ಮನಸೂರೆಗೊಂಡ ಜಾನಪದ ಸಿರಿ ಸಂಭ್ರಮ


Team Udayavani, Sep 4, 2017, 3:55 PM IST

04-DV-5.jpg

ದಾವಣಗೆರೆ: ಆಯಾಯ ಗ್ರಾಮ ಶಕ್ತಿದೇವತೆಗಳ ವಿವಿಧ ಪ್ರಕಾರದಲ್ಲಿ ಆರಾಧನೆ ಮಾಡುವ ಪೂಜಾ ಕುಣಿತ, ಕಾಡನ್ನೇ ದೇವರು ಎಂದು ಪೂಜಿಸುವ ಸೋಲಿಗರು ವರ್ಷಕ್ಕೊಮ್ಮೆ ಆಚರಿಸುವ ರೊಟ್ಟಿ ಹಬ್ಬದ ಸಂದರ್ಭದಲ್ಲಿ ಗೋರು…ಗೋರುಕ… ಗೋರುಕ… ಎಂಬ ಹಾಡಿಗೆ ಹಾಕುವ ಹೆಜ್ಜೆ, ಉಡುಪಿ ಜಿಲ್ಲೆಯಹ ಕುಡುಬಿ.. ಜನಾಂಗದವರು ಹೋಳಿ ಹುಣ್ಣಿಮೆಯಂದು ಹೂವಿನಿಂದ ಅಲಂಕರಿಸಿದ ಕರಗವನ್ನ ತಲೆಯ ಮೇಲೆ ಹೊತ್ತು ಕುಣಿಯುವ ಕರಗ ಕೋಲಾಟ, ವಿಜಯೋತ್ಸವದ ಸಂಕೇತದ ಕಲೆ ಪಟಾ ಕುಣಿತ, ಪೌರಾಣಿಕ ಕಥಾ ಹಿನ್ನೆಲೆಯ ಡೊಳ್ಳು ಕುಣಿತ… ಹೀಗೆ 15ಕ್ಕೂ ಹೆಚ್ಚು ಜಾನಪದ ಕಲೆಗಳ ಅತ್ಯಾಕರ್ಷಕ, ಮನ ಸೂರಗೊಳಿಸುವ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದು ಸಿರಿಗೆರೆಯ ತರಳಬಾಳು ಕಲಾಸಂಘ, ದಾವಣಗೆರೆಯ ಶಿವಸೈನ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ಜಾನಪದ ಸಿರಿ ಸಂಭ್ರಮ-2017. ಗ್ರಾಮೀಣ ಪ್ರದೇಶದ ಜನರು ದೈನಂದಿನ ಹೊಲ, ಕಣ, ಮನೆಯ ಕೆಲಸದ ಆಯಾಸ, ಬದುಕಿನ ಏಕತಾನತೆ, ಬೇಸರಿಕೆ ದೂರ ಮಾಡಲೆಂದು ಗ್ರಾಮೀಣರು ರೂಢಿಸಿಕೊಂಡ ನೆಲದ ಜಾನಪದ ಕಲೆಯು ಕ್ರಮೇಣ ಕ್ಷೀಣಿಸುತ್ತಿದ್ದು, ಅದನ್ನು ಉಳಿಸಿ, ಬೆಳೆಸುವ ಮಹತ್ತರ ಉದ್ದೇಶದಿಂದ ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಮಾರ್ಗದರ್ಶನ, ರಂಗಭೂಮಿಯ ದಿಗ್ಗಜರಲ್ಲೊಬ್ಬರಾದ ಶ್ರೀನಿವಾಸ ಜಿ. ಕಪ್ಪಣ್ಣ ಸಂಯೋಜನೆಯಲ್ಲಿ ಮೂಡಿ ಬಂದ ಜಾನಪದ ಸಿರಿ ಸಂಭ್ರಮ ನೋಡುಗರ ಮನಸೂರುಗೊಂಡಿತು.

ಸಿರಿಗೆರೆ ವಿದ್ಯಾಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ನರ್ಸರಿಯಿಂದ ಹಿಡಿದು ಪದವಿ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಜಾನಪದ ಕಲೆಗಳ ರಸದೌತಣ ಉಣ ಬಡಿಸಿದರು. ನೋಡುಗರು ಮಂತ್ರಮುಗ್ಧರಾಗುವಂತೆ ನೃತ್ಯ ಪ್ರದರ್ಶಿಸಿದರು. ಬಹು ದಿನಗಳ ನಂತರ ಒಂದೊಳ್ಳೆಯ ಜಾನಪದದ ಸಿರಿಯ ಸಂಭ್ರಮ ಅನುಭವಿಸುವ ಅವಕಾಶ ಮಾಡಿಕೊಟ್ಟರು. ಮೈಸೂರು ಭಾಗದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಬೀಸು ಕಂಸಾಳೆ, ಗಂಡುಮೆಟ್ಟಿನ ಕಲೆ ಎಂದೇ ಪರಿಗಣಿಸುವ ಡೊಳ್ಳು ಕುಣಿತ, ತುಳುನಾಡಿನ ಬುಡಕಟ್ಟು ಜನರ ಕಂಗೀಲು ನೃತ್ಯ, ಕೊಡಗಿನ ಪ್ರಮುಖ ಜನಪದ ನೃತ್ಯ ಉಮ್ಮತ್ತಾಟ್‌, ಶೈವ ಸಂಪ್ರದಾಯದ ವೀರರಸ ಪ್ರಧಾನದ ವೀರಗಾಸೆ, ಪ್ರಾಚೀನ ಸಾಂಪ್ರದಾಯಿಕ ಕ್ರೀಡೆ ಮಲ್ಲಕಂಬ, ಲಂಬಾಣಿ ಜನಾಂಗದ ಸಂಪ್ರದಾಯ ನೃತ್ಯ… ಹೀಗೆ ಪ್ರತಿಯೊಂದನ್ನು ವಿದ್ಯಾರ್ಥಿಗಳು ಚಿತ್ತಾಕರ್ಷಕವಾಗಿ ಪ್ರದರ್ಶಿಸಿದರು.

ಸಮಾಳ ಬಾರಿಸುವ ಮೂಲಕ ಜಾನಪದ ಸಿರಿ-2017 ಉದ್ಘಾಟಿಸಿದ ಶಾಸಕ ಶಾಮನೂರು ಶಿವಶಂಕರಪ್ಪ, ದೃಶ್ಯ, ಸಿನಿಮಾ ಮಾಧ್ಯಮದ ಪ್ರಭಾವದಲ್ಲಿ ನಗರ ಪ್ರದೇಶದಲ್ಲಿ ಜಾನಪದ ಕಲೆಯ ಮರೆಯ ಲಾಗುತ್ತಿದೆ. ನೆಪ ಮಾತ್ರಕ್ಕೆ ಜಾನಪದ ಕಲೆಗಳನ್ನು ಸ್ಮರಿಸಲಾಗುತ್ತಿದೆ. ಮದುವೆ,
ಮಗಳನ್ನ ಗಂಡ ಮನೆಗೆ ಕಳಿಸುವಾಗ, ಇತರೆ ಶುಭ ಸಂದರ್ಭದಲ್ಲಿ ಹಾಡುವ ಸೋಬಾನೆ… ಎಲ್ಲವೂ ಕಾಣೆಯಾಗುತ್ತಿವೆ. ಇಂತಹ ವಾತಾವರಣದಲ್ಲಿ
ಜಾನಪದ ಕಲೆಯ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಿರಿಗೆರೆ ಕಲಾಸಂಘದ ಜಾನಪದ ಸಿರಿ ಸಂಭ್ರಮ ಕಾರ್ಯಕ್ರಮವನ್ನ ದಾವಣಗೆರೆಯಲ್ಲಿ ಏರ್ಪಡಿಸಿರುವುದು ಸಂತೋಷದ ವಿಚಾರ. ಜಾನಪದ ಕಲೆಯ ಸವಿಯುವ ಜೊತೆಗೆ ಉಳಿಸಿ,  ಬೆಳೆಸುವಂತಾಗಬೇಕು ಎಂದು ಆಶಿಸಿದರು.

ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ಹಿಂದಿನ ಚಲನಚಿತ್ರಗಳಲ್ಲಿ ಜಾನಪದ ಹಾಡು, ನೃತ್ಯ  ಇರುತ್ತಿದ್ದವು. ಈಗಿನ ಚಲನಚಿತ್ರಗಳಲ್ಲಿ ಹಾಡು, ಕುಣಿತ ನೋಡಿದರೆ ಯಾವುದೇ ತಿರುಳೇ ಇರುವುದಿಲ್ಲ. ಸಿರಿಗೆರೆ ವಿದ್ಯಾಸಂಸ್ಥೆಯ ಮಕ್ಕಳು ದಾವಣಗೆರೆಯಲ್ಲೂ ಜಾನಪದ ಕಲೆಯ ಪ್ರದರ್ಶನ ನೀಡುತ್ತಿರುವುದು ಸಂತೋಷದ ವಿಚಾರ ಎಂದರು. ಸಾನ್ನಿಧ್ಯ ವಹಿಸಿದ್ದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದೇಶದ ಸಂಸ್ಕೃತಿಯ ಪ್ರತೀಕವಾಗಿರುವ ಕಲಾ ಸಂಪತ್ತು ಅನೇಕ ಕಾರಣದಿಂದ ಕೀಣಿಸುತ್ತಿದೆ. ನದಿ, ನೀರು, ಕೆರೆಗಳು ಬತ್ತಿ  ಗಿತ್ತಿರುವಂತೆಯೇ ಕಲಾ ಸಂಪತ್ತು ಬತ್ತಿ ಹೋಗುತ್ತಿದೆ. ತಾನಾಗಿಯೇ ಪ್ರವರ್ಧಮಾನಕ್ಕೆ ಬಂದಿರುವ ಗ್ರಾಮೀಣ ಜನರ ನೋವು, ನಲಿವು, ಸಂತೋಷ. ಸಂಭ್ರಮದ ಪ್ರತೀಕವಾಗಿರುವ
ಜಾನಪದ ಕಲೆಯ ಉಳಿಸಿ, ಬೆಳಸುವ ನಿಟ್ಟಿನಲ್ಲಿ ಸಿರಿಗೆರೆ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವ ಗ್ರಾಮೀಣ ಭಾಗದ 350ಕ್ಕೂ ವಿದ್ಯಾರ್ಥಿಗಳು ತರಬೇತಿ ಪಡೆದು, ಪ್ರದರ್ಶನ ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಸಾದು ಸದ್ಧರ್ಮ ಸಂಘದ ಅಧ್ಯಕ್ಷ ಕೆ.ಆರ್‌. ಜಯದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ಮುದೇಗೌಡ್ರು ಗಿರೀಶ್‌, ಜಿಲ್ಲಾ ಪಂಚಾಯತಿ ಸದಸ್ಯ ಕೆ.ಎಸ್‌. ಬಸವಂತಪ್ಪ, ಮಾಜಿ ಸದಸ್ಯ ಕೆ.ಜಿ. ಬಸವನಗೌಡ, ಹೋಟೆಲ್‌ ಉದ್ಯಮಿ ಅಣಬೇರು ರಾಜಣ್ಣ, ಅಗಸನಕಟ್ಟೆ ಶಿವಮೂರ್ತಿ, ಕೆಎಸ್ಸೆಸ್‌ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್‌. ಕೆ. ಬಸವರಾಜ್‌, ಶಿವಸೈನ್ಯದ ಗೌರವ ಅಧ್ಯಕ್ಷ ಶಶಿಧರ್‌ ಹೆಮ್ಮನಬೇತೂರು, ಅಧ್ಯಕ್ಷ ಅಗಸನಕಟ್ಟೆ ಲಿಂಗರಾಜ್‌ ಇತರರು ಇದ್ದರು. 

ಹಾವು ಬಿಡಲಿಲ್ಲ…
ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಯಾವುದೇ ಸಭೆ, ಸಮಾರಂಭದಲ್ಲಾಗಲಿ ಹಾವು ಬಿಡುವುದು ಸಾಮಾನ್ಯ. ಅದೇ ರೀತಿ ಶಾಸಕ ಶಾಮನೂರು ಶಿವಶಂಕರಪ್ಪ ಸಭೆ, ಸಮಾರಂಭಕ್ಕೆ ತಡವಾಗಿ ಬರುವುದು ಸಾಮಾನ್ಯ. ರವೀಂದ್ರನಾಥ್‌ ಹಾವು ಬಿಡದೇ ಇರುವುದು, ಶಾಮನೂರು
ಶಿವಶಂಕರಪ್ಪ ಮೊದಲೇ ಆಗಮಿಸಿದ್ದು ಇಂದಿನ ಕಾರ್ಯಕ್ರಮದ ವಿಶೇಷ ಎಂದು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿಶ್ಲೇಷಿಸಿದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.