ನ್ಯಾಯಾಲಯದಲ್ಲಿ ಕುಸಿದು ಬಿದ್ದ ವೃದ್ಧೆ: ಸಕಾಲಿಕ ಚಿಕಿತ್ಸೆ ನೀಡಿದ ಜಿಲ್ಲಾಧಿಕಾರಿ
ಮಾನವೀಯತೆ ಮೆರೆದ ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್
Team Udayavani, Jul 28, 2023, 8:40 PM IST
ದಾವಣಗೆರೆ: ನ್ಯಾಯಾಲಯದ ವಿಚಾರಣೆಗೆ ಆಗಮಿಸಿದ್ದ ವೃದ್ಧೆಯೋರ್ವಳು ಸ್ಥಳದಲ್ಲಿಯೇ ಕುಸಿದು ಬಿದ್ದಾಗ ಜಿಲ್ಲಾಧಿಕಾರಿಯವರು ಕೂಡಲೇ ಆಕೆಗೆ ಪ್ರಥಮ ಚಿಕಿತ್ಸೆ ನೀಡಿ, ವೃದ್ಧೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಮಾನವೀಯ ಘಟನೆ ಶುಕ್ರವಾರ ನಗರದಲ್ಲಿ ಸಂಭವಿಸಿತು.
ಹಾವೇರಿ ಜಿಲ್ಲೆಯ 73 ವರ್ಷದ ಮುರಿಗೆಮ್ಮ ಕೋಂ. ಧರ್ಮಪ್ಪ ಎಂಬ ವೃದ್ಧೆ ವಿಚಾರಣೆಗಾಗಿ ಶುಕ್ರವಾರ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಕೋರ್ಟ್ಗೆ ಆಗಮಿಸಿದ್ದಳು. ವಿಚಾರಣೆಗಾಗಿ ಆಗಮಿಸಿದ್ದ ವೃದ್ಧೆ ಇದ್ದಕ್ಕಿದ್ದಂತೆ ಕೋರ್ಟ್ ಆವರಣದಲ್ಲಿಯೇ ಕುಸಿದು ಬಿದ್ದರು. ಅಲ್ಲಿಯೇ ಇದ್ದ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಸ್ವತಃ ವೈದ್ಯರಾಗಿರುವುದರಿಂದ ಕೂಡಲೇ ಧಾವಿಸಿ, ವೃದ್ಧೆಯ ಆರೋಗ್ಯ ಪರಿಶೀಲಿಸಿ, ಪ್ರಥಮ ಚಿಕಿತ್ಸೆ ನೀಡಿದರು. ಚೇತರಿಸಿಕೊಂಡ ಬಳಿಕ ಆಕೆಗೆ ಆಸ್ಪತ್ರೆಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ
Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ