ವರುಣನ ಅಬ್ಬರಕ್ಕೆ ಅಪಾರ ಬೆಳೆ ಹಾನಿ

ಎರಡ್ಮೂರು ದಿನಗಳಿಂದ ಜಿಲ್ಲೆಯಲ್ಲಿ ಮುಂದುವರೆದ ಮೋಡ ಮುಸುಕಿದ ವಾತಾವರಣದಿಂದ ಸಮಸ್ಯೆ

Team Udayavani, May 19, 2022, 2:15 PM IST

damage

ದಾವಣಗೆರೆ: ಸತತ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ, ಮೋಡ ಮುಸುಕಿದ ವಾತಾವರಣದಿಂದ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಅಕ್ಷರಶಃ ಮಲೆನಾಡಿನಂತಾಗಿದೆ.

ಸೋಮವಾರದಿಂದ ಜಿಲ್ಲೆಯ ವಿವಿಧ ಭಾಗದಲ್ಲಿ ಕೃತಿಕಾ ಮಳೆಯ ಆರ್ಭಟದಿಂದ ಜಾನುವಾರುಗಳು ಸಾವನ್ನಪ್ಪಿವೆ. ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ, ಅಡಕೆ, ಬಾಳೆ ಹಾಳಾಗಿದೆ. ಅನೇಕ ಮನೆಗಳು ಹಾನಿಗೊಳಗಾಗಿವೆ. ತಗ್ಗು ಪ್ರದೇಶದ ಜನರು ರೋಸಿ ಹೋಗಿದ್ದಾರೆ.

ಬುಧವಾರವಿಡೀ ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಮೋಡ ಮುಸುಕಿದ ವಾತಾವರಣ ಇತ್ತು. ಸೂರ್ಯನ ದರ್ಶನ ಆಗಲೇ ಇಲ್ಲ. ಬೆಳಗ್ಗೆಯಿಂದ ಮಳೆ ಹನಿಗಳು ಜಿನುಗುತ್ತಲೇ ಇದ್ದವು. ಮಧ್ಯಾಹ್ನ ಸ್ವಲ್ಪ ಸಮಯ ಮಳೆಯೂ ಬಂದಿತು. ಸಂಜೆ ಮಳೆಗೆ ನಿಂತಿತ್ತಾದರೂ ಮೋಡ ಮುಸುಕಿದ ವಾತಾವರಣ ಮುಂದುವರೆಯಿತು.

ಮಳೆಯ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳು, ಕೆಲಸ-ಕಾರ್ಯಗಳಿಗೆ ತೆರಳುವವರು, ಮದುವೆ ಸಂಭ್ರದಮದಲ್ಲಿದ್ದವರು ಬೇಸತ್ತು ಹೋದರು. ಶಾಲೆಗಳು ಪ್ರಾರಂಭವಾದ ಎರಡೇ ದಿನಗಳಲ್ಲಿ ಮಳೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಿ, ಬರಲು ಪರದಾಡುವಂತಾಯಿತು. ಮಳೆ ಬರುತ್ತಿದ್ದುದರಿಂದ ಸಾಕಷ್ಟು ಜನರು ಮನೆಯಿಂದ ಹೊರ ಬರದೆ ವ್ಯಾಪಾರ-ವಹಿವಾಟು ಕುಂಟಿತಗೊಂಡವು. ಆಟೋರಿಕ್ಷಾ, ನಗರ ಸಾರಿಗೆ ಬಸ್‌ಗಳಲ್ಲೂ ಜನರು ವಿರಳವಾಗಿದ್ದರು.

42.33 ಲಕ್ಷ ರೂ. ಮಳೆ ಹಾನಿ

ಜಿಲ್ಲೆಯಲ್ಲಿ ಮಂಗಳವಾರ ಸುರಿದ ಮಳೆಯಿಂದಾಗಿ 42.33 ಲಕ್ಷ ರೂಪಾಯಿಯಷ್ಟು ಆಸ್ತಿ, ಬೆಳೆ ಹಾನಿಯಾಗಿದೆ. ದಾವಣಗೆರೆ ತಾಲೂಕಿನ ವ್ಯಾಪ್ತಿಯಲ್ಲಿ 0.30 ಗುಂಟೆ ಅಡಕೆ ಬೆಳೆ, 10 ಗುಂಟೆ ತೆಂಗು ಬೆಳೆ ಹಾನಿಯಿಂದಾಗಿ 70 ಸಾವಿರ ರೂ. ನಷ್ಟವಾಗಿದೆ.

ಹರಿಹರ ತಾಲೂಕು ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು 1.50 ಲಕ್ಷ ರೂ., 1 ಕಚ್ಚಾ ಮನೆ ಭಾಗಶಃ ಹಾನಿಗೀಡಾಗಿ 30 ಸಾವಿರ, 16 ವಾಸದ ಮನೆಗಳ ಮನೆಯ ಮೇಲ್ಛಾವಣಿ ಸಿಮೆಂಟ್‌ ಶೀಟ್‌, ಹಂಚು ಹಾನಿಯಾಗಿದ್ದರಿಂದ 4.80 ಲಕ್ಷ ಮತ್ತು 329ಎಕರೆ ಭತ್ತದ ಬೆಳೆ, 5 ಎಕರೆ ಬಾಳೆ ಬೆಳೆ, 8ಎಕರೆ ಅಡಕೆ ಮತ್ತು ತೆಂಗು ಬೆಳೆ ಹಾನಿಯಾಗಿದ್ದು, 26.13 ಲಕ್ಷ ಸೇರಿದಂತೆ ಒಟ್ಟು 32.73 ಲಕ್ಷ ರೂ. ಅಂದಾಜು ನಷ್ಟವಾಗಿದೆ. ಹೊನ್ನಾಳಿ ತಾಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, 50 ಸಾವಿರ, 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು 1 ಲಕ್ಷ ಮತ್ತು 3ಎಕರೆ ಬಾಳೆ ಬೆಳೆ ಹಾನಿಯಾಗಿದ್ದು 30 ಸಾವಿರ ಒಳಗೊಂಡಂತೆ ಒಟ್ಟು 1.80 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ನ್ಯಾಮತಿ ತಾಲೂಕಿನ ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, 2 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, 50 ಸಾವಿರ, 1 ಕಚ್ಚಾ ಮನೆ ಭಾಗಶ: ಹಾನಿಯಿಂದ 50 ಸಾವಿರ, ದನದ ಕೊಟ್ಟಿಗೆ ಹಾನಿಯಾಗಿದ್ದರಿಂದ 10ಸಾವಿರ, 20ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, 4 ಲಕ್ಷ ಸೇರಿ ಒಟ್ಟು 5.10 ಲಕ್ಷ ಅಂದಾಜು ನಷ್ಟವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 42.33 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwe-wqe

Davangere: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ವಿಧಿವಶ

1-sadasdas

Siddaramaiah ಮೋಸದ ಗಿರಾಕಿ,ಕೈ ಸರ್ಕಾರ ನೀರಿನ ಮೇಲಿನ ಗುಳ್ಳೆ: ಆರ್.ಅಶೋಕ್

Davanagere; ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

Davanagere; ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

1-wewewq

Davanagere; ತಾವರೆ ಹೂವು ಮುಡಿದು ಸಂಸತ್‌ ಪ್ರವೇಶಿಸುತ್ತೇನೆ: ಗಾಯತ್ರಿ ಸಿದ್ದೇಶ್ವರ

There is nothing wrong if the BJP uses the Ram Mandir issue: Pejawara seer

Davanagere; ರಾಮಮಂದಿರ ವಿಚಾರ ಬಿಜೆಪಿಯವರು ಬಳಸಿಕೊಂಡರೆ ತಪ್ಪಿಲ್ಲ: ಪೇಜಾವರ ಶ್ರೀ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.