ತಂದೆ-ತಾಯಿ ಕಡೆಗಣಿಸದಿರಿ


Team Udayavani, Apr 12, 2017, 2:52 PM IST

dvg5.jpg

ಹೊನ್ನಾಳಿ: ಇಳಿ ವಯಸ್ಸಿನಲ್ಲಿ ತಂದೆ-ತಾಯಿಗಳನ್ನು ಯಾರೂ ಕಡೆಗಣಿಸಬಾರದು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ಇಲ್ಲಿನ ಹಿರೇಕಲ್ಮಠದ ಗುರುನಿವಾಸದಲ್ಲಿ ಭಾನುವಾರ ರಾತ್ರಿ ನಡೆದ ಸಂಸ್ಕೃತಿ-ಸಂಸ್ಕಾರ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈಚಿನ ದಿನಗಳಲ್ಲಿ ಕೂಡು ಕುಟುಂಬಗಳು ಕಣ್ಮರೆಯಾಗುತ್ತಿವೆ. ಹಿರಿಯ ಜೀವಗಳ ನೈತಿಕ ಕಥೆಗಳ ಆಲಿಕೆಯ ಭಾಗ್ಯವೂ ಅವರಿಗಿಲ್ಲವಾಗಿದೆ. ಇದು ನಮ್ಮ ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಕಡಿಮೆಯಾಗಲು ಕಾರಣವಾಗುತ್ತಿದೆ. ಇಂಥ ಕಾಲಘಟ್ಟದಲ್ಲಿ ಹಿರೇಕಲ್ಮಠದಲ್ಲಿ ಸಂಸ್ಕೃತಿ-ಸಂಸ್ಕಾರ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. 

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಸಂಸ್ಕಾರ ಇಲ್ಲದ ವ್ಯಕ್ತಿಯ ಜೀವನ ನಿರರ್ಥಕ. ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ನೀಡಬೇಕು. ಆಗ ಮಾತ್ರ ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡಲು ಸಾಧ್ಯ ಎಂದು ತಿಳಿಸಿದರು. ಹಿರೇಕಲ್ಮಠದ ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಮಕ್ಕಳನ್ನು ದಂಡಿಸದೇ ಶಿಕ್ಷಣ ನೀಡಬೇಕು.

ಒಳ್ಳೆಯ ಬುದ್ಧಿ ಕಲಿಸಬೇಕು.  ಈ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಗಳು, ಬೋಧಕರು ಚಿಂತಿಸಬೇಕು ಎಂದರು. ಮಕ್ಕಳು ಸಸಿಗಳಂತೆ. ಬೆಳೆಯುವ ಅವಧಿಧಿಯಲ್ಲೇ ಅವರಿಗೆ ಸಂಸ್ಕಾರ ಕಲಿಸಬೇಕು. ನೈತಿಕ ಬದುಕಿಗೆ ಅವಶ್ಯಕವಾದ ನೀತಿ ಕಥೆ, ಹಾಡು ಹೇಳುವುದು ಮತ್ತಿತರ ವಿಷಯಗಳನ್ನು ಕಲಿಸಬೇಕು.

ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಯುವಕರು ತಮ್ಮ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಲು ಸೂಕ್ತ ತರಬೇತಿ ನೀಡಲಾಗುವುದು. 15ರಿಂದ ಪ್ರತಿ ದಿನ ಬೆಳಿಗ್ಗೆ 6ರಿಂದ 7ರವರೆಗೆ ಮತ್ತು ಸಂಜೆ 5.30ರಿಂದ 6.30ರವರೆಗೆ ಉಚಿತ ಯೋಗಾಸನ ತರಬೇತಿ ಶಿಬಿರ ಆಯೋಜಿಸಲಾಗುವುದು ಎಂದರು.

ಡಾ| ಎಚ್‌.ಪಿ. ರಾಜ್‌ಕುಮಾರ್‌, ಶಾಂತರಾಜ್‌ ಪಾಟೀಲ್‌, ಪ್ರೇಮ್‌ಕುಮಾರ್‌ ಭಂಡಿಗಡಿ, ಎಸ್‌.ಎ. ಹುಡೇದ್‌, ಪಿಎಸ್‌ಐ ಎನ್‌.ಸಿ. ಕಾಡದೇವರ ಮತ್ತಿತರರಿದ್ದರು. ಚನ್ನಪ್ಪಸ್ವಾಮಿ ವಿದ್ಯಾಪೀಠದ ನಿರ್ದೇಶಕರಾದ ಎಚ್‌.ಪಿ. ರಾಮಮೂರ್ತಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹೊಸಕೇರಿ ಸುರೇಶ್‌, ಎಚ್‌.ಎ. ಉಮಾಪತಿ, ಪಪಂ ಸದಸ್ಯ ಮಂಜುನಾಥ್‌ ಸರಳಿನಮನೆ, ಕುಮಾರಸ್ವಾಮಿ, ರಾಜು, ಡಾ| ಲಿಂಗರಾಜ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.