ವರುಣನ ಅಬ್ಬರಕ್ಕೆ ಅಪಾರ ಬೆಳೆ ಹಾನಿ

ಎರಡ್ಮೂರು ದಿನಗಳಿಂದ ಜಿಲ್ಲೆಯಲ್ಲಿ ಮುಂದುವರೆದ ಮೋಡ ಮುಸುಕಿದ ವಾತಾವರಣದಿಂದ ಸಮಸ್ಯೆ

Team Udayavani, May 19, 2022, 2:15 PM IST

damage

ದಾವಣಗೆರೆ: ಸತತ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ, ಮೋಡ ಮುಸುಕಿದ ವಾತಾವರಣದಿಂದ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಅಕ್ಷರಶಃ ಮಲೆನಾಡಿನಂತಾಗಿದೆ.

ಸೋಮವಾರದಿಂದ ಜಿಲ್ಲೆಯ ವಿವಿಧ ಭಾಗದಲ್ಲಿ ಕೃತಿಕಾ ಮಳೆಯ ಆರ್ಭಟದಿಂದ ಜಾನುವಾರುಗಳು ಸಾವನ್ನಪ್ಪಿವೆ. ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ, ಅಡಕೆ, ಬಾಳೆ ಹಾಳಾಗಿದೆ. ಅನೇಕ ಮನೆಗಳು ಹಾನಿಗೊಳಗಾಗಿವೆ. ತಗ್ಗು ಪ್ರದೇಶದ ಜನರು ರೋಸಿ ಹೋಗಿದ್ದಾರೆ.

ಬುಧವಾರವಿಡೀ ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಮೋಡ ಮುಸುಕಿದ ವಾತಾವರಣ ಇತ್ತು. ಸೂರ್ಯನ ದರ್ಶನ ಆಗಲೇ ಇಲ್ಲ. ಬೆಳಗ್ಗೆಯಿಂದ ಮಳೆ ಹನಿಗಳು ಜಿನುಗುತ್ತಲೇ ಇದ್ದವು. ಮಧ್ಯಾಹ್ನ ಸ್ವಲ್ಪ ಸಮಯ ಮಳೆಯೂ ಬಂದಿತು. ಸಂಜೆ ಮಳೆಗೆ ನಿಂತಿತ್ತಾದರೂ ಮೋಡ ಮುಸುಕಿದ ವಾತಾವರಣ ಮುಂದುವರೆಯಿತು.

ಮಳೆಯ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳು, ಕೆಲಸ-ಕಾರ್ಯಗಳಿಗೆ ತೆರಳುವವರು, ಮದುವೆ ಸಂಭ್ರದಮದಲ್ಲಿದ್ದವರು ಬೇಸತ್ತು ಹೋದರು. ಶಾಲೆಗಳು ಪ್ರಾರಂಭವಾದ ಎರಡೇ ದಿನಗಳಲ್ಲಿ ಮಳೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಿ, ಬರಲು ಪರದಾಡುವಂತಾಯಿತು. ಮಳೆ ಬರುತ್ತಿದ್ದುದರಿಂದ ಸಾಕಷ್ಟು ಜನರು ಮನೆಯಿಂದ ಹೊರ ಬರದೆ ವ್ಯಾಪಾರ-ವಹಿವಾಟು ಕುಂಟಿತಗೊಂಡವು. ಆಟೋರಿಕ್ಷಾ, ನಗರ ಸಾರಿಗೆ ಬಸ್‌ಗಳಲ್ಲೂ ಜನರು ವಿರಳವಾಗಿದ್ದರು.

42.33 ಲಕ್ಷ ರೂ. ಮಳೆ ಹಾನಿ

ಜಿಲ್ಲೆಯಲ್ಲಿ ಮಂಗಳವಾರ ಸುರಿದ ಮಳೆಯಿಂದಾಗಿ 42.33 ಲಕ್ಷ ರೂಪಾಯಿಯಷ್ಟು ಆಸ್ತಿ, ಬೆಳೆ ಹಾನಿಯಾಗಿದೆ. ದಾವಣಗೆರೆ ತಾಲೂಕಿನ ವ್ಯಾಪ್ತಿಯಲ್ಲಿ 0.30 ಗುಂಟೆ ಅಡಕೆ ಬೆಳೆ, 10 ಗುಂಟೆ ತೆಂಗು ಬೆಳೆ ಹಾನಿಯಿಂದಾಗಿ 70 ಸಾವಿರ ರೂ. ನಷ್ಟವಾಗಿದೆ.

ಹರಿಹರ ತಾಲೂಕು ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು 1.50 ಲಕ್ಷ ರೂ., 1 ಕಚ್ಚಾ ಮನೆ ಭಾಗಶಃ ಹಾನಿಗೀಡಾಗಿ 30 ಸಾವಿರ, 16 ವಾಸದ ಮನೆಗಳ ಮನೆಯ ಮೇಲ್ಛಾವಣಿ ಸಿಮೆಂಟ್‌ ಶೀಟ್‌, ಹಂಚು ಹಾನಿಯಾಗಿದ್ದರಿಂದ 4.80 ಲಕ್ಷ ಮತ್ತು 329ಎಕರೆ ಭತ್ತದ ಬೆಳೆ, 5 ಎಕರೆ ಬಾಳೆ ಬೆಳೆ, 8ಎಕರೆ ಅಡಕೆ ಮತ್ತು ತೆಂಗು ಬೆಳೆ ಹಾನಿಯಾಗಿದ್ದು, 26.13 ಲಕ್ಷ ಸೇರಿದಂತೆ ಒಟ್ಟು 32.73 ಲಕ್ಷ ರೂ. ಅಂದಾಜು ನಷ್ಟವಾಗಿದೆ. ಹೊನ್ನಾಳಿ ತಾಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, 50 ಸಾವಿರ, 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು 1 ಲಕ್ಷ ಮತ್ತು 3ಎಕರೆ ಬಾಳೆ ಬೆಳೆ ಹಾನಿಯಾಗಿದ್ದು 30 ಸಾವಿರ ಒಳಗೊಂಡಂತೆ ಒಟ್ಟು 1.80 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ನ್ಯಾಮತಿ ತಾಲೂಕಿನ ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, 2 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, 50 ಸಾವಿರ, 1 ಕಚ್ಚಾ ಮನೆ ಭಾಗಶ: ಹಾನಿಯಿಂದ 50 ಸಾವಿರ, ದನದ ಕೊಟ್ಟಿಗೆ ಹಾನಿಯಾಗಿದ್ದರಿಂದ 10ಸಾವಿರ, 20ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, 4 ಲಕ್ಷ ಸೇರಿ ಒಟ್ಟು 5.10 ಲಕ್ಷ ಅಂದಾಜು ನಷ್ಟವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 42.33 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.