ಶಾಲಾ ಶಿಕ್ಷಕಿಯ ಶಪಥ: ಅಂತೂ ರಾಂಪುರಕ್ಕೆ ಬಂತು ಸರ್ಕಾರಿ ಬಸ್!
ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ; ಶಿಕ್ಷಕಿಯ ಶಪಥ
Team Udayavani, Sep 24, 2021, 4:29 PM IST
ದಾವಣಗೆರೆ: “ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ’ ಎಂದು ಶಪಥ ಮಾಡುವ ಜೊತೆಗೆ ಪ್ರಧಾನಿ ಮತ್ತು ಮುಖ್ಯಮಂತ್ರಿ ಒಳಗೊಂಡಂತೆ ಅನೇಕರ ಗಮನ ಸೆಳೆದಿದ್ದ ಖಾಸಗಿ ಶಾಲಾ ಶಿಕ್ಷಕಿ ಬಿಂದು ಅವರ ಸ್ವಗ್ರಾಮ ದಾವಣಗೆರೆ ತಾಲೂಕಿನ ಎಚ್. ರಾಂಪುರ ಗ್ರಾಮಕ್ಕೆ ಸಾರಿಗೆ ಸಂಸ್ಥೆ ಬಸ್ ಸಂಚಾರ ಪ್ರಾರಂಭವಾಗಿದೆ.
ಖಾಸಗಿ ಶಾಲಾ ಶಿಕ್ಷಕಿ ಬಿಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯುವ ಮೂಲಕ ಗಮನ ಸೆಳೆದಿದ್ದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೆ. 16 ರಂದು ರಾಂಪುರ ಗ್ರಾಮಕ್ಕೆ ಭೇಟಿ ನೀಡಿ ರಸ್ತೆ ನಿರ್ಮಾಣದ ಜೊತೆಗೆ ಬಸ್ ಸೌಲಭ್ಯ ಪ್ರಾರಂಭಿಸುವ ಬಗ್ಗೆ ಗ್ರಾಮಸ್ಥರಿಗೆ ಭರವಸೆ ನೀಡಿದ್ದರು. ಬಿಂದು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಬೇಡಿಕೆ ಈಡೇರಿಸುವುದಾಗಿ ತಿಳಿಸಿದ್ದರು.
ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿದ ಮರುದಿನವೇ ರಸ್ತೆ ಕಾಮಗಾರಿ ಪ್ರಾರಂಭವಾಗಿದ್ದು, ಮುಕ್ತಾಯ ಹಂತದಲ್ಲಿದೆ. ಕಳೆದ ಎರಡು ದಿನಗಳಿಂದ ಸಂಜೆ 5:30ಕ್ಕೆ ರಾಂಪುರಕ್ಕೆ ಬಸ್ ಬಂದು ಹೋಗುತ್ತಿದೆ. ನಮ್ಮ ಊರಿಗೆ ಪ್ರತಿ ದಿನ ಸಾಯಂಕಾಲ ಸಂಜೆ 5:30ಕ್ಕೆ ಗೌರ್ಮೆಂಟ್ ಬಸ್ ಬಂದು ಹೋಗುತ್ತಿದೆ. ರಸ್ತೆ ಕೆಲಸಾನೂ ನಡೆಯುತ್ತಿದೆ. ಬೆಳಗ್ಗೆ ಹೊತ್ತೂ ಬಸ್ ಬಂದು ಹೋದರೆ ಬಹಳ ಅನುಕೂಲ ಆಗುತ್ತದೆ ಎಂದು ಶಾಲಾಭಿವೃದ್ಧಿ ಸಮಿತಿ ಸದಸ್ಯ ರಮೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ