ಲಾರಿ ಮಾಲೀಕರಿಗೆ ವಿನಾಯಿತಿ ನೀಡಿ: ಸೈಯದ್‌


Team Udayavani, May 29, 2021, 9:41 AM IST

ಲಾರಿ ಮಾಲೀಕರಿಗೆ ವಿನಾಯಿತಿ ನೀಡಿ: ಸೈಯದ್‌

ದಾವಣಗೆರೆ: ಕೋವಿಡ್ ಲಾಕ್‌ಡೌನ್‌ನಿಂದಾಗಿ ಲಾರಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಲಾರಿ ಮಾಲೀಕರಿಗೆ ಕೆಲವು ವಿನಾಯಿತಿ ನೀಡಿ, ಚಾಲಕರಿಗೆ ಪರಿಹಾರ ಪ್ಯಾಕೇಜ್‌ ಘೋಷಿಸಬೇಕು ಎಂದು ಜಿಲ್ಲಾ ಲಾರಿ ಮಾಲೀಕರು ಮತ್ತು ಟ್ರಾನ್ಸ್‌ಪೊàರ್ಟ್‌ ಏಜೆಂಟರ್‌ ಸಂಘದ ಅಧ್ಯಕ್ಷ ಸೈಯದ್‌ ಸೈಫುಲ್ಲಾ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾರಿ ಮಾಲೀಕರ ಸಂಕಷ್ಟವನ್ನು ಅರಿತು ಸರ್ಕಾರ 1ರಿಂದ 3 ಲಾರಿ ಹೊಂದಿರುವ ಮಾಲೀಕರಿಗೆ ಒಂದು ವರ್ಷ ಕಾಲ ತೆರಿಗೆ ವಿನಾಯಿತಿ ನೀಡಬೇಕು. ಮಾಲೀಕರ ಆರ್ಥಿಕ ಸ್ಥಿತಿ ಸುಧಾರಿಸುವವರೆಗೂ ಕನಿಷ್ಠ 3 ತಿಂಗಳುಗಳ ಕಾಲ ಟೋಲ್‌ ಸಂಗ್ರಹಿಸಬಾರದು. ಲಾರಿ ಖರೀದಿಗೆ ಹಣಕಾಸು ಸಂಸ್ಥೆಗಳು ನೀಡಿರುವ ಸಾಲ ಮರು ಪಾವತಿ ಮಾಡಲು ಒಂದು ಬಡ್ಡಿ ರಹಿತವಾಗಿ ಕಂತು ತುಂಬಿಸಿಕೊಳ್ಳಲು ನಿರ್ದೇಶನ ನೀಡಬೇಕು. ಲಾರಿ ಚಾಲಕರಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು. ಕಳೆದ ವರ್ಷದ ಲಾಕ್‌ಡೌನ್‌ ವೇಳೆಯಲ್ಲಿ ಲೀಟರ್‌ಗೆ 68 ರೂ. ಇದ್ದ ಡೀಸೆಲ್‌ ಈಗ 91 ರೂ. ತಲುಪಿದೆ. ಹೀಗೆ ಡೀಸೆಲ್‌ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ ಸರ್ಕಾರದ ಕ್ರಮದಿಂದ ಲಾರಿ ಮಾಲೀಕರಿಗೆ ಆರ್ಥಿಕ ಹೊರೆ ಆಗುತ್ತಿದೆ. ಆದ್ದರಿಂದ ತಕ್ಷಣವೇ ಡೀಸೆಲ್‌ ಬೆಲೆ ಏರಿಕೆಯನ್ನು ವಾಪಾಸ್‌ ಪಡೆಯಬೇಕು. ಇಲ್ಲದಿದ್ದರೆ, ಲಾಕ್‌ಡೌನ್‌ ಬಳಿಕ ಲಾರಿ ಮಾಲೀಕರು ಮುಷ್ಕರ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೋವಿಡ್ ಸಂಕಷ್ಟದ ನಡುವೆಯೇ ಡೀಸೆಲ್‌, ವಾಹನಗಳ ಬಿಡಿ ಭಾಗಗಳು, ಟೈರ್‌ಗಳ ಬೆಲೆ ಶೇ.15 ರಷ್ಟು ಏರಿಕೆಯಾಗಿವೆ. ಈ ಬೆಲೆ ಏರಿಕೆಯು ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಲಾರಿ ಮಾಲೀಕರ ಗಾಯದ ಮೇಲೆ ಬರೆ ಎಳೆದಿದೆ. ಅಲ್ಲದೇ ಟೋಲ್‌, ಟ್ಯಾಕ್ಸ್‌, ತ್ತೈಮಾಸಿಕ ರಸ್ತೆ ತೆರಿಗೆ, ಎಫ್‌ಸಿ, ಪರ್ಮಿಟ್‌ ಶುಲ್ಕಗಳು ಸಹ ಹೆಚ್ಚಳವಾಗಿದೆ. ಈ ನಡುವೆ ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್‌ಡೌನ್‌, ಜನತಾ ಕರ್ಫ್ಯೂ ವಿಧಿಸಿ, ಅಗತ್ಯ ವಸ್ತುಗಳ ಸರಕು ಸಾಗಾಣಿಕೆಗೆ ಅವಕಾಶ ನೀಡಿದೆ. ಆದರೆ, ಉದ್ದಿಮೆ ಮತ್ತು ಕೈಗಾರಿಕೆಗಳು ಬಂದ್‌ ಆಗಿರುವುದರಿಂದ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಲಾರಿಗಳು ನಿಂತಲ್ಲೇ ನಿಂತಿವೆ. ಆದ್ದರಿಂದ ಲಾರಿ ಮಾಲೀಕರು ಸಹ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಲಾರಿ ಮಾಲೀಕರು ಜೀವನ ನಡೆಸುವುದೇ ದುಸ್ತರವಾಗಿದೆ ಎಂದರು.

ಸಂಘದ ಕಾರ್ಯದರ್ಶಿ ಎಸ್‌.ಕೆ. ಮಲ್ಲಿಕಾರ್ಜುನ್‌, ಪದಾಧಿಕಾರಿಗಳಾದ ದಾದಾಪೀರ್‌, ಮಹಾಂತೇಶ್‌ ಒಣರೊಟ್ಟಿ, ಮುರುಗೇಶ್‌, ಖಲೀಲ್‌ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.