ಮಾಸ್ಕ್ ಧರಿಸದವರಿಗೆ ದಂಡದ ಬಿಸಿ

ದಾವಣಗೆರೆಯ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದ ಡಿಸಿ ನೇತೃತ್ವದ ತಂಡ

Team Udayavani, Nov 4, 2020, 6:15 PM IST

dg-tdy-1

ವಿಜಯಪುರ: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಜೊತೆಗೆ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ, ಭತ್ಯೆ ಕೊಡಿಸುವಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘ ಸರ್ಕಾರದೊಂದಿಗೆ ನಿರಂತರ ಒತ್ತಡ ಹೇರುತ್ತಿದೆ. ಸರ್ಕಾರ ನೌಕರರ ಬೇಡಿಕೆ ಈಡೇರಿಕೆ ನಿರ್ಲಕ್ಷ್ಯ ಮಾಡಿದಲ್ಲಿ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್‌.ಷಡಕ್ಷರಿ ಹೇಳಿದರು.

ಮಂಗಳವಾರ ನಗರದಲ್ಲಿ ನೌಕರರ ಸಮಸ್ಯೆ ಕುರಿತ ಚರ್ಚೆ, ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸಂಘದ ಅಧ್ಯಕ್ಷನಾದ ಒಂದು ವರ್ಷದ ಅವಧಿಯಲ್ಲಿ ಹಲವು ವರ್ಷಗಳ ಬೇಡಿಕೆಯಾಗಿದ್ದ ಸುಮಾರು 20 ಬೇಡಿಕೆ ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇನೆ. ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರ ವೇತನ ತಾರತಮ್ಯ, ಸಿ ಆ್ಯಂಡ್‌ ಆರ್‌, ಸಕಾಲಕ್ಕೆ ವೇತನ ಬಡ್ತಿ ನೀಡದಿರುವುದು, ಪ್ರತಿ ತಿಂಗಳು ವೇತನ ನೀಡಿಕೆಯಂಥ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ ಎಂದರು.

ರಾಜ್ಯದ ಸರ್ಕಾರಿ ನೌಕರರು ಒಳ-ಹೊರ ರೋಗಿಯಾಗಿ ಸಂಪೂರ್ಣ ನಗದು ರಹಿತ ಚಿಕಿತ್ಸೆ ಪಡೆಯಲು ಅನುಕೂಲ ಆಗುವಂತೆ ಆರೋಗ್ಯ ಯೋಜನೆ ಜಾರಿಗೆ ತರಲಾಗುತ್ತಿದೆ. ಸದರಿ ಯೋಜನೆಯಲ್ಲಿ ಎಲ್ಲ ಔಷ ಧ ಇತರೆ ಆರೋಗ್ಯ ಸೇವೆ ಉಚಿತವಾಗಿ ದೊರೆಯಲಿದೆ. ರೋಗಿಗಳಿಗೆ ವಾಹನ ಸೌಲಭ್ಯವೂ ಸಿಗಲಿದೆ. ಇದೆ ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ರಾಜ್ಯ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ ಮಾತನಾಡಿ, ಸಂಘಗಳು ನೌಕರರ ಹಿತ ಕಾಪಾಡಬೇಕು. ಈ ವಿಷಯದಲ್ಲಿ ಸಂಘ ತನ್ನ ಬದ್ಧತೆ ಮೆರೆಯುತ್ತಿದೆ ಎಂದು ವಿವರಿಸಿದರು.

ವಿಜಯಪುರ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಸುರೇಶ ಶೇಡಶ್ಯಾಳ ಮಾತನಾಡಿ, ಎನ್‌ಪಿಎಸ್‌ ಎಂಬುದು ವಿಷಮ ಕಳೆ ಇದ್ದಂತೆ. ಹೀಗಾಗಿ ಕೂಡಲೇ ಸರ್ಕಾರ ಎನ್‌ಪಿಎಸ್‌ ರದ್ದುಗೊಳಿಸಲು ರೂಪಿಸಿರುವ ಸಮಿತಿ ವರದಿಯನ್ನು ತುರ್ತಾಗಿ ಜಾರಿಗೆ ತರಬೇಕು ಎಂದರು.

ಆದರ್ಶ ಶಿಕ್ಷಕ ವೇದಿಕೆ ಸಂಚಾಲಕ ಜಗದೀಶ ಬೋಳಸೂರ ಪ್ರಾಸ್ತಾವಿಕ ಮಾತನಾಡಿದರು.ಸದಾಶಿವ ಹಂಚಲಿ ಮಾತನಾಡಿದರು. ಶ್ರೀಶೈಲ ಅಕ್ಷರ, ಮೋಹನ, ಶಂಭುಲಿಂಗನಗೌಡ, ಜುಬೇರ ಕೆರೂರ, ರಾಜಶೇಖರ ದೈವಾಡಿ, ವಿಜಯಕುಮಾರ ಹತ್ತಿ, ಗಂಗಾಧರ ಜೇವೂರ, ಉಮೇಶ ಕವಲಗಿ, ರಾಜು ಬಿಸನಾಳ, ಶಿವಾನಂದ ಮಂಗಾನವರ, ಅಶೋಕ ಪಾಟೀಲ, ರಾಘು ಕುಲಕರ್ಣಿ, ಭೀಮನಗೌಡ ಬಿರಾದರ, ಎಸ್‌.ಬಿ.ಬಿರಾದಾರ, ಆರ್‌.ಎನ್‌. ಅಂಗಡಿ, ಎಂ.ಎನ್‌. ಅಂಗಡಿ, ಎಂ.ಎಸ್‌. ಬೂಸಾಗೊಂಡ, ಎಚ್‌.ಎಂ. ಚಿತ್ತರಗಿ, ಬಸವರಾಜ ಬೇವನೂರ, ಎ.ಎಂ. ಬಗಲಿ, ಎಸ್‌. ಎನ್‌. ಪಡಶೆಟ್ಟಿ, ಬಸವರಾಜ ದೊರನಹಳ್ಳಿ, ಎಚ್‌. ಕೆ. ಬೂದಿಹಾಳ, ಚಿನ್ನಯ್ಯ ಮಠಪತಿ, ಸಂತೋಷ ಕುಲಕರ್ಣಿ, ರವೀಂದ್ರ ಉಗಾರ, ಬಸವರಾಜ ಅಮರಪ್ಪಗೋಳ ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.