ಕೊಚ್ಚಿ ಹೋದ ಭದ್ರಾ ನಾಲಾ ತಡೆಗೋಡೆ; ಹೊಸ ಗದ್ದೆಗಳಿಗೆ ನುಗ್ಗಿದ ನೀರು
Team Udayavani, Oct 2, 2022, 1:18 PM IST
ದಾವಣಗೆರೆ: ತಾಲೂಕಿನ ನಲ್ಕುಂದ ಗ್ರಾಮದ ಬಳಿ ಭದ್ರಾ ನಾಲಾ ತಡೆಗೋಡೆ ಕೊಚ್ಚಿ ಹೋದ ಪರಿಣಾಮ ಭಾರೀ ಪ್ರಮಾಣದಲ್ಲಿ ನಾಲೆಯ ನೀರು ಹೊಲ ಗದ್ದೆಗಳಿಗೆ ನುಗ್ಗಿದ್ದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅಡಕೆ, ಬಾಳೆ ತೋಟ ಜಲಾವೃತವಾಗಿವೆ. ರಸ್ತೆ ಸಂಪರ್ಕ ಕಡಿತಗೊಂಡಿದೆ.
ದಾವಣಗೆರೆ ತಾಲೂಕಿನ ಶ್ಯಾಗಲೆ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಶ್ಯಾಗಲೆ, ಲೋಕಿಕೆರೆ, ಮತ್ತಿ, ಹೂವಿನಮಡು ಗ್ರಾಮಗಳಿಗೆ ಸಂಪರ್ಕವೇ ಇಲ್ಲವಾಗಿದೆ.
ಇದನ್ನೂ ಓದಿ:ಬಂಟ್ವಾಳ: ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್.! ವೇಷ ಹಾಕಿ ಮನೆ ಮನೆಗೆ ತೆರಳಿ ಹಣ ಸಂಗ್ರಹ
ಜಿಲ್ಲಾ ಕೇಂದ್ರ ದಾವಣಗೆರೆಯ ಹಳೆ ಚಿಕ್ಕನಹಳ್ಳಿ ಬಡಾವಣೆಗೆ ಹಳ್ಳದ ಮನೆಗಳಿಗೆ ನುಗ್ಗಿದೆ. ಇಡೀ ಬಡಾವಣೆ ಜಲಾವೃತವಾಗಿದೆ. ಜನರು ರಾತ್ರಿಯಿಡೀ ತೊಂದರೆ ಅನುಭವಿಸುವಂತಾಯಿತು. ಈವರೆಗೆ ಅಧಿಕಾರಿಗಳು ಬಂದು ಪರಿಹಾರ ಕಾರ್ಯ ಕೈಗೊಂಡಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು