ಲಸಿಕಾ ಅಭಿಯಾನ ಸಪ್ತಾಹಕ್ಕೆ ಚಾಲನೆ
Team Udayavani, Jul 3, 2021, 4:56 PM IST
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯವು ತನ್ನ ವ್ಯಾಪ್ತಿಯ ಎಲ್ಲ ಕಾಲೇಜು ಮತ್ತು ವಿಶ್ವವಿದ್ಯಾನಿಲಯದಲ್ಲಿ ಎರಡನೇ ಸುತ್ತಿನ ಕೋವಿಡ್ ಲಸಿಕಾ ಅಭಿಯಾನ ಸಪ್ತಾಹಕ್ಕೆ ಚಾಲನೆ ನೀಡಿತು. ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಮುಖ್ಯ ಆವರಣದಲ್ಲಿ ಏರ್ಪಡಿಸಿದ್ದ ಅಭಿಯಾನಕ್ಕೆ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,ಜೀವವಿದ್ದರೆ ಜೀವನ. ಬದುಕಿದರೆ ಭವಿಷ್ಯ ಎಂಬ ಸೂತ್ರ ಅರಿತು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡು ಆರೋಗ್ಯಕಾಪಾಡಿಕೊಳ್ಳಲು ಸ್ವಯಂ ಆಸಕ್ತಿಯಿಂದ ಮುಂದಾಗಬೇಕು ಎಂದು ಸಲಹೆ ನೀಡಿದರು.
ವಿಶ್ವವಿದ್ಯಾನಿಲಯಕ್ಕೆ ವಿದ್ಯಾರ್ಥಿಗಳು, ಪ್ರಾಧ್ಯಾಪಕರೇ ಆಸ್ತಿ. ಅವರ ಆರೋಗ್ಯ ರಕ್ಷಣೆ ಮಾಡುವುದು ವಿಶ್ವವಿದ್ಯಾನಿಲಯದ ಜವಾಬ್ದಾರಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳೂ ಸಹಪ್ರತಿಯೊಬ್ಬರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿದ್ದು, ಅದರ ಭಾಗವಾಗಿ ವಿಶ್ವವಿದ್ಯಾನಿಲಯ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ರಾಘವನ್ ಮಾತನಾಡಿ, ಕೊರೊನಾ-19ರ ಸಂದಿಗ್ಧ ಪರಿಸ್ಥಿತಿಯಲ್ಲಿ ಆರೋಗ್ಯ ಮತ್ತುಜೀವರಕ್ಷಣೆ ಬಹಳ ಮುಖ್ಯವಾಗಿದೆ. ಕೋವಿಡ್ ಲಸಿಕೆಯುಜೀವಾಪಾಯ ತಡೆಯಲು ನೆರವಾಗಲಿದ್ದು, ಅದಕ್ಕಾಗಿವಿಶ್ವವಿದ್ಯಾನಿಲಯದಲ್ಲಿ ಕಾರ್ಯಕ್ರಮ ಆಯೋಜಿಸಿದೆ. ಇದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಆರೋಗ್ಯ ದೃಷ್ಟಿಯಿಂದ ಹೆಚ್ಚುಸುರಕ್ಷಿತ ಎಂದರು. ವಿದ್ಯಾರ್ಥಿಗಳಿಗೆ ಪರೀಕ್ಷೆ ಏರ್ಪಡಿಸುವ ಮುನ್ನ ಲಸಿಕೆ ಹಾಕಿಸುವುದು ಮುಖ್ಯವಾಗಿದೆ. ಅವರ ಆರೋಗ್ಯರಕ್ಷಣೆಮತ್ತು ಕೋವಿಡ್ನಿಂದ ಸುರಕ್ಷತೆ ಪಡೆಯುವುದಕ್ಕೂ ಆದ್ಯತೆ ನೀಡಲಾಗಿದೆ. ಹೀಗಾಗಿ ಆಂದೋಲನದ ರೀತಿಯಲ್ಲಿ ಲಸಿಕೆ ಹಾಕಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪರೀಕ್ಷಾಂಗ ಕುಲಸಚಿವೆ ಪ್ರೊ.ಎಚ್.ಎಸ್. ಅನಿತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು