ಹಾಲಿ-ಮಾಜಿ ಶಾಸಕ ರಿಂದ ನಾಮಪತ್ರ ಸಲ್ಲಿಕೆ


Team Udayavani, Apr 20, 2018, 12:51 PM IST

dvg-3.jpg

ಹೊನ್ನಾಳಿ: ವಿಧಾನಸಭಾ ಚುನಾವಣೆಗೆ ದಾವಣಗೆರೆ ಜಿಲ್ಲೆ ಹೊನ್ನಾಳಿ-110 ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಳಗ್ಗೆ 11ಕ್ಕೆ ಕಾಂಗ್ರೆಸ್‌ ಪಕ್ಷದ ಶಾಸಕ ಡಿ.ಜಿ. ಶಾಂತನಗೌಡ ನಾಲ್ವರು ಬೆಂಬಲಿಗರೊಂದಿಗೆ ತಾಲೂಕು ಕಚೇರಿ
ಚುನಾವಣಾಧಿಕಾರಿಗಳ ಸಭಾಂಗಣಕ್ಕೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು.

ಏ. 23ರಂದು ಅವರು ಮತ್ತೂಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12ರ ನಂತರ ಮಾಜಿ ಸಚಿವ, ಬಿಜೆಪಿ ಪಕ್ಷದ ಎಂ.ಪಿ. ರೇಣುಕಾಚಾರ್ಯ ಅಪಾರ ಕಾರ್ಯಕರ್ತರ ಜತೆ ತಾಲೂಕು ಕಚೇರಿಗೆ ಆಗಮಿಸಿದರು. ನಂತರ ನಾಲ್ಕು ಮಂದಿ ಬೆಂಬಲಿಗರೊಂದಿಗೆ ಚುನಾವಣಾಧಿ ಕಾರಿ ಬಸವನಗೌಡ ಅವರಿಗೆ ನಾಮಪತ್ರ ಸಲ್ಲಿಸಿದರು.

ರೇಣುಕಾಚಾರ್ಯ ಅವರು ಏ. 24ರಂದು ಮತ್ತೂಂದು ನಾಮಪತ್ರ ಸಲ್ಲಿಸಲಿದ್ದಾರೆ. ಇವರಿಬ್ಬರ ನಾಮಪತ್ರಗಳಲ್ಲಿ , ಬಿ ಫಾರಂ, ಆಸ್ತಿ ಘೋಷಣೆ ಇರಲಿಲ್ಲ. ಇನ್ನೊಮ್ಮೆ ನಾಮಪತ್ರ ಸಲ್ಲಿಕೆ ವೇಳೆ ಎಲ್ಲ ದಾಖಲೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಭ್ರಷ್ಟಾಚಾರ ವಿರೋಧಿ ವೇದಿಕೆ ರಾಜ್ಯಾಧ್ಯಕ್ಷ ಗುರುಪಾದಯ್ಯ ಕಬ್ಬಿಣಕಂತಿಮಠ ಆಗಮಿಸಿ ಪಕ್ಷೇತರ ಅಭ್ಯರ್ಥಿಯಾಗಿ
ನಾಮಪತ್ರ ಸಲ್ಲಿಸಿದರು.

ಗುರುಪಾದಯ್ಯ ಕೂಡ ಏ. 20ರಂದು ಸಕಲ ದಾಖಲೆಗಳೊಂದಿಗೆ ಮತ್ತೆ ನಾಮಪತ್ರ ಸಲ್ಲಿಸಲಿದ್ದಾರೆ. ಸಹಾಯಕ ಚುನಾವಣಾಧಿಕಾರಿ ತುಷಾರ್‌ ಬಿ.ಹೊಸೂರು ಇದ್ದರು. ಸಿಪಿಐ ಜೆ. ರಮೇಶ್‌ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. 

ಮೊದಲ ಹಂತದಲ್ಲಿ ಹೊನ್ನಾಳಿಗೆ 100 ಜನರ ಸಿಆರ್‌ಪಿಎಫ್‌ ತಂಡ
ಹೊನ್ನಾಳಿ:
ಹೊನ್ನಾಳಿ ವಿಧಾನಸಭಾ ಕ್ಷೇತ್ರ ಅತೀ ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಈಗಾಗಲೇ ಮೊದಲ ಹಂತದಲ್ಲಿ 100 ಜನರ ಸಿಆರ್‌ಪಿಎಫ್‌ ಪಡೆ ತಾಲೂಕಿಗೆ ಬಂದಿಳಿದಿದೆ ಎಂದು ಸಿಪಿಐ ರಮೇಶ್‌. ಜೆ ತಿಳಿಸಿದರು. ಗುರುವಾರ ತಾಲೂಕು ಕಚೇರಿ ಆವರಣದಲ್ಲಿ ಸ್ಥಳೀಯ ಪೊಲೀಸರೊಂದಿಗೆ ಸಿಆರ್‌ಪಿಎಫ್‌ ಪಡೆಯನ್ನು ಭದ್ರತೆಗೆ ನಿಯೋಜಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಾಲೂಕಿನ ಗಡಿ ಭಾಗಗಳಾದ ಹೊಳೆಹರಳಹಳ್ಳಿ ಗೇಟ್‌, ಸವಳಂಗ, ಗೊಲ್ಲರಹಳ್ಳಿ, ಟಿ.ಗೋಪಗೊಂಡನಹಳ್ಳಿ ಹಾಗೂ ಲಿಂಗಾಪುರ ಬಳಿ ಚೆಕ್‌ಪೋಸ್ಟ್‌ ಪ್ರಾರಂಭಿಸಲಾಗಿದ್ದು, ಅಲ್ಲಿಯೂ ಸಹ ಕೇಂದ್ರ ಮೀಸಲು ಪಡೆಯನ್ನು ನಿಯುಕ್ತಿಗೊಳಿಸಲಾಗಿದೆ ಎಂದು ತಿಳಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಜೊತೆ ನಾಲ್ವರನ್ನು ಹೊರತುಪಡಿಸಿ ಯಾರಿಗೂ ಸಹ 100 ಮೀಟರ್‌ ಒಳಗೆ ಪ್ರವೇಶ ಇಲ್ಲ. ಯಾರೇ ಕಾರ್ಯಕರ್ತರಿರಲಿ, ಅವರೆಲ್ಲ 100 ಮೀಟರ್‌ ಹೊರಗೆ ಇರಬೇಕು ಎಂದರು.

ನಾಮಪತ್ರ ಸಲ್ಲಿಸುವಾಗ, ಚುನಾವಣೆ ಪ್ರಚಾರದ ವೇಳೆ ಹಾಗೂ ಇನ್ನಿತರ ಸಭೆ ಸಮಾರಂಭಗಳು ನಡೆಸುವಾಗ ಅನಗತ್ಯವಾಗಿ ಗೊಂದಲವನ್ನುಂಟು ಮಾಡುವ ಅಥವಾ ಕಾನೂನು ಭಂಗ ಮಾಡುವ ಯಾರೇ ಆದರೂ ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ತಾಲೂಕಿನಲ್ಲಿರುವ ಸೂಕ್ಷ್ಮ, ಅತೀ ಸೂಕ್ಷ್ಮ ಹಾಗೂ ಸಾಮಾನ್ಯ ಮತಗಟ್ಟೆಗಳ ಬಗ್ಗೆ ಚುನಾವಣಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದರು  

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.