ಹುಳುಬಾಧೆಯಿಂದ ಬೆಳೆನಷ್ಟ-ಸೂಕ್ತ ಪರಿಹಾರಕ್ಕೆ ಯತ್ನ


Team Udayavani, Oct 5, 2017, 2:30 PM IST

05-STTAE-6.jpg

ದಾವಣಗೆರೆ: ಸೈನಿಕ ಹುಳು ಬಾಧೆಯಿಂದ ಹಾನಿಗೊಳಗಾಗಿರುವ ಮೆಳ್ಳೆಕಟ್ಟೆ, ಅಣಜಿ, ಹುಲಿಕಟ್ಟೆ, ಹೆಮ್ಮನಬೇತೂರು, ಗಾಂಧಿನಗರದ ರೈತರ ಹೊಲಗಳಿಗೆ ಬುಧವಾರ ಸಂಸದ ಜಿ.ಎಂ. ಸಿದ್ದೇಶ್ವರ್‌ ಭೇಟಿ ನೀಡಿ, ಪರಿಶೀಲಿಸಿ, ಸೂಕ್ತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಪ್ರಕೃತಿಯ ಮುನಿಸಿಗೆ ಯಾರೂ ಕೂಡ ಹೊಣೆಯಲ್ಲ. ಕೈಗೆ ಬಂದ ಮೆಕ್ಕೆಜೋಳ ಬೆಳೆಗೆ ಅನಿರೀಕ್ಷಿತ ಕೀಟಗಳ ಹಾವಳಿ ಯಾರೂ ಕೂಡ ಕಲ್ಪನೆ ಮಾಡಿಕೊಂಡಿರಲಿಲ್ಲ. ರಾತ್ರೋ ರಾತ್ರಿ ಸೈನಿಕ ಹುಳಗಳ ದಾಳಿ ವಿಪರೀತ ನಷ್ಟ ಉಂಟು ಮಾಡಿದೆ. ಮನೆಯಲ್ಲಿ ದುಡಿಯುವ ಮಗನನ್ನು ಕಳೆದುಕೊಂಡಷ್ಟೇ ನೋವು ಮೆಕ್ಕೆಜೋಳದ ಬೆಳೆ ಕಳೆದುಕೊಂಡ ರೈತರಿಗೆ ಆಗಿದೆ. ನಾನೂ ಕೂಡ ರೈತನಾಗಿರುವುದರಿಂದ ರೈತರ ಕಷ್ಟ ಅರ್ಥಮಾಡಿಕೊಳ್ಳಬಲ್ಲೆ. ಯಾವ ರೈತರು ಕೂಡ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಅವರು ರೈತರಿಗೆ ಧೈರ್ಯ ತುಂಬಿದರು.

ಬೆಳೆ ಕಟಾವು ಆಧರಿಸಿ ಸೂಕ್ತ ಪರಿಹಾರ ದೊರಕಿಸಿಕೊಡುವ ಸರ್ವ ಪ್ರಯತ್ನ ಮಾಡುತ್ತೇವೆ. ಜಿಲ್ಲೆಯ ಎಲ್ಲಾ ಮಾಜಿ ಶಾಸಕರು ಒಟ್ಟುಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಕೃಷ್ಣ ಭೈರೇಗೌಡರನ್ನ ಭೇಟಿ ಮಾಡಿ ಹಾನಿಗೊಳಗಾದ ರೈತರ ಬವಣೆ ವಿವರಿಸಿ, ಸೂಕ್ತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಬೆಳೆ ಕಟಾವಿನ ಸಂದರ್ಭದಲ್ಲಿ ಕೃಷಿ, ಸಾಂಖೀಕ, ಕಂದಾಯ ಇಲಾಖೆ ಅಧಿಕಾರಿಗಳು ಖುದ್ದು ರೈತರ ಜಮೀನುಗಳಿಗೆ ಭೇಟಿ ನೀಡಿ ಸರಿಯಾದ ರೀತಿಯಲ್ಲಿ ವರದಿ ನೀಡಬೇಕು. ಬಹುತೇಕ ಅಧಿ ಕಾರಿಗಳೂ ಕೂಡ ರೈತರ ಮಕ್ಕಳಾಗಿರುವುದರಿಂದ ರೈತರ ಸಂಕಷ್ಟ ಅರ್ಥಮಾಡಿಕೊಂಡು ಅಧಿಕಾರದ ಜೊತೆ ಮಾನವೀಯತೆಯನ್ನೂ ಸಹ ಅಳವಡಿಸಿಕೊಂಡು ವರದಿ ನೀಡುವಂತೆ ಹೇಳಿದರು.

ಸಂಸದರ ಜೊತೆಗಿದ್ದ ಕೃಷಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ಅಧಿಕಾರಿಗಳು ಸೈನಿಕ ಹುಳುಗಳ ದಾಳಿ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಮಾಹಿತಿ ನೀಡಿದರು. ಮಾಜಿ ಶಾಸಕರಾದ ಎಸ್‌.ವಿ. ರಾಮಚಂದ್ರಪ್ಪ, ಎಂ. ಬಸವರಾಜನಾಯ್ಕ, ಜಿಲ್ಲಾ ಪಂಚಾಯತಿ ಸದಸ್ಯರಾದ ಕೆಂಚಮ್ಮನಹಳ್ಳಿ ಮಂಜುನಾಥ್‌, ಸವಿತಾ ಕಲ್ಲೇಶಪ್ಪ, ಮಾಜಿ ಸದಸ್ಯ ಸೊಕ್ಕೆ ನಾಗರಾಜ್‌, ತಾಲೂಕು ಪಂಚಾಯತಿ ಸದಸ್ಯ ಆಲೂರು ನಿಂಗರಾಜ್‌, ಮುಖಂಡರಾದ ಎಚ್‌. ಆನಂದಪ್ಪ, ಪ್ರೊ. ಎನ್‌. ಲಿಂಗಣ್ಣ, ಎಚ್‌.ಕೆ. ಬಸವರಾಜ್‌, ಸೋಮನಹಳ್ಳಿ ಸೀನಣ್ಣ, ಮೆಳ್ಳೆಕಟ್ಟೆ ಹನುಮಂತಪ್ಪ ಇತರರು ಇದ್ದರು.

ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಗೀತಾ ಗಂಗಾನಾಯ್ಕ ಇತರರಿದ್ದರು.

ಕೆರೆ ಕೋಡಿ ಪರಿಶೀಲನೆ
ಸಂಸದ ಸಿದ್ದೇಶ್ವರ್‌ ಜಗಳೂರು ತಾಲೂಕಿನ ಚಿಕ್ಕಅರಕೆರೆ ಗ್ರಾಮದ ಕೆರೆಯ ಕೋಡಿ ಪರಿಶೀಲಿಸಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ವತಿಯಿಂದ 1.5 ಕೋಟಿ ವೆಚ್ಚದಲ್ಲಿ ಕೆರೆ ಕೋಡಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಸಣ್ಣ ನೀರಾವರಿ ಇಲಾಖೆಯ ಅಧಿ ಕಾರಿಗಳ ನಿರ್ಲಕ್ಷತೆಯಿಂದಾಗಿ ಕಾಮಗಾರಿ ಅತ್ಯಂತ ಕಳಪೆಯಾಗಿದೆ. ಕಳೆದ 15 ದಿನದಲ್ಲಿ ಮೂರು ಬಾರಿ ತುಂಬಿದ ಕೆರೆಯ ನೀರೆಲ್ಲಾ ಬಸಿದು ಖಾಲಿಯಾಗಿದೆ, ಕೆರೆ ತುಂಬುವುದೇ ಕಷ್ಟವಾಗಿರುವ ಕಾಲದಲ್ಲಿ ಗುತ್ತಿಗೆದಾರರ ಮತ್ತು ಸಣ್ಣ ನೀರಾವರಿ ಇಲಾಖೆಯ ಅ ಧಿಕಾರಿಗಳ ಬೇಜವಾರಿಯಿಂದಾಗಿ ರೈತರಿಗೆ ದ್ರೋಹ ಬಗೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸೋಮಶೇಖರ್‌ರವರಿಗೆ ದೂರವಾಣಿ ಮುಖಾಂತರ ಮಾತನಾಡಿದ ಸಂಸದ ಸಿದ್ದೇಶ್ವರ್‌, ಕೆರೆ ಕೋಡಿ ಕಾಮಗಾರಿಯನ್ನು ಕೂಡಲೇ ಪರಿಶೀಲಿಸಿ ಆಗಿರುವ ಲೋಪವನ್ನ ಸರಿಪಡಿಸುವುದರೊಂದಿಗೆ ಗುತ್ತಿಗೆದಾರರಿಗೆ ಯಾವುದೇ ಕಾರಣಕ್ಕೂ ಬಿಲ್‌ ನೀಡದಂತೆ ತಾಕೀತು ಮಾಡಿದರು.

ಗಾಂಧಿನಗರಕ್ಕೆ ಭೇಟಿ
ದಾವಣಗೆರೆ ತಾಲೂಕಿನ ಗಾಂಧಿ ನಗರದಲ್ಲಿ ಕಳೆದ 4-5 ತಿಂಗಳ ಹಿಂದೆ ಉಂಟಾಗಿರುವ ಭೂಕುಸಿತ ಪ್ರದೇಶವನ್ನು ಸಂಸದ ಜಿ.ಎಂ. ಸಿದ್ದೇಶ್ವರ್‌ ವೀಕ್ಷಿಸಿದರು. ಭೂಕುಸಿತದಿಂದ ಗ್ರಾಮದಲ್ಲಿ ಸಾಕಷ್ಟು ಆಳದ ಗುಂಡಿಗಳು ಉಂಟಾಗಿದ್ದು, ಮನೆಗಳು ಬಿರುಕುಬಿಟ್ಟಿವೆ, ಜಗಳೂರು-ದಾವಣಗೆರೆ ರಸ್ತೆ ಸುಮಾರು 100 ಮೀಟರ್‌ನಷ್ಟು ಕುಸಿದಿದೆ. ಸಾಕಷ್ಟು ಜನರು ಅಫಘಾತಕ್ಕೊಳಗಾಗಿದ್ದಾರೆ. ವಿಷಯ ಹೀಗಿದ್ದರೂ ಕೂಡ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಸಂಸದರಿಗೆ ತಿಳಿಸಿದರು. ಕೂಡಲೇ ದಾವಣಗೆರೆ ತಹಶೀಲ್ದಾರರಿಗೆ ದೂರವಾಣಿ ಮುಖಾಂತರ ಮಾತನಾಡಿದ ಸಂಸದರು ಗುರುವಾರೇ ಗಾಂಧಿ ನಗರಕ್ಕೆ ಭೇಟಿ ನೀಡಿ ಆಗಿರುವ ಭೂಕುಸಿತದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.