ರಾಜ್ಯಾದ್ಯಂತ 290 ಶುದ್ಧಗಂಗಾ ಘಟಕ ಸ್ಥಾಪನೆ: ಜಯಂತ್‌


Team Udayavani, Oct 30, 2020, 7:35 PM IST

dg-tdy-1

ದಾವಣಗೆರೆ: ಪ್ರಕೃತಿ ಕೊಡುಗೆ ಮೇಲೆಯೇ ಮನುಷ್ಯರ ಭವಿಷ್ಯ ನಿಂತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನಿರ್ದೇಶಕ ಜಯಂತ್‌ ಪೂಜಾರಿ ಹೇಳಿದರು.

ನೂತನವಾಗಿ ಉದ್ಘಾಟನೆಯಾದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದ್ಬವನ ಸೌಧದಲ್ಲಿ ನಡೆದ ಜಿಲ್ಲಾ ಮಟ್ಟದ ಶುದ್ಧಗಂಗಾ ಘಟಕ ಪ್ರೇರಕರ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಮುಖ್ಯವಾಗಿ ಆಹಾರ, ನೀರು ಹಾಗೂ ಗಾಳಿ ಮಹತ್ವವಾದವು. ಪ್ರಕೃತಿ ಮಾತೆ ನಮ್ಮೆಲ್ಲರ ಆಸೆ, ಆಶಯಗಳನ್ನು ಪೂರೈಸುತ್ತಿದ್ದಾಳೆ. ಆದರೆ ಮನುಷ್ಯರು ದುರಾಸೆಯಿಂದ ಪ್ರಕೃತಿಯನ್ನು ವಿನಾಶ ಮಾಡುತ್ತಿದ್ದಾರೆ ಎಂದು ವಿಷಾದಿಸಿದರು.

ಪ್ರಕೃತಿ ವಿನಾಶದ ಅಂಚಿನಲ್ಲಿರುವುದನ್ನು ಗಂಭೀರವಾಗಿ ಅರ್ಥಮಾಡಿಕೊಂಡು ಪ್ರತಿಯೊಬ್ಬರಿಗೂ ಶುದ್ಧ ನೀರು ಒದಗಿಸುವುದು ನಮ್ಮೇಲ್ಲರ ಹೊಣೆಯಾಗಿದೆ. ಭೂ ಭಾಗದಿಂದ ಬರುವ ನೀರು ಅನೇಕ ರಾಸಾಯನಿಕ ವಸ್ತಗಳಿಂದ ಕೂಡಿರುವುದನ್ನು ಮನಗಂಡು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಾ| ವೀರೇಂದ್ರ ಹೆಗ್ಗಡೆಯವರು ಶುದ್ಧ ನೀರಿನ ಘಟಕಗಳ ಮೂಲಕಜನರಿಗೆ ಪರಿಶುದ್ಧವಾದ ನೀರು ಒದಗಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜ್ಯದ 18 ಜಿಲ್ಲೆಗಳ 55 ತಾಲೂಕುಗಳಲ್ಲಿ 290 ಶುದ್ಧಗಂಗಾ ಘಟಕಗಳನ್ನು ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಇತರೆ ಸಂಘ ಸಂಸ್ಥೆಯವರ ಸಹಕಾರದೊಂದಿಗೆ ಸ್ಥಾಪಿಸಲಾಗಿದೆ. ಜನರಿಗೆ ಶುದ್ಧ ನೀರು ಒದಗಿಸುತ್ತಿದ್ದು, ಅಶುದ್ಧ ನೀರಿನ ಸೇವನೆಯಿಂದಬರುವ ಕಾಯಿಲೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ನಮ್ಮ ಸೇವೆ ಸಮಾಜಕ್ಕೆ ಮಾದರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕೇಂದ್ರ ಕಚೇರಿಯ ಶುದ್ಧಗಂಗಾ, ಕೆರೆ ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ್‌ ಕುಮಾರ್‌ ಮಾತನಾಡಿ, ಶುದ್ಧ ನೀರಿನ ಘಟಕವನ್ನು ಸುಸ್ಥಿರವಾಗಿಟ್ಟುಕೊಂಡು ಜನರಿಗೆ ಸರಿಯಾದ ರೀತಿಯಲ್ಲಿ ಪ್ರೇರಣೆ ನೀಡುವುದರ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿ ಸಹ ಶುದ್ಧ ನೀರು ಕುಡಿಯುವಂತೆ ನೋಡಿಕೊಳ್ಳಬೇಕು. ಘಟಕವಾರು ಪ್ರೇರಕರ ಪ್ರಗತಿ ಪರಿಶೀಲನೆ ನಡೆಸಿ ಹೆಚ್ಚು ಜನರಿಗೆ ಸೇವೆ ಸಲ್ಲಿಸುವಂತೆ ತಿಳಿಸಿದರು.

ತಾಲೂಕು ಯೋಜನಾಧಿಕಾರಿ ಪದ್ಮಯ್ಯ, ಎಂಐಎಸ್‌ ಯೋಜನಾಧಿಕಾರಿ ವಿಜಯೇಂದ್ರ ಶಾನುಭೋಗ, ಕೇಂದ್ರ ಕಚೇರಿ ಆಂತರಿಕ ಲೆಕ್ಕ ಪರಿಶೋಧಕ ನಾರಾಯಣ, ಶುದ್ಧಗಂಗಾ ಘಟಕಗಳ ಪ್ರೇರಕರು ಇದ್ದರು. ಮನು ಸ್ವಾಗತಿಸಿದರು. ಮೇಲ್ವಿಚಾರಕ ಫಕ್ಕೀರಪ್ಪ ಬೆಲ್ಲಾಮುದ್ದಿ ನಿರೂಪಿಸಿದರು. ಅರುಣ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.