ಮಾ.4ರಂದು ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಉದ್ಘಾಟನೆ: ಮುಖ್ಯಮಂತ್ರಿ ಚಂದ್ರು
Team Udayavani, Feb 26, 2023, 12:27 PM IST
ದಾವಣಗೆರೆ: ಆಮ್ ಆದ್ಮಿ ಪಾರ್ಟಿಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರದ ಉದ್ಘಾಟನಾ ಸಮಾರಂಭ ಮಾ.4 ರಂದು ದಾವಣಗೆರೆಯಲ್ಲಿ ನಡೆಯಲಿದೆ ಎಂದು ಪಕ್ಷದ ಪ್ರಚಾರ ಸಮಿತಿ ರಾಜ್ಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಶನಿವಾರ ಬೆಳಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವತ್ಸಿಂಗ್ ಮಾನ್ ಇತರರು ಭಾಗವಹಿಸುವರು ಎಂದರು.
ಆಮ್ ಆದ್ಮಿ ಪಾರ್ಟಿ ಈಗ ದೇಶದ 9ನೇ ರಾಷ್ಟ್ರೀಯ ಪಕ್ಷವಾಗಿದೆ. ಕಾನೂನಾತ್ಮಕವಾಗಿ ಘೋಷಣೆ ಆಗಬೇಕಿದೆ. ರಾಜ್ಯ ವಿಧಾನಸಭೆಯ ಎಲ್ಲ 224 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಲಾಗಿದೆ. ಕರ್ನಾಟಕದಲ್ಲಿ ಆಪ್ ಶೂನ್ಯದಿಂದ ಪ್ರಾರಂಭವಾಗಬೇಕಿದೆ. ಹಾಗಾಗಿ ಇಂತಿಷ್ಟೇ ಸ್ಥಾನ ಗೆಲ್ಲುತ್ತೇವೆ ಎಂದು ಹೇಳಲಿಕ್ಕೆ ಆಗುವುದಿಲ್ಲ. ಆಂಧ್ರಪ್ರದೇಶದಲ್ಲಿ ಎನ್.ಟಿ. ರಾಮರಾವ್, ಅಸ್ಸಾಂನಲ್ಲಿ ಅಸ್ಸಾಂ ಗಣ ಪರಿಷದ್, ತಮಿಳುನಾಡಿನಲ್ಲಿ ಜಯ ಲಲಿತ ಪಕ್ಷ ಪ್ರಾರಂಭಿಸಿದಾಗ ಏನೂ ಇರಲಿಲ್ಲ, ಅಧಿಕಾರಕ್ಕೆ ಬಂದರು. ಅದೇ ರೀತಿ ಇಲ್ಲೂ ಆಗಬಹುದು. 20 ಸ್ಥಾನ ಗೆಲ್ಲಬಹುದು. ಸ್ವೀಪ್ ಸಹ ಮಾಡಬಹುದು. ಕಾಂಪೌಂಡ್ ಮೇಲೆ ನಿಂತಿರುವ ಜೆಡಿಎಸ್ಗಿಂತಲೂ ಉತ್ತಮ ನಿರ್ವಹಣೆ ಮಾಡಲಿದ್ದೇವೆ ಎಂದು ತಿಳಿಸಿದರು.
ಜೆಸಿಬಿ (ಜನತಾದಳ, ಕಾಂಗ್ರೆಸ್, ಬಿಜೆಪಿ) ಆಡಳಿತದಲ್ಲಿ ಆಗಿರುವ ಲೋಪದೋಷ, ಸಮಸ್ಯೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದಲೇ ಕೇಜ್ರಿವಾಲ್ ದಾವಣಗೆರೆಗೆ ಆಗಮಿಸುತ್ತಿದ್ದಾರೆ. ಮೂರು ಪಕ್ಷದ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಪರ್ಯಾಯ, ಸ್ವಚ್ಛ, ಶುದ್ಧ ಆಡಳಿತ ನೋಡುತ್ತಿದ್ದಾರೆ. ಆಮ್ ಆದ್ಮಿ ಪಾರ್ಟಿಯೇ ಸೂಕ್ತ ಪರಿಹಾರ. ನಮ್ಮ ಪಕ್ಷದ ಗುರುತು ಪೊರಕೆ ಎಂದರೆ ಬರೀ ಕಸ ಗುಡಿಸುವುದು, ಸ್ವಚ್ಛ ಮಾಡುವುದಲ್ಲ. ರಾಜಕೀಯ ಸ್ವಚ್ಚತೆ ನಮ್ಮ ಗುರಿ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದರ ಬಗ್ಗೆ ಮಾ. 4ರ ಬೃಹತ್ ಸಮಾವೇಶ, ಟಿಕೆಟ್ ಹಂಚಿಕೆ ನಂತರ ಚರ್ಚೆ ಮಾಡಲಾಗುವುದು. ಘೋಷಣೆ ಆಗಬಹುದು. ಆಗದಿರಬಹುದು. ಎಲ್ಲವೂ ಮಾ. 4ರ ನಂತರವೇ ಚರ್ಚೆಗೆ ಬರಲಿದೆ ಎಂದು ತಿಳಿಸಿದರು.ಪ್ರಧಾನ ಕಾರ್ಯದರ್ಶಿ ರುದ್ರಯ್ಯ ಹಿರೇಮಠ್, ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಬಸವಂತಪ್ಪ, ಆದಿಲ್ ಖಾನ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ
Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ