ಪಾರ್ಟ್ಸ್ ಹೋಗುತ್ತಿದ್ದರೂ ಮತದಾರರ ಋಣ ತೀರಿಸುವೆ..


Team Udayavani, Jul 5, 2017, 3:34 PM IST

DAV-6.jpg

ದಾವಣಗೆರೆ: ಅವರು (ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌) ಹೇಳಿದಂತೆ ನನ್ನ ಒಂದೊಂದು ಪಾರ್ಟ್ಸ್ (ದೇಹದ ಭಾಗ) ಹೋಗುತ್ತಿದ್ದರೂ ಮತ ನೀಡಿದವರ ಋಣ ತೀರಿಸಲು, ಸಮಸ್ಯೆಗೆ ಸ್ಪಂದಿಸಲು ಎಲ್ಲ ಕಡೆ ಭೇಟಿ ನೀಡುತ್ತಿದ್ದೇನೆ. ಅವರು ಎಷ್ಟು ಕಡೆ ಹೋಗಿದ್ದಾರೆ ಎಂಬುದನ್ನು ತಿಳಿಸಲಿ… ಇದು ಸಂಸದ ಜಿ.ಎಂ. ಸಿದ್ದೇಶ್ವರ್‌ ಜಿಲ್ಲಾ 
ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌  ಟೀಕೆಗೆ ಹಾಕಿರುವ ಸವಾಲು.

ಮಂಗಳವಾರ 15ನೇ ವಾರ್ಡ್‌ನ ಭಾರತ್‌  ಕಾಲೋನಿಯಲ್ಲಿ ಕುಡಿಯುವ ನೀರು ಸರಬರಾಜು ಘಟಕ ಉದ್ಘಾಟಿಸಿ ಮಾತನಾಡಿದ ತಮ್ಮ ಭಾಷಣದಲ್ಲಿ ಸಿದ್ದೇಶ್ವರ್‌, ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.
ಮಲ್ಲಿಕಾರ್ಜುನ್‌ ನಮ್ಮ ತಂದೆಗೆ ವಯಸ್ಸಾಗಿದೆ ಎಂದೇಳುವ ಸಿದ್ದೇಶ್ವರರ ಬಾಡಿಯ ಒಂದೊಂದೆ ಪಾರ್ಟ್ಸ್ ಹೋಗುತ್ತಿವೆ ಎಂದಿದ್ದಾರೆ. ಯಾರೇ ಆಗಲಿ ವೈಯಕ್ತಿಕವಾದ ವಿಚಾರ ಹೇಳಿಕೆ ನೀಡುವುದು ಸರಿಯಲ್ಲ. ಅವರು ನನ್ನ ಒಂದೊಂದು ಪಾರ್ಟ್ಸ್ ಹೋಗುತ್ತಿವೆ ಎಂದಿರುವುದಕ್ಕೆ ಕಾಲವೇ ತಕ್ಕ ಉತ್ತರ ಕೊಡಲಿದೆ ಎಂದರು.

ನನ್ನ ಒಂದೊಂದು ಪಾರ್ಟ್ಸ್ ಹೋಗುತ್ತಿದ್ದರೂ ಮೂರು ಚುನಾವಣೆಯಲ್ಲಿ ನನಗೆ ಮತ ನೀಡಿದವರ ಋಣ ತೀರಿಸಲು, ಸಮಸ್ಯೆಗೆ ಸ್ಪಂದಿಸಲು ಎಲ್ಲ ಕಡೆ ಭೇಟಿ ನೀಡುತ್ತಿದ್ದೇನೆ. ಅವರು ಮೂರು ಬಾರಿ ನನ್ನ ವಿರುದ್ಧ ಸ್ಪರ್ಧಿಸಿ, ಸೋತಿದ್ದಾರೆ. ಲಾಸ್ಟ್‌ ಎಲೆಕ್ಷನ್‌ನಲ್ಲಿ ನನಗೆ 5.17 ಲಕ್ಷ ವೋಟ್‌ ಕೊಟ್ಟಿದ್ದಾರೆ. ಹಾಗಾಗಿ ಜಿಲ್ಲೆಯ ಎಲ್ಲಾ ಕಡೆ ಹೋಗುತ್ತೇನೆ. ಅವರು
ಎಷ್ಟು ಕಡೆ ಹೋಗಿದ್ದಾರೆ ಎಂಬುದನ್ನು ತಿಳಿಸಲಿ. ಅವರಿಗೂ ಜನರು 5 ಲಕ್ಷ ವೋಟ್‌ ಕೊಟ್ಟಿದ್ದಾರೆ ಎಂಬುದನ್ನು ಮರೆಯಬಾರದು  ಎಂದು ತಾಕೀತು ಮಾಡಿದರು. ಇನ್ನೂ ಸಾಕಷ್ಟುಮಾತನಾಡುವುದು, ಹೇಳುವುದು ಇದೆ. 
ನಾಳೆ(ಬುಧವಾರ) ನನ್ನ ಬರ್ತ್‌ಡೇ ಇದೆ. ಅಲ್ಲಿ ಮಾತನಾಡುತ್ತೇನೆ… ಎನ್ನುವ ಮೂಲಕ ಕುತೂಹಲ ಮೂಡಿಸಿದರು.

ಸಮಯ ಬಂದಾಗ ಉತ್ತರಿಸುವೆ… 
ಮಾಜಿ, ಹಾಲಿ ಸಚಿವರು ನನ್ನ ಬಗ್ಗೆ  ಏನೆಲ್ಲಾ ಮಾತನಾಡಿದ್ದಾರೆ. ಸಮಯ ಬಂದಾಗ ಅದಕ್ಕೆ ತಕ್ಕ ಉತ್ತರ ನೀಡುತ್ತೇನೆ.
ಹಿಂದಿನ ಸಚಿವರು ಹಿರಿಯರು. ಅವರ ಬಗ್ಗೆ ಗೌರವ ಇದೆ. ಅವರು ಯಾರ ಬಗ್ಗೆಯೇ ಆಗಲಿ ಗೌರವದಿಂದ 
ಮಾತನಾಡಬೇಕು. ಅದನ್ನು ಬಿಟ್ಟು  ಯಾರೋ ಬೀದಿಯಲ್ಲಿ, ಮಾರ್ಕೆಟ್‌ನಲ್ಲಿ ಮಾತನಾಡಿದ ರೀತಿ ಮಾತನಾಡುವುದು
ಸರಿಯಲ್ಲ. ಯಾಕೆಂದರೆ ಎಲ್ಲರಿಗೂ ಅವರದ್ದೇ ಆದ ಗೌರವ ಇದ್ದೇ ಇರುತ್ತದೆ. ಹಾಗಾಗಿ ಎಲ್ಲರ ಬಗ್ಗೆಯೂ ಗೌರವದಿಂದ
ಮಾತನಾಡಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌ ಹೇಳಿದರು. ಬೇರೆ ಎಲ್ಲಾ ಕಡೆ ಸ್ಮಾಟ್‌
ìಸಿಟಿ ಕೆಲಸ ಆಗುತ್ತಿವೆ. ಇಲ್ಲಿ ಯಾಕೆ ಆಗುತ್ತಿಲ್ಲ. ದಾವಣಗೆರೆಗೆ ಮಾತ್ರವೇ ಮೋದಿಯವರು ಕಠಿಣ ಕ್ರಮ
ತೆಗೆದುಕೊಂಡಿಲ್ಲ. ಅಭಿವೃದ್ಧಿ ವಿಚಾರ ಬಂದಾಗ ನಾವು- ಅವರು ಒಂದಾಗಿ ಕೆಲಸ ಮಾಡಬೇಕು. ರಾಜಕೀಯವನ್ನ
ಚುನಾವಣಾ ಅಖಾಡದಲ್ಲಿ ಮಾಡಬೇಕು. ಅಲ್ಲಿ ಸಡ್ಡು ಹೊಡೆಯಬೇಕು. ನನ್ನ ಬಗ್ಗೆ ಮಾತನಾಡಿರುವುದಕ್ಕೆ ಈ
ಕಾರ್ಯಕ್ರಮದಲ್ಲಿ ಉತ್ತರ ಕೊಡುವುದು ಸರಿಯಲ್ಲ. ಸಮಯ ಬಂದಾಗ ತಕ್ಕ ಉತ್ತರ ಕೊಡುತ್ತೇನೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.