ಶಿಕ್ಷಣ-ಸಂಸ್ಕಾರದಿಂದ ಉತ್ತಮ ಭವಿಷ್ಯ


Team Udayavani, Feb 13, 2017, 1:18 PM IST

dvg6.jpg

ಹರಿಹರ: ಚಿಕ್ಕಂದಿನಲ್ಲೇ ಮಕ್ಕಳಿಗೆ ಪೋಷಕರು ಶ್ರೇಷ್ಠ ಶಿಕ್ಷಣ, ಸಂಸ್ಕಾರ ನೀಡಿದರೆ ಮಾತ್ರ ಅವರು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಾಣೇಹಳ್ಳಿ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. 

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳ ಪ್ರವಚನ ಮಾಲಿಕೆ ನಡೆಯುತ್ತಿರುವ ನಗರದ ಗಿರಿಯಮ್ಮ ಪದವಿ ಕಾಲೇಜು ಆವರಣದಲ್ಲಿ ಭಾನುವಾರ ಸಿದ್ದೇಶ್ವರ ಶ್ರೀಗಳ ಬಳಗ ಮತ್ತು ದೊಡ್ಡಬಾತಿ ತಪೋವನ ಆಯುರ್ವೇದ ಮೆಡಿಕಲ್‌ ಕಾಲೇಜು ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರಕ್ಕೆ ಸಸಿಗಳಿಗೆ  ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಬಹುತೇಕ ಪೋಷಕರು ಕೇವಲ ಶಾಲಾ- ಲೇಜುಗಳಲ್ಲಿ ದೊರೆಯುವ ಲೌಕಿಕ ಶಿಕ್ಷಣವನ್ನೇ ಅವಲಂಬಿಸಿರುತ್ತಾರೆ. ಇದರಿಂದ ಮಕ್ಕಳು ಉತ್ತಮ ಅಂಕ ಗಳಿಸಿ, ಒಳ್ಳೆಯ ಉದ್ಯೋಗ ನಂತರ ಹಣವನ್ನೂ ಸಂಪಾದನೆ ಮಾಡಬಹುದು. ಆದರೆ, ಬದುಕಿನಲ್ಲಿ ನೆಮ್ಮದಿಯಿಂದ ಇರುತ್ತಾರೆ ಎಂಬುದು ಖಾತ್ರಿಯಿಲ್ಲ ಎಂದರು. ಶಾಲಾ ಶಿಕ್ಷಣದ ಜತೆಗೆ ಪೋಷಕರು ಮಕ್ಕಳಿಗೆ ಸಚ್ಚಾರಿತ್ರ, ಸದ್ಭಾವನೆ ರೂಢಿಸಿಕೊಳ್ಳುವಂತಹ ನೈತಿಕ ಶಿಕ್ಷಣವನ್ನೂ ನೀಡಬೇಕು.

ನಗರದಲ್ಲಿ ಆಯೋಜಿಸಿರುವ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಪ್ರವಚನ ಇದಕ್ಕೆ ಅತ್ಯುತ್ತಮ ಅವಕಾಶವಾಗಿದೆ. ಯಾವುದೇ ಜಾತಿ, ಧರ್ಮಗಳಿಗೆ ಸೀಮಿತವಾಗದ ಶ್ರೀಗಳ ಪ್ರವಚನ ಪ್ರತಿಯೊಬ್ಬರಿಗೂ ಅತ್ಯುತ್ತಮ ರೀತಿಯಲ್ಲಿ ಬದುಕುವುದನ್ನು ಕಲಿಸಿಕೊಡುತ್ತದೆ ಎಂದರು.

ಮನುಷ್ಯ ದೈಹಿಕ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕವಾಗಿ ಬಲಿಷ್ಠನಾಗಿದ್ದರೆ ಮಾತ್ರ ಬದುಕಿನಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಸರ್ವ ರೀತಿಯಲ್ಲಿ ಸಮರ್ಥಗೊಳಿಸುವ ಶಕ್ತಿ ಇರುವ ಶ್ರೀಗಳ ಪ್ರವಚನವನ್ನು ಕುಟುಂಬದ ಎಲ್ಲ ಸದಸ್ಯರೂ ಬಂದು ಕೇಳಿದರೆ ಶ್ರೀಗಳ ಹಿತವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು. 

ತಪೋವನ ಆಯುರ್ವೇದ ಆಸ್ಪತ್ರೆಯ ವೈದ್ಯರ ತಂಡ ಪ್ರವಚನಕ್ಕೆ ಕೇಳಲು ಆಗಮಿಸಿದ್ದ ಸಾವಿರಾರು ಭಕ್ತ ಜನರ ಆರೋಗ್ಯ ತಪಾಸಣೆ ನಡೆಸಿ ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡಿದರು. ಸಿದ್ದೇಶ್ವರ ಶ್ರೀಗಳು, ಸೇವಾ ಬಳಗದ ಗೌರವಾಧ್ಯಕ್ಷ ಎನ್‌.ಜಿ. ನಾಗನಗೌಡ, ಅಧ್ಯಕ್ಷ ಶರತ್‌ ಕೊಣ್ಣೂರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಎಚ್‌. ಪ್ಯಾಟಿ, ದಿನೇಶ್‌ ಕೊಣ್ಣೂರ್‌, ಆರ್‌. ಪ್ರಕಾಶ್‌, ಬೆಳ್ಳೂಡಿ ರಾಮಚಂದ್ರಪ್ಪ, ಆರ್‌.ಆರ್‌. ಕಾಂತರಾಜ್‌ ಶ್ರೇಷ್ಠಿ, ಎಂ.ಆರ್‌. ಸತ್ಯನಾರಾಯಣ, ತಪೋವನದ ಅಧ್ಯಕ್ಷ ಶಶಿಕುಮಾರ್‌ ಮತ್ತಿತತರಿದ್ದರು.  

Ad

ಟಾಪ್ ನ್ಯೂಸ್

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

BJP: Arvind Limbavali expresses displeasure against Yediyurappa

BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ

Dvg-Fruad

ಮ್ಯಾಟ್ರಿಮೊನಿ ಆ್ಯಪ್‌ನಿಂದ ಪರಿಚಯವಾದ ಯುವತಿಯಿಂದ ಟೆಕ್ಕಿಗೆ 9.34 ಲಕ್ಷ ರೂಪಾಯಿ ವಂಚನೆ!

1-aa-aa-kalla

Davangere:ಅಪಘಾತದಲ್ಲಿ ಹೆಡ್ ಕಾನ್ ಸ್ಟೇಬಲ್ ಮೃ*ತ್ಯು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.