ರೈತರೇ ಬೆಲೆ ನಿರ್ಧರಿಸುವ ಕಾಲ ಬರಲಿ


Team Udayavani, Dec 24, 2019, 11:00 AM IST

DG-TDY-2

ದಾವಣಗೆರೆ: ತಾವು ಬೆಳೆದಂತಹ ಬೆಳೆಗಳಿಗೆ ರೈತರೇ ಬೆಲೆ ನಿರ್ಧರಿಸುವ ಕಾಲ ಬಂದಾಗ ಮಾತ್ರ ರೈತ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಜಿ. ಹನುಮಂತಪ್ಪ ಕುಂದೂರು ತಿಳಿಸಿದರು.

ಸೋಮವಾರ ರೈತರ ದಿನಾಚರಣೆ ಪ್ರಯುಕ್ತ ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತ ಶಕ್ತಿ ಗುಂಪುಗಳಿಗೆ ಸಾಮರ್ಥ್ಯ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ನಮ್ಮ ದೇಶದಲ್ಲಿ ಶೇ. 60 ರಷ್ಟು ರೈತರು ಸಂಪೂ ರ್ಣವಾಗಿ ಕೃಷಿಯನ್ನೇ ಅವಲಂಬಿಸಿ ಬದುಕುತ್ತಿದ್ದಾರೆ. ದೇಶದ 130 ಕೋಟಿ ಜನತೆಗೆ ಅನ್ನದಾತರಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.  ಅನ್ನದಾತರನ್ನು ನೆನಪಿಸಿಕೊಳ್ಳಲು ಡಿ. 23ರಂದು ದಿನಾಚರಣೆಯ ಮೂಲಕ ರೈತರಿಗೆ ಗೌರವ ಸಮರ್ಪಿಸುವ ಕಾರ್ಯಕ್ರಮ ನಿಜಕ್ಕೂ ಸಂತಸದ ವಿಚಾರ. ಇಂದಿನ ವಾತಾವರಣಕ್ಕೆ, ಖರ್ಚಿಗೆ ಅನುಗುಣವಾಗಿ ರೈತರೇ ತಮ್ಮ ಬೆಳೆಗಳಿಗೆ ಬೆಲೆಯನ್ನ ನಿರ್ಧರಿಸುವಂತಾಗಬೇಕು. ಆಗ ರೈತರ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ತಿಳಿಸಿದರು.

ರೈತರ ಕ್ಷೇತ್ರಗಳಲ್ಲಿ ಉತ್ಪಾದನೆ ಹೆಚ್ಚಾಗುತ್ತಿದೆಯೇ ಹೊರತು ಕುಟುಂಬದ ಆದಾಯ ಮಾತ್ರ ಹಾಗೆಯೇ ಇದೆ. ಕೇಂದ್ರ ಸರ್ಕಾರ ಆದಾಯ ದ್ವಿಗುಣಗೊಳಿಸುವ ಯೋಜನೆ ಹಮ್ಮಿಕೊಂಡಿರುವುದು ರೈತರ ಪಾಲಿಗೆ ಆಶಾದಾಯಕ ಬೆಳವಣಿಗೆ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಬಿ. ಮುದಗಲ್‌ ಮಾತನಾಡಿ, ಡಿ. 23 ಮಾಜಿ ಪ್ರಧಾನಿ ಚರಣ್‌ಸಿಂಗ್‌ರವರ ಜನ್ಮದಿನ. ಚರಣ್‌ಸಿಂಗ್‌ರವರು ರೈತರ ಶ್ರೇಯೋಭಿವೃದ್ಧಿ, ಕೃಷಿ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಯೋಜನೆ, ಕಾರ್ಯಕ್ರಮಗಳನ್ನು ತಂದು ಅನುಷ್ಠಾನ ಮಾಡಿರುವ ಜ್ಞಾಪಕಾರ್ಥವಾಗಿ ಅವರ ಜನ್ಮದಿನವನ್ನು ರೈತರ ದಿನವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ರೈತರ ದಿನಾಚರಣೆ ಹಸನಾಗಬೇಕಾದರೆ ರೈತರ ಉತ್ಪಾದನೆ, ಆದಾಯ ಜಾಸ್ತಿ ಆಗಬೇಕು. ಆ ನಿಟ್ಟಿನಲ್ಲಿ ರೈತರು ಕೃಷಿಯನ್ನು ಮಾಡಬೇಕಾಗಿದೆ. ರೈತ ಶಕ್ತಿ ಗುಂಪುಗಳು ಎಫ್‌.ಪಿ.ಓ  ರಚಿಸಿಕೊಂಡು, ಸಂಘಟಿತರಾಗುವ ಮೂಲಕ ತಾವು ಬೆಳೆದಂತಹ ಉತ್ಕೃಷ್ಟವಾದ ಧಾನ್ಯಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ವಾತಾವರಣವನ್ನು ಸೃಷ್ಟಿಸಿಕೊಳ್ಳಬೇಕು ಎಂದು ತಿಳಿಸಿದರು. ರೈತರು ಮುಂದಿನ ದಿನಗಳಲ್ಲಿ ರಾಸಾಯನಿಕ ಕಡಿಮೆ ಮಾಡಿ, ಕ್ರಮೇಣವಾಗಿ ಸಾವಯವ ಕೃಷಿ ಅಳವಡಿಸುವ ಮೂಲಕ ಖರ್ಚನ್ನು ಕಡಿಮೆ ಮಾಡಿ, ಉತ್ಕೃಷ್ಟವಾದ ಉತ್ಪನ್ನಗಳನ್ನು ಬೆಳೆಯುವ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು ಹಾಗೂ ಇಲಾಖೆಯ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಜೆ. ರಘುರಾಜ್‌ ಸಂಘ ಸಂಸ್ಥೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಪವನ್‌ ಪ್ರಾಸ್ತಾವಿಕ ಮಾತುಗಳಾಡಿದರು. ಪ್ರಗತಿ ಪರ ರೈತರಾದ ಇಂದ್ರಮ್ಮ, ಕುಕ್ಕುವಾಡ ರೈತ ಶಕ್ತಿ ಗುಂಪಿನ ಅಧ್ಯಕ್ಷ ಚಂದ್ರಶೇಖರಪ್ಪ ಅನಿಸಿಕೆ ಹಂಚಿಕೊಂಡರು. ಹುಣಸೆಕಟ್ಟೆ, ಆಲೂರು, ಕುಕ್ಕವಾಡ, ಕುರ್ಕಿ, ಹೊನ್ನಮರಡಿ ಗ್ರಾಮಗಳ ರೈತ ಶಕ್ತಿ ಗುಂಪಿನ ಸದಸ್ಯರು, ಆತ್ಮ ಯೋಜನೆ ಉಪಯೋಜನಾ ನಿರ್ದೇಶಕ ಜಿ.ಎಂ. ಚಂದ್ರಶೇಖರಪ್ಪ , ತಾಲೂಕು ತಾಂತ್ರಿಕ ವ್ಯವಸ್ಥಾಪಕ ಬಿ.ಎಸ್‌. ವೆಂಕಟೇಶ್‌ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ರೇಷ್ಮಾ ಇತರರು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.