ದಾವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಿ


Team Udayavani, Aug 20, 2017, 4:43 PM IST

davangere 2.jpg

ಹರಿಹರ: ಬೆಂಗಳೂರಿನ ವಿಧಾನಸೌಧದ ಎದುರು ನೂತನವಾಗಿ ಸ್ಥಾಪಿಸಿರುವ ವಾಲ್ಮೀಕಿ ಮಹರ್ಷಿಗಳ ಪುತ್ಥಳಿ ಅ.5ರಂದು ಲೋಕಾರ್ಪಣೆಯಾಗಲಿದೆ. ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲೆಂದು ಮಠದಿಂದ ಜಾಗೃತಿ ಜ್ಯೋತಿ ಆರಂಭಿಸಲಾಗುವುದು ಎಂದು ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಹೇಳಿದರು. ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ತಮಿಳುನಾಡಿನ ಶಿಲ್ಪಿಗಳು ನಿರ್ಮಿಸಿರುವ ಕಪ್ಪು ಶಿಲೆಯ, 30 ಟನ್‌ ತೂಕದ, 22.5 ಅಡಿ ಎತ್ತರದ ಪುತ್ತಳಿ ವಿಧಾನಸೌಧದ ಪಶ್ಚಿಮ ಬಲಭಾಗದ ರಾಕ್‌ ಗಾರ್ಡ್‌ನ್‌ನಲ್ಲಿ ಸ್ಥಾಪಿಸಲಾಗುತ್ತಿದೆ ಎಂದರು.
ಉಗ್ರಪ್ಪ ಸೇರಿದಂತೆ ಸಮಾಜದ ಎಲ್ಲಾ ಜನಪ್ರತಿನಿಧಿಗಳ ಪರಿಶ್ರಮ ಹಾಗೂ ಕಾಂಗ್ರೆಸ್‌ ಸರ್ಕಾರದ ಸಹಕಾರದಿಂದ ಶಕ್ತಿಸೌಧದ ಎದುರು ಪುತ್ತಳಿ ಸ್ಥಾಪನೆ ಮಾತ್ರವಲ್ಲದೆ 1 ಕೋ.ರೂ. ವೆಚ್ಚದಲ್ಲಿ ಆ ಸ್ಥಳವನ್ನು ವಾಲ್ಮೀಕಿ ತಪೋವನವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶ್ರೀಗಳು ಮಾಹಿತಿ ನೀಡಿದರು. ದೇವೇಗೌಡರು ವಾಲ್ಮೀಕಿ ನಾಯಕ ಜನಾಂಗವನ್ನು ಎಸ್ಟಿ ವರ್ಗಕ್ಕೆ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಿದ್ದರೆ, ಯಡಿಯೂರಪ್ಪ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಆಚರಣೆಯಾಗಿಸಿ ರಜೆ ಮಂಜೂರು ಮಾಡಿದ್ದಾರೆ. ಸಮಾಜದ ಅಭಿವೃದ್ಧಿಗೆ ಎಲ್ಲಾ ಪಕ್ಷಗಳ ಕೊಡುಗೆ ನೀಡಿವೆ.
ಖಾಸಗಿ ಕ್ಷೇತ್ರದಲ್ಲೂ ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸಿದರೆ, ಎಲ್ಲಾ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗುತ್ತದೆ ಎಂದು ಹೇಳಿದರು. ಸಂಸದ ಶ್ರೀರಾಮುಲು ಮಾತನಾಡಿ, ಚಿತ್ರದುರ್ಗ ವಾಲ್ಮೀಕಿ ನಾಯಕ ಜನಾಂಗದ
ಪಾಳೆಗಾರರು ಆಳಿದ ನಾಡಾಗಿದ್ದರೆ, ದಾವಣಗೆರೆ ಜಿಲ್ಲೆಯಲ್ಲಿ ಸಮಾಜದ ಪೀಠವಿದೆ. ಇವೆರಡೂ ಜಿಲ್ಲಾ ವ್ಯಾಪ್ತಿಯ ದಾವಣಗೆರೆ ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕು ಎಂದು ಸಲಹೆ ನೀಡಿದರು. ಕಳೆದ ಬಿಜೆಪಿ ಅವ ಧಿಯಲ್ಲಿ ಸಮಾಜದ ನಾಲ್ವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಸಮಾಜದ 4-5 ಶಾಸಕರಿದ್ದರೂ ಕಾಂಗ್ರೆಸ್‌ ಸರ್ಕಾರ
ಒಂದೇ ಒಂದು ಸ್ಥಾನ ನೀಡಿಲ್ಲ. ಮುಖಂಡರು ಚುನಾವಣೆ ನಂತರ ಪಕ್ಷಬೇಧ ಮರೆತು ಕಷ್ಟದಲ್ಲಿ ಕಣ್ಣೀರು ಸುರಿಸುತಿರುವ ಸಮಾಜ ಬಾಂಧವರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ಮಾತನಾಡಿ, ರಾಜ್ಯದಲ್ಲಿ ಶೇ.16ರಷ್ಟು ವೀರಶೈವರು, 12ರಷ್ಟು ಮುಸ್ಲಿಮರು, ಶೇ.11 ರಷ್ಟು ಒಕ್ಕಲಿಗರಿದ್ದು, ನಂತರದಲ್ಲಿ ವಾಲ್ಮೀಕಿ ಜನಾಂಗದವರಿದ್ದಾರೆ. ಕಳೆದ 30 ವರ್ಷಗಳಿಂದ ಪ್ರತಿ ಸರ್ಕಾರದಲ್ಲೂ 7-8 ವೀರಶೈವರು, 8-10 ಒಕ್ಕಲಿಗರು ಸಚಿವರಾಗುತ್ತಿದ್ದು, ವಾಲ್ಮೀಕಿ ಸಮಾಜದವರಿಗೆ ಅವಕಾಶಗಳೇ ದೊರೆತಿಲ್ಲ.
ಇತಿಹಾಸದಲ್ಲಿ ಕೋಟೆ ಕೊತ್ತಲು ಕಟ್ಟಿ ಆಳ್ವಿಕೆ ನಡೆಸಿದ್ದ ಸಮಾಜಕ್ಕೆ ನ್ಯಾಯ ಮರೀಚಿಕೆಯಾಗಿದೆ ಎಂದರು.
ಶಾಸಕರಾದ ರಾಜೇಶ್‌, ರಘುಮೂರ್ತಿ, ಪ್ರತಾಪ್‌ಗೌಡ, ಮುಖಂಡರಾದ ಹೊದಿಗೆರೆ ರಮೇಶ್‌, ಜಿ.ಟಿ.ಚಂದ್ರಶೇಖರ, ನರಸಿಂಹಯ್ಯ, ಮೃತ್ಯುಂಜಯ, ಡಿ.ಎಂ.ಸಾಲಿ, ಮಲ್ಲೇಶಪ್ಪ, ಜಿಪಂ ಸದಸ್ಯ ಲೋಕೇಶ್‌, ಜಿ.ಕೆ.ಭೀಮಣ್ಣ,
ರಾಜುನಾಯಕ್‌, ಡಿ.ರತ್ನಾಕರ್‌, ಪ್ರಕಾಶ್‌, ಬಸವರಾಜ ನಾಯಕ್‌, ಹನುಮಂತ ನಾಯಕ್‌, ಅಶ್ವಥ್‌ ರಾಮಯ್ಯ, ಪುಷ್ಪಾ, ಬಳಿಗಾರ್‌, ಹದಡಿ ಹಾಲೇಶಪ್ಪ, ಪ್ರೊ| ಬಿ.ರಾಮಚಂದ್ರಪ್ಪ, ಕೆ.ಪಿ.ಪಾಲಯ್ಯ, ಓಬಳೇಶ್‌, ಮತ್ತಿತರರಿದ್ದರು

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.