ಇದ್ದರು. 

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.