ಆಧಾರ್‌ ನೋಂದಣಿಗೆ ಪರದಾಟ


Team Udayavani, Aug 3, 2017, 2:05 PM IST

03-DV-1.jpg

ಜಗಳೂರು: ಕೇಂದ್ರ ಸರ್ಕಾರ ಕೆಲವೊಂದು ಯೋಜನೆಗಳಿಗೆ ಆಧಾರ್‌ ಕಾರ್ಡ್‌ ಕಡ್ಡಾಯ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬೆಲೆ ಬಂದಿದ್ದು, ತಾಲೂಕಿನ ನಾಗರಿಕರು ಆಧಾರ್‌ ಕಾರ್ಡ್‌ ನೋಂದಣಿಗಾಗಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಆಧಾರ್‌ ಕಾರ್ಡ್‌ ಕಡ್ಡಾಯವಾಗಿ ಬೇಕಾಗಿದೆ. ಗ್ಯಾಸ್‌, ಬ್ಯಾಂಕ್‌, ಉದ್ಯೋಗ ಖಾತ್ರಿ ಯೋಜನೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಿಗೂ ಇಲ್ಲಿ ಆಧಾರ್‌ ಕಡ್ಡಾಯ. ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಹೋಬಳಿಗೊಂದು ಆಧಾರ್‌ ಸೇವಾ ಕೇಂದ್ರ ಸ್ಥಾಪಿಸಿದೆ. ಆದರೆ, ಸೌಲಭ್ಯಗಳಿಲ್ಲದೆ ಇದ್ದೂ ಇಲ್ಲದಂತಾಗಿದೆ.

ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಆಧಾರ್‌ ಸೇವಾ ಕೇಂದ್ರಕ್ಕೆ ಹೋದರೆ ವಿದ್ಯುತ್‌ ಇಲ್ಲ.. ಸರ್ವರ್‌ ಬ್ಯುಸಿ.. ಇಂಟರ್‌ನೆಟ್‌ ಇಲ್ಲ ಎಂಬ ಮಾತುಗಳು ಸಾಮಾನ್ಯವಾಗಿವೆ. ಹೀಗಾಗಿ ತಾಲೂಕು ಕೇಂದ್ರಕ್ಕೆ ಗ್ರಾಮೀಣ ಭಾಗದ ಜನರು ಆಗಮಿಸುವುದು ಹೆಚ್ಚಾಗಿದೆ. ಆದರೆ, ಇಲ್ಲಿನ ಮಿನಿವಿಧಾನ ಸೌಧ ಆವರಣದಲ್ಲಿರುವ ಆಧಾರ್‌ ಸೇವಾ ಕೇಂದ್ರದಲ್ಲಿ ಹೋಬಳಿ ಭಾಗಕ್ಕಿಂತ ಭಿನ್ನವಾಗಿ ಏನು ಇಲ್ಲ..! ತಾಲೂಕು ಕೇಂದ್ರದಲ್ಲಿರುವ ಆಧಾರ್‌ ಸೇವಾ ಕೇಂದ್ರದಲ್ಲಿ ಆಧಾರ್‌ ನೋಂದಣಿಗಾಗಿಯೇ ವಾರದ ಮೊದಲು ಟೋಕನ್‌ ಪಡೆದುಕೊಳ್ಳಬೇಕಿದೆ.  ಪಡೆದ ನಂತರ ಸರದಿ ಸಾಲಿನಲ್ಲಿ ನಿಂತು ಸಾರ್ವಜನಿಕರು ನೋಂದಾಯಿಸಲು ಮಂದಾದರೂ ಪ್ರತಿಯೊಬ್ಬರಿಗೂ ದೊರೆಯುವುದಿಲ್ಲ. ಕೂಲಿನಾಲಿ ಬಿಟ್ಟು ಬರುವ ಕೂಲಿಕಾರ್ಮಿಕರು ಪೆಚ್ಚು ಮೋರೆ ಹಾಕಿಕೊಂಡು ಮನೆಗಳತ್ತ ಬಂದ ದಾರಿಗೆ ಸುಂಕವಿಲ್ಲದಂತೆ ತೆರಳ ಬೇಕಾದ ಸನ್ನೀವೇಶ ಸೃಷ್ಠಿಯಾಗಿದೆ. ಆಧಾರ್‌ ಸೇವಾ ಕೇಂದ್ರದಲ್ಲಿ ದಿನವೊಂದಕ್ಕೆ ಸರಿ ಸುಮಾರು 15ರಿಂದ 20 ಮಂದಿಗೆ ಮಾತ್ರ ಆಧಾರ್‌ ನೋಂದಣಿಗೆ ಅವಕಾಶ ದೊರೆಯುತ್ತಿದೆ. ಉಳಿದವರು ಮರುದಿನ ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲಬೇಕು. ಆಧಾರ್‌ ಕಾರ್ಡ್‌ ಇಲ್ಲವಾದರೆ ಉದ್ಯೋಗಖಾತ್ರಿ ಯೋಜನೆಯಡಿ ಕೂಲಿ ಇಲ್ಲ ಎನ್ನುವ ಮಾತುಗಳು ಅಧಿಕಾರಿಗಳಿಂದ ಬರುತ್ತಿವೆ. ನಿರ್ಮಿಸಿರುವ ಮನೆಯ ಬಿಲ್‌ ಪಾವತಿಗೂ ಆಧಾರ್‌ ಕಾರ್ಡ್‌ ಕೇಳುತ್ತಿದ್ದಾರೆ. ಕೂಲಿ ಕೆಲಸ ಬಿಟ್ಟು ಆಧಾರ್‌ ಕಾರ್ಡ್‌ ನೋಂದಾಯಿಸಲು ಬೆಳಗ್ಗೆಯಿಂದ ಸರದಿ ಸಾಲಿನಲ್ಲಿ ನಿಂತರು ಕೂಡಾ ನೋಂದಣಿ ಸಾಧ್ಯವಾಗುತ್ತಿಲ್ಲ ಆಧಾರ್‌ ಸೇವಾ ಸಿಬ್ಬಂದಿಗಳೂ ಇನ್ನೊಂದು ವಾರ ಬಿಟ್ಟು ಬನ್ನಿ ಎನ್ನುತ್ತಿದ್ದಾರೆ ಎಂದು ನೋಂದಣಿಗೆ ಆಗಮಿಸುವ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಚೆ ಕಚೇರಿಯಲ್ಲಿ ಸ್ಥಗಿತ: ಆಧಾರ್‌ ಕಾರ್ಡ್‌ನಲ್ಲಾಗಿರುವ ತಪ್ಪುಗಳನ್ನು ತಿದ್ದುಪಡಿ ಮಾಡುವ ಸಂಬಂಧ ಜಗಳೂರು ಅಂಚೆ ಕಚೇರಿಯಲ್ಲಿ ಕಳೆದ ತಿಂಗಳಲ್ಲಿ ಕಾರ್ಯಾರಂಭವಾಗಿದ್ದ ಸೇವಾ ಕೇಂದ್ರ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದೆ. ಚಿತ್ರದುರ್ಗ ಅಂಚೆ ಅಧೀಕ್ಷಕರು ಕಳೆದ ಜುಲೈ ತಿಂಗಳ 17ರಂದು ಆಧಾರ್‌ತಿದ್ದು ಪಡಿ ಸೇವೆಗೆ ಚಾಲನೆ ನೀಡಿದ್ದರು. ಆದರೆ 15 ದಿನ ಕಳೆದರೂ ಕೂಡಾ ಸೇವೆ ಕಾರ್ಯಾರಂಭವಾಗಿಲ್ಲ. ಈ ಮೇಲ್‌
ಐಡಿ, ಮೊಬೈಲ್‌ ಸಂಖ್ಯೆ, ಭಾವಚಿತ್ರಗಳಲ್ಲಿ ಬದಲಾವಣೆ, ವಿಳಾಸ ಬದಲಾವಣೆ, ಆಧಾರ್‌ ಕಾರ್ಡ್‌ನಲ್ಲಾಗಿರುವ ತಪ್ಪುಗಳ ತಿದ್ದಪಡಿಗೆ ಸಾಕಷ್ಟು ನಾಗರಿಕರು ಬಂದು ಹೋಗುತ್ತಿದ್ದಾರೆ. 

ತಾಲೂಕಿನಲ್ಲಿ ಆಧಾರ್‌ ನೋಂದಣಿಗೆ ಸಮಸ್ಯೆ ಎದುರಾಗುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ನಿರ್ಲಕ್ಷ ವಹಿಸಿದ್ದಾರೆ. ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಅರಿತು ಆಧಾರ್‌ ಸೇವಾ ಕೇಂದ್ರಕ್ಕೆ ಬೇಕಾಗುವ ಸೌಲಭ್ಯಗಳನ್ನು ಒದಗಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ. 

ಪ್ರತ್ಯೇಕ ಕೌಂಟರ್‌ ಇಲ್ಲ
ಹೋಬಳಿ ಕೇಂದ್ರದಲ್ಲಿರುವ ಆಧಾರ್‌ ನೋಂದಣಿಗೆ ಪ್ರತ್ಯೇಕ ಕೌಂಟರ್‌ ತೆರೆದಿಲ್ಲ. ಬದಲಿಗೆ ಕಂದಾಯ ಇಲಾಖೆ ನೀಡುವ ಇತರೆ ಸೇವೆಗಳ ಜತೆಗೆ ಆಧಾರ್‌ ಸೇವೆ ನೀಡಲಾಗುತ್ತಿದೆ. ಕಾರ್ಯಾಭಾರ ಇದ್ದಾಗ ನೋಂದಣಿಗೆ ಸ್ವಲ್ಪ ತೊಂದರೆಯಾಗುತ್ತದೆ. ಹೀಗಾಗಿ ನಾಗರಿಕರು ಜಗಳೂರು ತಾಲೂಕು ಕೇಂದ್ರಕ್ಕೆ ಬರುತ್ತಿದ್ದಾರೆ. ಜನರಿಂದ ತುಂಬಿ ಹೋಗುತ್ತಿರುವುದರಿಂದ ಟೋಕನ್‌ ಸಿಸ್ಟಮ್‌ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇನ್ನೊಂದು ವಾರದೊಳಗೆ ಆಧಾರ್‌ ನೋಂದಾವಣೆಗಾಗಿಯೇ ಮುಕ್ತ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. 
ಶ್ರೀಧರಮೂರ್ತಿ, ತಹಶೀಲ್ದಾರ್‌, ಜಗಳೂರು.

25 ರೂ. ಕೊಟ್ಟರೆ ಆಧಾರ್‌
ಕಾರ್ಡ್‌ನಲ್ಲಾಗಿರುವ ತಪ್ಪುಗಳನ್ನು ಸರಿಮಾಡಿಕೊಡುತ್ತಾರೆ ಎಂದು ಹೇಳಿದ್ದರಿಂದ ಅಂಚೆ ಕಚೇರಿಗೆ ಬಂದಿದ್ದೇವೆ. ಸಿಬ್ಬಂದಿಗಳು ಇನ್ನು ಕಾರ್ಯಾರಂಭವಾಗಿಲ್ಲ ಎನ್ನುತ್ತಿದ್ದಾರೆ. ತಾಲೂಕಿನ ಆಧಾರ್‌ ಸೇವಾ ಕೇಂದ್ರಕ್ಕೆ ಹೋದರೆ ಕರೆಂಟ್‌ ಇಲ್ಲ.. ಸರ್ವರ್‌ ಸರಿಯಿಲ್ಲ ಎನ್ನುತ್ತಾರೆ.
ನೀಲಮ್ಮ, ದೊಡ್ಡಬೊಮ್ಮನಹಳ್ಳಿ ರೈತ ಮಹಿಳೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.