ಮೊದಲ ಹಂತದ ಫಲಾನುಭವಿಗಳ ಪಟ್ಟಿ ಸಿದ್ಧ


Team Udayavani, Nov 27, 2020, 5:41 PM IST

ಮೊದಲ ಹಂತದ ಫಲಾನುಭವಿಗಳ ಪಟ್ಟಿ ಸಿದ್ಧ

ದಾವಣಗೆರೆ: ಕೋವಿಡ್‌-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್‌ ಲಸಿಕೆಯನ್ನು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ವಿತರಿಸಲು ಬೇಕಿರುವ ಎಲ್ಲಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಮೊದಲ ಹಂತದ10,115 ಫಲಾನುಭವಿಗಳ ಪಟ್ಟಿ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಜಿಲ್ಲಾ ಆರೋಗ್ಯ ಅಭಿಯಾನ ಕಾರ್ಯಕಾರಿ ಸಮಿತಿ ಸಭೆ ಹಾಗೂ ಆರೋಗ್ಯಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕೋವಿಡ್‌ ತಡೆಗೆ ಎಲ್ಲ ಹಂತಗಳ ಪ್ರಯೋಗದಬಳಿಕ ಯಶಸ್ವಿಯಾಗಿ ಬಳಸಬಹುದಾದ ಲಸಿಕೆಶೀಘ್ರ ಪೂರೈಕೆಯಾಗುವ ಸಾಧ್ಯತೆಗಳಿದ್ದು, ಸರ್ಕಾರದನಿರ್ದೇಶನದಂತೆ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ನೀಡಬೇಕಿದೆ. ಹೀಗಾಗಿ ಜಿಲ್ಲೆಯಲ್ಲಿ ಖಾಸಗಿ ಹಾಗೂಸರ್ಕಾರಿ ಆಸ್ಪತ್ರೆಗಳು, ಮೆಡಿಕಲ್‌ ಕಾಲೇಜು, ನರ್ಸಿಂಗ್‌ಹೋಂಗಳು, ಪ್ಯಾರಾ ಮೆಡಿಕಲ್‌ ಸೇರಿದಂತೆ ಆರೋಗ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ವೈದ್ಯರು, ನರ್ಸ್‌ಗಳು,ಸಿಬ್ಬಂದಿಗಳು, ಪ್ರಯೋಗಶಾಲಾ ತಂತ್ರಜ್ಞರು ಸೇರಿದಂತೆಎಲ್ಲ ಆಶಾ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಲುಅಂಕಿ ಅಂಶಗಳನ್ನು ಸಂಗ್ರಹಿಸುವುದು, ಲಸಿಕೆ ದಾಸ್ತಾನು ಹಾಗೂ ವಿತರಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ನಿಗದಿತ ಕಾಲಮಿತಿಯೊಳಗೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಮೀನಾಕ್ಷಿ ಮಾಹಿತಿ ನೀಡಿ, ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಜಿಲ್ಲೆಯ 100 ಸರ್ಕಾರಿ ಆಸ್ಪತ್ರೆಗಳು, 450 ಖಾಸಗಿ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು,ಮೆಡಿಕಲ್‌ ಕಾಲೇಜುಗಳ ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ, ಪ್ರಯೋಗಶಾಲಾ ತಂತ್ರಜ್ಞರು, ಗ್ರೂಪ್‌-ಡಿ,ಚಾಲಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಖಾಸಗಿ ಸಂಸ್ಥೆಗಳ 6230 ಜನಹಾಗೂ ಸರ್ಕಾರಿಸಂಸ್ಥೆಗಳ 3885 ಸೇರಿದಂತೆ ಒಟ್ಟು 10,115 ಜನರ ಪಟ್ಟಿಯನ್ನು ಮೊದಲ ಹಂತದ ಫಲಾನುಭವಿಗಳೆಂದು ಗುರುತಿಸಿ ಸರ್ಕಾರಕ್ಕೆ ಪಟ್ಟಿ ಸಲ್ಲಿಸಲಾಗಿದೆ. ಅಲ್ಲದೆಲಸಿಕೆಯನ್ನು ನೀಡಲು ಲಸಿಕಾಕರ್ತರನ್ನು ಕೂಡ ಗುರುತಿಸಲಾಗಿದ್ದು, ಸರ್ಕಾರಿ ಸಂಸ್ಥೆಗಳ 983, ಖಾಸಗಿ ಸಂಸ್ಥೆಗಳ 1889 ಜನ ಲಸಿಕಾಕರ್ತರ ಪಟ್ಟಿ ಸಿದ್ಧವಾಗಿದೆ.ಲಸಿಕೆ ದಾಸ್ತಾನು ಮಾಡಲು ಸರ್ಕಾರಿ ಸಂಸ್ಥೆಗಳ105 ಡೀಪ್‌ ಕೋಲ್ಡ್‌ ಸ್ಟೋರೇಜ್‌ಗಳನ್ನು ಕೂಡಸಿದ್ಧವಾಗಿರಿಸಲಾಗಿದೆ. ಪಶುಸಂಗೋಪನೆ ಇಲಾಖೆಗೆ ಸಂಬಂಧಿಸಿದ 09 ಕೋಲ್ಡ್‌ ಸ್ಟೋರೇಜ್‌ಗಳು ಹಾಗೂ02 ವಾಕ್‌ ಇನ್‌ ಕೂಲರ್‌ಗಳು ಕೂಡ ಲಭ್ಯವಿದ್ದು, ಅಗತ್ಯವೆನಿಸಿದರೆ ಬಳಕೆಗೆ ನೀಡಲು ಇಲಾಖೆ ಸಿದ್ಧವಿದೆ. ದಾವಣಗೆರೆ ಜಿಲ್ಲೆಗೆ ಚಿತ್ರದುರ್ಗ ಜಿಲ್ಲೆಯಿಂದ ಲಸಿಕೆ ಪೂರೈಕೆಯಾಗುವಂತೆ ಆರೋಗ್ಯ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಅಪೌಷ್ಠಿಕ ಮಕ್ಕಳ ಆರೋಗ್ಯ ತಪಾಸಣೆ: ಜಿಲ್ಲೆಯಲ್ಲಿ ಈ ವರ್ಷ ಅಕ್ಟೋಬರ್‌ ತಿಂಗಳ ಅಂತ್ಯದವರೆಗೆ 1,18,312 ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗಿದೆ. ಇದರಲ್ಲಿ 108914 ಮಕ್ಕಳ ತೂಕ ಸಾಮಾನ್ಯ, 9166 ಮಕ್ಕಳು ಸಾಧಾರಣ ತೂಕ ಹೊಂದಿದ್ದರೆ, 232 ಮಕ್ಕಳು ಅತಿ ಕಡಿಮೆತೂಕ ಹೊಂದಿದ್ದರು. 232ಅಪೌಷ್ಠಿಕ ಮಕ್ಕಳನ್ನು ನಿಯಮಾನುಸಾರ ಆಸ್ಪತ್ರೆಗೆ ದಾಖಲಿಸಿ, ಮಕ್ಕಳಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳದಿರಲು ಲಾಕ್‌ ಡೌನ್‌ ಕಾರಣವಾಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಅಪೌಷ್ಠಿಕ ಮಕ್ಕಳನ್ನು ಕೂಡಲ ಸಂಬಂಧಪಟ್ಟ ಸರ್ಕಾರಿ ಆಸ್ಪತ್ರೆಗಳಿಗೆ ನಿಯಮಾನುಸಾರ ಕರೆದುಕೊಂಡು ಹೋಗಿ ದಾಖಲಿಸುವ ಜವಾಬ್ದಾರಿ ಆಯಾ ಅಂಗನವಾಡಿ ಕಾರ್ಯಕರ್ತರು ಹಾಗೂ ಮೇಲ್ವಿಚಾರಕರದ್ದಾಗಿದೆ. ಹೀಗೆ ದಾಖಲಿಸುವ ಮಕ್ಕಳ ಆರೋಗ್ಯ ಸುಧಾರಣೆಯಾಗುವವರೆಗೂ ಇದರ ಮೇಲುಸ್ತುವಾರಿಯನ್ನು ಇವರು ನೋಡಿಕೊಳ್ಳಬೇಕು. ಇದರಲ್ಲಿ ವಿಫಲರಾಗುವ ಅಂಗನವಾಡಿ ಕಾರ್ಯಕರ್ತೆ, ಮೇಲ್ವಿಚಾರಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

1500 ಕ್ಷಯರೋಗಿಗಳ ಪತ್ತೆ: ಜಿಲ್ಲೆಯಲ್ಲಿ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಈ ವರ್ಷ ಒಟ್ಟು 1500 ಹೊಸ ಕ್ಷಯರೋಗಿಗಳನ್ನು ಪತ್ತೆ ಮಾಡಲಾಗಿದ್ದು ಅವರ ಮನೆಗಳಿಗೆ ಔಷಧ ವಿತರಿಸುವ ಕಾರ್ಯ ನಡೆದಿದೆ. ಅಲ್ಲದೆ ಈ ವರ್ಷ ಜಿಲ್ಲೆಯ ಜನಸಂಖ್ಯೆಯಲ್ಲಿ ಶೇ. 30ರಷ್ಟು ಅಂದರೆ ಸುಮಾರು 4 ಲಕ್ಷ ಜನರನ್ನು ಪರೀಕ್ಷೆಗೆ ಒಳಪಡಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಗಂಗಾಧರ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ನಾಗರಾಜ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ,ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಮುರಳಿಧರ್‌, ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನಟರಾಜ್‌ ಸೇರಿದಂತೆ ವಿವಿಧ ಕಾರ್ಯಕ್ರಮಅನುಷ್ಠಾನಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳುಭಾಗವಹಿಸಿದ್ದರು. ಕ್ಷಯರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆರೋಗ್ಯಇಲಾಖೆ ಸಿದ್ಧಪಡಿಸಲಾದ ಪೋಸ್ಟರ್‌, ಬ್ಯಾನರ್‌ಗಳನ್ನುಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.