ತ್ಯಾಜ್ಯ ಪ್ರತ್ಯೇಕಿಸಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ


Team Udayavani, Jan 11, 2019, 6:47 AM IST

dvg-02.jpg

ದಾವಣಗೆರೆ: ನಗರದಲ್ಲಿ ನಿತ್ಯ ದೊರಕುವ ಹಸಿ ಮತ್ತು ಒಣ ಕಸದಿಂದ ಎರೆಹುಳು ಗೊಬ್ಬರ, ಗ್ಯಾಸ್‌ ಮುಂತಾದ ಉಪಯೋಗಕಾರಿ ವಸ್ತು ತಯಾರಿಸುವ ಸಂಬಂಧ ವ್ಯವಸ್ಥಿತವಾಗಿ ಕೈಗೊಂಡಿರುವ ತ್ಯಾಜ್ಯ ನಿರ್ವಹಣೆ ಕಾರ್ಯ ಯಶಸ್ವಿ ಆಗಲಿ ಎಂದು ಪಾಲಿಕೆ ಶೋಭಾ ಪಲ್ಲಾಗಟ್ಟೆ ಹೇಳಿದ್ದಾರೆ.

ಗುರುವಾರ, ಶಾಮನೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ದೇವನಗರಿ ಗ್ರೀನ್‌ ಪ್ಲಾನೆಟ್ ಇನ್‌ ಫ್ರಾ ಪ್ರೈವೇಟ್ ಲಿ, ಚಿರಂತನ್‌ ಇನ್‌ ಫ್ರಾ ಪ್ರೈವೇಟ್ ಲಿ. ಹಾಗೂ ಮಹಾನಗರಪಾಲಿಕೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಾಣಿಜ್ಯ ಮಳಿಗೆಗಳಿಂದ ಪ್ರತ್ಯೇಕಿಸಲಾದ ಕಸ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತ್ಯಾಜ್ಯ ನಿರ್ವಹಣೆಯೇ ಪಾಲಿಕೆಗೆ ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಸಂಸ್ಥೆಯವರು ಜನರಿಂದ ಬೇರ್ಪಡಿಸಿದ ಹಸಿ ಮತ್ತು ಒಣ ಕಸವನ್ನು ನಿತ್ಯ ಸಂಗ್ರಹಿಸಿ, ಹಸಿಕಸದಿಂದ ರೈತರಿಗೆ ಉಪಯೋಗವಾಗುವ ಎರೆಹುಳು ಗೊಬ್ಬರ ತಯಾರಿಸುತ್ತಿದ್ದಾರೆ. ವಾಹನಗಳಿಗೆ ಇಂಧನವಾಗಿ ಅಗತ್ಯವಿರುವ ಬಯೋ ಗ್ಯಾಸ್‌ ಉತ್ಪಾದಿಸುವ ಗುರಿ ಹೊಂದಿದ್ದಾರೆ. ಈ ಕಾರ್ಯ ಯಶಸ್ವಿಯಾಗಿ, ದಾವಣಗೆರೆ ಸ್ವಚ್ಛ ನಗರವಾಗಲಿ ಎಂದರು.

ಅನುದಾನದ ವಿಳಂಬದಿಂದಾಗಿ ರಸ್ತೆ ಕಾಮಗಾರಿಗಳು ಕುಂಠಿತವಾಗುತ್ತಿವೆ. ಮುಂದಿನ ದಿನಗಳಲ್ಲಿ ನಿಧಾನಗತಿಯಲ್ಲಾದರೂ ರಸ್ತೆ ಕಾಮಗಾರಿ ಗುಣಮಟ್ಟದಲ್ಲಿರಲಿದೆ. ಈಗಾಗಲೇ ನಗರದಲ್ಲಿ ದೊಡ್ಡ ದೊಡ್ಡ ಹಂದಿಗಳನ್ನು ಹಿಡಿದು, ಸ್ಥಳಾಂತರಿಸಲಾಗಿದೆ. ಸಣ್ಣ ಹಂದಿಗಳು ಹಾಗೆ ಉಳಿದಿವೆ. ಹಂದಿಗಳ ಸಂಖ್ಯೆ ಹೆಚ್ಚಾಗದಂತೆ ತೆರವು ಕಾರ್ಯ ಮುಂದುವರಿಯಲಿದೆ. ಇನ್ನು ಅಶೋಕ ರಸ್ತೆಯ ರೈಲ್ವೆಗೇಟ್ ಬಳಿ ನಿತ್ಯ ಟ್ರಾಫಿಕ್‌ ಕಿರಿಕಿರಿ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಈಚೆಗೆ ಸ್ಮಾರ್ಟ್‌ಸಿಟಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗಿದೆ ಎಂದು ಹೇಳಿದರು.

ಪಾಲಿಕೆ ಸದಸ್ಯ ಶಿವನಹಳ್ಳಿ ರಮೇಶ್‌ ಮಾತನಾಡಿ, ಹಿಂದೆ ಹಿರಿಯರು ದೇಶ ಐಕ್ಯತೆ ಹೊಂದಬೇಕು, ಎಲ್ಲೆಡೆ ಸಾಮರಸ್ಯ ಭಾವನೆ ಬೆಳೆಯಬೇಕು ಎನ್ನುವ ಮಹತ್ತರ ಉದ್ದೇಶ ಹೊಂದಿದ್ದರು. ಈಗ ದೇಶ ಬದಲಾವಣೆ ಆದಂತೆಲ್ಲಾ ಸಾಕಷ್ಟು ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡುತ್ತಿದೆ. ಶೇ.75ರಷ್ಟು ಯುವಕರು ಜಾಗೃತಿ ಹೊಂದಿದ್ದಾರೆ. ಸ್ವಚ್ಛ ಭಾರತ್‌ ಅಭಿಯಾನ ಎಲ್ಲೆಡೆ ಯಶಸ್ವಿ ಆಗುತ್ತಿದೆ. ಸಂಪೂರ್ಣ ಸ್ವಚ್ಛ ಹಾಗೂ ಪರಿಸರ ಸ್ನೇಹಿ ನಗರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.

ನಗರದಲ್ಲಿ ದೊರಕುವ ತ್ಯಾಜ್ಯವನ್ನು ತಂತ್ರಜ್ಞಾನದ ಯುಗಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಮರುಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛ ನಗರ ನಿರ್ಮಾಣಕ್ಕೆ ನಾಗರಿಕರ ಸಹಭಾಗಿತ್ವ ಅತ್ಯಂತ ಅಗತ್ಯ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಘನತ್ಯಾಜ್ಯವನ್ನು ಆವರಗೊಳ್ಳದ ಸುಮಾರು 33 ಎಕರೆ ಜಮೀನಿನಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಆದರೆ, ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ಆಗದೇ ಸಾಕಷ್ಟು ಸಮಸ್ಯೆ ಇತ್ತು. ಆದರೀಗ ಈ ಎರಡು ಖಾಸಗಿ ಸಂಸ್ಥೆಗಳ ನೆರವಿನಿಂದ ಹಸಿ ಮತ್ತು ಒಣ ಕಸ ಪ್ರತ್ಯೇಕಿಸಿ, ಕಸ ವಿಲೇವಾರಿ ಆಗುತ್ತಿದೆ ಎಂದು ತಿಳಿಸಿದರು.

ದೇವನಗರಿ ಗ್ರೀನ್‌ ಪ್ಲಾನೆಟ್ ಇನ್‌ಫ್ರಾ ಪ್ರೈವೇಟ್ ಲಿ.ನ ನಿರ್ದೇಶಕ ಬಿ.ಟಿ. ಧನ್ಯಕುಮಾರ್‌ ಮಾತನಾಡಿ, ಮಹಾನಗರಪಾಲಿಕೆ ವ್ಯಾಪ್ತಿಯ 21ರಿಂದ 41ನೇ ವಾರ್ಡಿನ ಎಲ್ಲಾ ವಾಣಿಜ್ಯೋದ್ಯಮ, ಅಂಗಡಿ ಮುಂಗಟ್ಟುಗಳು, ಹೋಟೆಲ್‌, ಲಾಡ್ಜ್, ಜ್ಯೂಸ್‌ ಸ್ಟಾಲ್‌ ಇತರೆ ಮಳಿಗೆಗಳಿಂದ ಉತ್ಪಾದನೆ ಆಗುವ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ಸಂಗ್ರಹಿಸಲಾಗುತ್ತಿದೆ. ಪ್ರತಿನಿತ್ಯ ದೊರಕುವ ತರಕಾರಿ, ಹಣ್ಣು, ಹೂವಿನಂತಹ ಹಸಿ ತ್ಯಾಜ್ಯವನ್ನು ಸಂಸ್ಕರಿಸಿ ಬಯೋ ಸಿಎನ್‌ಜಿ ಘಟಕ ನಿರ್ಮಿಸುವ ಯೋಜನೆ ಕಾರ್ಯರೂಪಕ್ಕೆ ತರುವ ಉದ್ದೇಶ ಇದೆ ಎಂದರು. ಕಸದ ವಿಲೇವಾರಿಗಾಗಿ ಈಗಾಗಲೇ 6 ಟ್ರ್ಯಾಕ್ಟ್ರ, 4 ಎಲೆಕ್ಟ್ರಿಕಲ್‌ ಆಟೋ ನಿಯೋಜಿಸಲಾಗಿದೆ. ಪ್ರತಿದಿನ ಹಸಿ ಕಸ ಹಾಗೂ ವಾರಕ್ಕೆ 2 ಬಾರಿ ಒಣ ಕಸ ಸಂಗ್ರಹಿಸಲಾಗುವುದು ಎಂದು ಹೇಳಿದರು.

ಚಿರಂತನ್‌ ಇನ್‌ ಫ್ರಾ ನಿರ್ದೇಶಕ ಎಂ.ಜಿ. ಜಗದೀಶ್‌ ಪಾಟೀಲ್‌, ಪಾಲಿಕೆ ಅಧಿಕಾರಿ ಡಾ| ಸುರೇಂದ್ರ ಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.