ಬೆಸ್ಕಾಂನಿಂದ ರೈತರ ಸುಲಿಗೆ


Team Udayavani, Feb 26, 2019, 5:52 AM IST

dvg-3.jpg

ಹರಿಹರ: ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ, ಟಿಸಿ (ಪರಿವರ್ತಕ) ಮತ್ತಿತರೆ ಪರಿಕರ ಒದಗಿಸುವಾಗ ಬೆಸ್ಕಾಂ ಅಧಿಕಾರಿಗಳು ರೈತರ ಸುಲಿಗೆ ಮಾಡುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ ಎಂದು ಶಾಸಕ ಎಸ್‌.ರಾಮಪ್ಪ ಕಿಡಿಕಾರಿದರು.

ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರಿಯಾಗಿ ಮಳೆ-ಬೆಳೆ ಇಲ್ಲದೆ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಕಾಪಾಡಿಕೊಳ್ಳಲು ವಿದ್ಯುತ್‌ ಸಂಪರ್ಕಕ್ಕೋ, ಟಿಸಿಗಾಗಿಯೋ ನಿಮ್ಮಲ್ಲಿಗೆ ಓಡೋಡಿ ಬರುವ ರೈತರ ತುರ್ತು ಅಗತ್ಯವನ್ನೆ ಬಂಡವಾಳ ಮಾಡಿಕೊಂಡು ಅವರಿಂದ ಹಣ ಪೀಕುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ಹೊಸದಾಗಿ ವಿದ್ಯುತ್‌ ಸಂಪರ್ಕ ನೀಡಲು 50 ಸಾವಿರ ರೂ., ಅಕ್ರಮ-ಸಕ್ರಮ ಯೋಜನೆಯಡಿ ಸಂಪರ್ಕಕ್ಕೆ 20ರಿಂದ 50 ಸಾವಿರ ಹಣ ವಸೂಲಿ ಮಾಡುತ್ತಿದ್ದೀರೆಂದು ದೂರುಗಳು ಬರುತ್ತಿವೆ. ಸರ್ಕಾರ ನೀಡಿರುವ ಯೋಜನೆಯ ಲಾಭ ಫಲಾನುಭವಿ ರೈತರಿಗೆ ತಲುಪಿಸಲು ನಿಮಗೇಕೆ ಹಣ ನೀಡಬೇಕು. ಸರ್ಕಾರ ನಿಮಗೆ ಸಂಬಳ, ಸವಲತ್ತು ನೀಡುತ್ತಿಲ್ಲವೆ? ಎಂದು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಬೆಸ್ಕಾಂ ಎಇಇ ಸಿ.ಎನ್‌.ರಮೇಶ್‌ ಹಾಗೂ ಇಂಜಿನಿಯರ್‌ ಕರಿಬಸಯ್ಯ, ಅಕ್ರಮ, ಸಕ್ರಮಕ್ಕೆ ಸರ್ಕಾರ ನಿಗದಿಗೊಳಿಸಿದ ಶುಲ್ಕವನ್ನಷ್ಟೆ ಪಡೆಯಲಾಗುತ್ತಿದೆ. ಉಳಿದಂತೆ ಟಿಸಿ, ಮತ್ತಿತರೆ ಪರಿಕರಗಳಿಗೆ ರೈತರಿಂದ ಯಾವುದೇ ಹಣ ಪಡೆಯುತ್ತಿಲ್ಲ. ನಿಯಮ ಬಾಹಿರವಾಗಿ ರೈತರಿಂದ ಏನಾದರೂ ಹಣ ವಸೂಲಿ ಮಾಡಿದ್ದರೆ ನಮ್ಮ ಮೇಲೆ ಕ್ರಮ ಜರುಗಿಸಬಹುದು. ಆಗ ಶಾಸಕರು, ಈ ಬಗ್ಗೆ ಸಾಕಷ್ಟು ರೈತರು ನನ್ನ ಬಳಿ ದೂರಿದ್ದಾರೆ. ಇದು ಹೀಗೇ ಮುಂದುವರಿದರೆ ಸಹಿಸುವುದಿಲ್ಲ ಎಂದರು.

ಕಳಪೆ ಪರಿಕರ: ತಾಲೂಕಿನಲ್ಲಿ ಬೆಸ್ಕಾಂ ಕಾಮಗಾರಿಗಳು ಆಮೆಗತಿಯಲ್ಲಿ ನಡೆಯುತ್ತಿವೆ. ಗುತ್ತಿಗೆದಾರರು ಅಳವಡಿಸುವ ವಿದ್ಯುತ್‌ ಪರಿಕರಗಳು ಕಳಪೆಯಾಗಿವೆ. ಈ ಪರಿಕರಗಳನ್ನು ಒದಗಿಸುವವರು ಯಾರು, ಅಳವಡಿಸುವವರು ಯಾರು, ನೀವು ಗುಣಮಟ್ಟ ಪರಿಶೀಲಿಸುವುದಿಲ್ಲವೇ? ಎಂದು ಇಇ
ವಿಜಯಲಕ್ಷ್ಮೀಯವರನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ವಿಜಯಲಕ್ಷ್ಮೀ, ಗುತ್ತಿಗೆದಾರರ ಟೆಂಡರ್‌ ಪ್ರಕ್ರಿಯೆ ಕಂಪನಿ ಮಟ್ಟದಲ್ಲಿ ನಡೆಯುತ್ತದೆ. ಹರಿಹರ, ಹೊನ್ನಾಳಿ, ಹರಪನಹಳ್ಳಿ ತಾಲೂಕುಗಳ ಪರಿಕರ ಸರಬರಾಜಿಗೆ 50 ಕೋಟಿ ರೂ. ಟೆಂಡರ್‌ ಆಗಿದ್ದು, ಎರಡು ವರ್ಷಗಳಿಂದ ಆ ಗುತ್ತಿಗೆದಾರರು 15 ತಂಡಗಳಲ್ಲಿ ಕೆಲಸ ಮಾಡುತ್ತಿದ್ದು, 3334 ಕಾಮಗಾರಿ ವಹಿಸಲಾಗಿದೆ. ತಾಲೂಕಿನ 778 ಕಾಮಗಾರಿಗಳ ಪೈಕಿ 528 ಮುಗಿಸಿದ್ದಾರೆ. ಆದಷ್ಟು ಬೇಗ ಕಾಮಗಾರಿ ಮುಗಿಸಲು ಒತ್ತಡ ಹೇರುತ್ತಿದ್ದೇವೆ ಎಂದರು.

ಕುಡಿಯುವ ನೀರಿನ ಕೊಳವೆಬಾವಿಗಳ ವಿದ್ಯುತ್‌ ಸಂಪರ್ಕಕ್ಕೂ ತಿಂಗಳುಗಟ್ಟಲೆ ಅಲೆದಾಡಿಸಬೇಡಿ. ಯಲವಟ್ಟಿ ಗ್ರಾಮದಲ್ಲಿ ಕೊಳವೆಬಾವಿಗೆ ಮೂರು ತಿಂಗಳಿಂದ ವಿದ್ಯುತ್‌ ಸಂಪರ್ಕ ಕೊಟ್ಟಿಲ್ಲ ಎಂಬ ಆರೋಪವಿದೆ. ಕೂಡಲೆ ವಿದ್ಯುತ್‌ ಸಂಪರ್ಕ ಕಲ್ಪಿಸಿ, ಬೇಸಿಗೆಯಲ್ಲಿ ಜನರಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.

ನಂತರ ಪಿಡಿಒಗಳ ಪ್ರಗತಿ ಪರಿಶೀಲನೆಯಲ್ಲಿ ಉದ್ಯೋಗ ಖಾತ್ರಿ, ಬಸವ ವಸತಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ತಾಪಂ ಇಒ ಅನಂತರಾಜ್‌, ರಾಘವೇಂದ್ರ, ವಿವಿಧ ಇಲಾಖೆ ಅಧಿಕಾರಿಗಳಿದ್ದರು. 

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.