ರೈತರು ಸಾವಯವ ಪದ್ಧತಿಗೆ ಮರಳಲಿ


Team Udayavani, Jan 14, 2019, 6:09 AM IST

dvg-6.jpg

ದಾವಣಗೆರೆ: ಸಾವಯವ ಕೃಷಿ ಪದ್ಧತಿಯಿಂದ ಬೆಳೆದ ಸಿರಿಧಾನ್ಯಗಳನ್ನು ಬಳಸುವುದರಿಂದ ಆರೋಗ್ಯವಂತರಾಗಿರಬಹುದು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ತಿಳಿಸಿದರು.

ಭಾನುವಾರ ರೇಣುಕಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಸಾವಯವ ಕೃಷಿ ಪದ್ಧತಿಯಡಿ ಇಳುವರಿ ಕಡಿಮೆಯಾದರೂ ಚಿಂತೆ ಇಲ್ಲ. ಪೌಷ್ಟಿಕಾಂಶಯುಕ್ತ ಸಿರಿಧಾನ್ಯ ಬೆಳೆಯಬೇಕು ಎಂದು ರೈತರಿಗೆ ಮನವಿ ಮಾಡಿದರು.

ರಾಸಾಯನಿಕ ಕೃಷಿಯಿಂದ ನಾವು ಬೇರೆ ದೇಶಗಳಿಗೆ ಕೊಡುವಷ್ಟು ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಆದರೆ, ರಾಸಾಯನಿಕ ಕೃಷಿಯಿಂದ ಬೆಳೆದ ಆಹಾರ ಸೇವನೆಯಿಂದ ರೋಗಗಳು ಹೆಚ್ಚಾಗಿವೆ. ಯಾವುದೇ ರಸಗೊಬ್ಬರ, ಕೀಟನಾಶಕ ಬಳಸದೆ ಸಂಪೂರ್ಣವಾಗಿ ಸಾವಯವ ಪದ್ಧತಿಯಲ್ಲಿ ಬೆಳೆಯಬೇಕು. ಸಾವಯವ ಸಿರಿಧಾನ್ಯಕ್ಕೆ ಬೇರೆ ದೇಶಗಳಲ್ಲಿ ಹೆಚ್ಚು ಬೇಡಿಕೆ ಇದೆ. ರೈತರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಉಪಯುಕ್ತ ಮಾಹಿತಿ ಪಡೆದು, ಕೃಷಿಯಲ್ಲಿ ಅಳವಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್‌ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಆರ್‌. ಮಹೇಶ್‌ ಮಾತನಾಡಿ, ಚೀನಾದಲ್ಲಿ ಭೂಮಿ ಮತ್ತು ವಾಯುಗುಣಕ್ಕನುಸಾರವಾಗಿ ಯಾವ ಬೆಳೆ ಬೆಳೆಯಬೇಕು ಎಂಬುದನ್ನು ಸರ್ಕಾರ ನಿರ್ಧರಿಸುತ್ತದೆ. ಅಂತಹ ನಿರ್ಧಾರಗಳಿಂದ ಅಲ್ಲಿನ ಕೃಷಿಯಲ್ಲಿ ಕ್ರಾಂತಿಯಾಯಿತು. ಭಾರತದಲ್ಲೂ ಅಂತಹ ಪದ್ಧತಿ ಬರಬೇಕು. ರೈತರು ಹೆಚ್ಚಾಗಿ ಸಾವಯವ ಪದ್ಧತಿಯಲ್ಲಿ ಸಿರಿಧಾನ್ಯಗಳನ್ನು ಬೆಳೆಯಬೇಕು. ಅಂತಹ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಚ್. ಓಬಳಪ್ಪ ಮಾತನಾಡಿ, ರೈತರು ಹೆಚ್ಚಿನ ಇಳುವರಿ, ಲಾಭ ಗಳಿಸುವ ಉದ್ದೇಶದಿಂದ ವಿಜ್ಞಾನಿಗಳು ರಾಸಾಯನಿಕಗಳನ್ನು ಪರಿಚಯಿಸಿದರು. ಅಂತಹ ರಾಸಾಯನಿಕದಿಂದ ರೈತರು ಪುನಾ ಸಾವಯವ ಕೃಷಿ ಪದ್ಧತಿಗೆ ಬದಲಾಗುತ್ತಿರುವುದು ಸಾಮಾನ್ಯ ವಿಷಯವಲ್ಲ. ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ ರೈತರು ಪ್ರಾಯೋಗಿಕವಾಗಿ ಸ್ವಲ್ಪ ಭಾಗದಲ್ಲಿ ಸಾವಯವ ಕೃಷಿ ಪದ್ಧತಿಯಡಿ ಆಹಾರ ಪದಾರ್ಥ ಬೆಳೆದು, ಮನೆಗಳಿಗೆ ಉಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ದಾವಣಗೆರೆ ಮತ್ತು ಚಿತ್ರದರ್ಗ ಜಿಲ್ಲೆಗಳ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಉಪಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ನಮ್ಮ ಪೂರ್ವಿಕರು ಪ್ರಕೃತಿಗೆ ಪೂರಕವಾದಂತಹ ಕೃಷಿ ಪದ್ಧತಿ ಅನುಸರಿಸುತ್ತಿದ್ದರು. ಇಂದು ಪ್ರಕೃತಿಗೆ ವಿರುದ್ಧವಾಗಿ ಕೃಷಿ ವ್ಯವಸ್ಥೆ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ 68 ವರ್ಷಗಳಲ್ಲಿ ಜನರ ಆರೋಗ್ಯದಲ್ಲಿ ಸಾಕಷ್ಟು ಋಣಾತ್ಮಕ ಬದಲಾವಣೆಗಳಾಗಿವೆ. ಅದಕ್ಕೆ ಪ್ರಕೃತಿಗೆ ವಿರುದ್ಧವಾದ ಕೃಷಿಯೇ ಕಾರಣ. ನಾವು ವಿನಾಶದ ಹಾದಿಯಲ್ಲಿದ್ದೇವೆ. ಇದು ಈ ಪೀಳಿಗೆಗೆ ಕೊನೆಯಾಗಬೇಕು. ಎಲ್ಲಾ ರೈತರು ಸನಾತನವಾದ ಸಾವಯವ ಕೃಷಿ ಪದ್ಧತಿ ಅನುಸರಿಸಬೇಕು ಎಂದು ಮನವಿ ಮಾಡಿದರು.

ದಾವಣಗೆರೆ ತಾಲೂಕು ಪಂಚಾಯತ್‌ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿಲ್ಲಾ ಕೃಷಿಕ ಸಮಾಜದ ಕುಂದೂರು ಹನುಮಂತಪ್ಪ, ಶಾಮನೂರು ಶಿವಪ್ಪ, ಹುಚ್ಚಪ್ಪ ಇತರರು ಇದ್ದರು.

ಎರಡು ದಿನಗಳ ಮೇಳದಲ್ಲಿ 42 ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, 4 ಸಿರಿಧಾನ್ಯ ಆಹಾರ ಮಳಿಗೆ, 39 ವಿವಿಧ ಸಿರಿಧಾನ್ಯ ಖಾದ್ಯಗಳ ಪ್ರದರ್ಶನ ಮಳಿಗೆ ಇವೆ.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.