ದೇಶದ ಉನ್ನತಿಗಾಗಿ ಪ್ರತಿಯೊಬ್ಬರೂ ಮತ ಚಲಾಯಿಸಿ
Team Udayavani, Mar 21, 2019, 6:04 AM IST
ದಾವಣಗೆರೆ: ದೇಶದ ಉನ್ನತಿಗಾಗಿ ಪ್ರತಿ ಮತದಾರ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಎ.ಆರ್.ಜಿ ಕಾಲೇಜು ಪ್ರಾಂಶುಪಾಲ ಪ್ರೊ| ಕೆ.ಎಸ್. ಬಸವರಾಜಪ್ಪ ಮನವಿ ಮಾಡಿದರು.
ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸ್ವೀಪ್ ಕಾರ್ಯಕ್ರಮದಡಿ ಮತದಾನ ಜಾಗೃತಿ ಅಂಗವಾಗಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹಣಾ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಮತದಾರರು ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ನಿರ್ವಹಿಸಬೇಕಾಗಿರುವುದು ಅತ್ಯವಶ್ಯಕ ಎಂದರು.
ಮತದಾನ, ಚುನಾವಣೆ ಮತ್ತು ಪಕ್ಷಗಳ ಸಿದ್ಧಾಂತಗಳ ಗುಣಮಟ್ಟ ಪ್ರಜಾಪ್ರಭುತ್ವದ ಯಶಸ್ಸು ಅಥವಾ ವೈಫಲ್ಯವನ್ನು ನಿರ್ಧರಿಸುತ್ತದೆ ಎಂದು ತಿಳಿಸಿದರು. ಕಾಲೇಜಿನ ಸ್ವೀಪ್ ನೋಡಲ್ ಅಧಿಕಾರಿ ಡಾ| ಜೆ.ಕೆ. ಮಲ್ಲಿಕಾರ್ಜುನಪ್ಪ ಮಾತನಾಡಿ, ಯುವಕರು ಸಂಪೂರ್ಣ ಪ್ರಮಾಣದಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಲ್ಲದೇ ತಮ್ಮ ಸುತ್ತಮುತ್ತಲಿನ ಮತದಾರರನ್ನು ಕಡ್ಡಾಯವಾಗಿ ಮತದಾನ
ಮಾಡುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಮತದಾನ ಮತ್ತು ಚುನಾವಣೆ ಕುರಿತಂತೆ ಗೀತೆಗಳು, ಘೋಷಣೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾ ನಡೆಸಿ ಮತದಾನ ಜಾಗೃತಿ, ಅರಿವು ಮೂಡಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಪ್ರೊ| ಮಲ್ಲಿಕಾರ್ಜುನ ಹಲಸಂಗಿ, ಐಕ್ಯೂಎಸಿ ಸಂಯೋಜಕಿ ಪ್ರೊ| ಅನಿತಾಕುಮಾರಿ , ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ