ಸುರಕ್ಷಾ ಕ್ರಮದೊಂದಿಗೆ ಆಂಗ್ಲ ಭಾಷಾ ಪರೀಕ್ಷೆ


Team Udayavani, Jun 17, 2020, 8:35 AM IST

ಸುರಕ್ಷಾ ಕ್ರಮದೊಂದಿಗೆ ಆಂಗ್ಲ ಭಾಷಾ ಪರೀಕ್ಷೆ

ದಾವಣಗೆರೆ: ಕೋವಿಡ್ ವೈರಸ್‌ ದಾಳಿ ಹಿನ್ನೆಲೆ, ಲಾಕ್‌ಡೌನ್‌ನಿಂದ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆ ಜೂ. 18 ರಂದು ನಡೆಯಲಿದ್ದು, ಜಿಲ್ಲೆಯ 16,081 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಮಾ. 4 ರಿಂದ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಮಾ. 23 ರಂದು ನಿಗದಿಯಾಗಿದ್ದ ಇಂಗ್ಲಿಷ್‌ ವಿಷಯ ಪರೀಕ್ಷೆಗೆ ಒಂದು ದಿನದ ಮುನ್ನ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಇಂಜಿನಿಯರಿಂಗ್‌, ವೈದ್ಯಕೀಯ, ಪಶು ವೈದ್ಯಕೀಯ ಒಳಗೊಂಡಂತೆ ಇತರೆ ವೃತ್ತಿಪರ ಕೋರ್ಸ್‌ಗೆ ಸೇರುವ ಗುರಿ ಹೊಂದಿರುವ ವಿದ್ಯಾರ್ಥಿಗಳು ಆಂಗ್ಲ ಭಾಷೆಯ ಪರೀಕ್ಷೆ ಬರೆಯದೆ ಪರೀಕ್ಷೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದರು. ಈಗ ಪರೀಕ್ಷೆಗೆ ಕಾಲ ಕೂಡಿ ಬಂದಿದೆ.

ಲಾಕ್‌ಡೌನ್‌ ತೆರವಿನ ನಂತರ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಹೆಚ್ಚಳದ   ನಡುವೆಯೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದೆ. ಕೋವಿಡ್‌-19 ನಿಯಂತ್ರಣದ ನಿಟ್ಟಿನಲ್ಲಿ ವಿದ್ಯಾರ್ಥಿìಗಳ ಕ್ಷೇಮಕ್ಕಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾಡಳಿತ ಸಹಕಾರದಿಂದ ಸ್ವತ್ಛತೆ ಮತ್ತು ಸ್ಯಾನಿಟೇಷನ್‌ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಯ್ದಿರಿಸಲು 1 ಮೀಟರ್‌ ಅಂತರದಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗದು ಎಂಬ ಉದ್ದೇಶದಿಂದ ಎಲ್ಲಾ ಗ್ರಾಮೀಣ ಪ್ರದೇಶಗಳಿಂದ ಸಾರಿಗೆ ವ್ಯವಸ್ಥೆಯನ್ನು 14 ಮಾರ್ಗವಾಗಿ ಕಲ್ಪಿಸಲಾಗಿದೆ. ದಾವಣಗೆರೆ ತಾಲೂಕಿನಲ್ಲಿ ಒಟ್ಟಾರೆ 9,375, ಹರಿಹರದಲ್ಲಿ 1,797, ಜಗಳೂರಿನಲ್ಲಿ 1,286, ಹೊನ್ನಾಳಿಯಲ್ಲಿ 1,620, ಚನ್ನಗಿರಿಯಲ್ಲಿ 1,932 ವಿದ್ಯಾರ್ಥಿಗಳು ಆಂಗ್ಲ ಭಾಷಾ ಪರೀಕ್ಷೆ ಬರೆಯಲಿದ್ದಾರೆ.

ದಾವಣಗೆರೆ ನಗರದಲ್ಲಿ 16, ತಾಲೂಕಿನ ಆನಗೋಡು ಗ್ರಾಮದಲ್ಲಿ ಒಂದು ಪರೀಕ್ಷಾ ಕೇಂದ್ರ ಒಳಗೊಂಡಂತೆ ಒಟ್ಟು 17 ಕೇಂದ್ರಗಳಿವೆ. ಜಿಲ್ಲೆಯಲ್ಲಿ ಮೊದಲು 31 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ 5 ವಿಷಯಗಳ ಪರೀಕ್ಷೆ ನಡೆಸಲಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕಾದ ಹಿನ್ನೆಲೆಯಲ್ಲಿ 15 ಬ್ಲಾಕ್‌ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಕೊರೊನಾ, ಲಾಕ್‌ಡೌನ್‌ ಮುನ್ನ 31 ಪರೀಕ್ಷಾ ಕೇಂದ್ರಗಳಲ್ಲಿ 794 ಕೊಠಡಿ ನಿಗದಿಪಡಿಸಲಾಗಿತ್ತು. ಈಗ ಹೆಚ್ಚುವರಿಯಾಗಿ 145 ಕೊಠಡಿ ನಿಗದಿ ಮಾಡಲಾಗಿದೆ. ಒಟ್ಟಾರೆ 939 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ತಮ್ಮ ಮೂಲ ಜಿಲ್ಲೆ, ಸ್ಥಳಗಳಲ್ಲಿ ಪರೀಕ್ಷೆ ಬರೆಯುವುದಾಗಿ 384 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆ ಎಲ್ಲರೂ ಮತ್ತೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಕೋವಿಡ್ ವೈರಸ್‌ ಹರಡುವಿಕೆ ಹಿನ್ನೆಲೆಯಲ್ಲಿ, ಕೈಗೊಂಡಿರುವ ಅಗತ್ಯ ಸುರಕ್ಷಾ ಕ್ರಮಗಳ ನಡುವೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳು ಆಂಗ್ಲ ಭಾಷಾ ವಿಷಯದ ಪರೀಕ್ಷೆಗೆ ಸಜ್ಜಾಗಿದ್ದಾರೆ. ಜಿಲ್ಲಾಡಳಿತ, ಪಿಯು ಶಿಕ್ಷಣ ಮಂಡಳಿ ಯಾವುದೇ ಭಯಕ್ಕೆ ಆಸ್ಪದ ಇಲ್ಲದೆ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಂಡಿವೆ.

 

-ರಾ. ರವಿಬಾಬು

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.