ಇಂಜಿನಿಯರ್ ವೃತ್ತಿಗಿದೆ ಅತ್ಯುನ್ನತ ಗೌರವ
Team Udayavani, Sep 16, 2017, 10:01 AM IST
ಜಗಳೂರು: ಸಮಾಜದಲ್ಲಿ ಇಂಜಿನಿಯರ್ ವೃತ್ತಿಗೆ ತನ್ನದೇ ಆದ ಗೌರವವಿದೆ. ಹೀಗಾಗಿ ನಿರ್ವಹಿಸುವ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲ ಅಭಿಯಂತರ ಚಂದ್ರಶೇಖರ್ ಕರೆ ನೀಡಿದರು.ಇಲ್ಲಿನ ಜಿಪಂ ಇಂಜಿನಿಯರಿಂಗ್ ಕಚೇರಿಯಲ್ಲಿ ಇಂಜಿನಿಯರ್ ದಿನಾಚರಣೆಯ ಅಂಗವಾಗಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಸರ್.ಎಂ.ವಿಶ್ವೇಶ್ವರಯ್ಯನವರು ತಮ್ಮ ವೃತ್ತಿಯಲ್ಲಿ ದಕ್ಷತೆ ಮತ್ತು ಪ್ರಾಮಾಣಕತೆ ಮೆರೆಯುವುದರ ಮೂಲಕ ಇಂಜಿನಿಯರ್ ವೃತ್ತಿಗೆ ಗೌರವ ತಂದುಕೊಟ್ಟರು. ಕೆಆರ್ಎಸ್ನಂತಹ ಬೃಹತ್ ನೀರಾವರಿ ಕಾಮಗಾರಿಗಳು ಅವರ ಪ್ರತಿಭೆಗೆ ನಿದರ್ಶನವಾಗಿವೆ. ಅವರ ತಾಂತ್ರಿಕತೆಯ ಕೌಶಲ್ಯವನ್ನು ವಿಶ್ವವೇ ಇತ್ತ ತಿರುಗಿ ನೊಡುವಂತೆ ಮಾಡಿದೆ ಎಂದರು.
ತಾಪಂ ಸದಸ್ಯ ಶಂಕರ್ನಾಯ್ಕ ಮಾತನಾಡಿ ಸರ್ ಎಂ.ವಿಶ್ವೇಶ್ವರಯ್ಯನವರು ಸೇವಾ ಮನೋಭಾವನೆ ಹೊಂದಿದ್ದರು. ತಮ್ಮ ಜೀವಿತಾವಧಿ ಯಲ್ಲಿ ಅವರೆಂದು ಲಾಭವನ್ನು ನಿರೀಕ್ಷಿಸಲಿಲ್ಲ. ಅಂತಹ ದಕ್ಷ ಪ್ರಾಮಾಣಿಕರ ಹೆಸರಿನಲ್ಲಿ ಇಂಜಿನಿಯರ್ ದಿನಾಚರಣೆ ಆಚರಿಸುತ್ತಿರುವುದು ಸ್ವಾಗತಾರ್ಹ ಎಂದರು.
ಸಹಾಯಕ ಇಂಜಿನಿಯರ್ಗಳಾದ ಮಹಾಂತೇಶ್, ದಯಾನಂದಸ್ವಾಮಿ, ಕಿರಿಯ ಇಂಜಿನಿಯರ್ಗಳಾದ ಮಂಜುನಾಥ್, ನಂದೀಶ್, ನಾಗರಾಜ್, ಹನುಮಂತಪ್ಪ, ಸಿಬ್ಬಂದಿ ಹುಲಿಯಪ್ಪ ರೆಡ್ಡಿ, ಖಾದರ್ ಸಾಬ್, ಗೋವಿಂದರೆಡ್ಡಿ, ಮಲ್ಲಿಕಾರ್ಜುನ, ತಿಪ್ಪೇಸ್ವಾಮಿ, ಗುತ್ತಿಗೆದಾರರಾದ ಹಾಲೇಶ್, ಮಾರಪ್ಪನಾಯಕ, ಪಟೇಲ್ ಮಾರಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ