ಗ್ರಾಮೀಣ ಸಂಸ್ಕೃತಿ ಬಿಂಬಿಸಿದ ಜಾನಪದ ಹುಗ್ಗಿ-ಸುಗ್ಗಿ


Team Udayavani, Mar 30, 2018, 10:25 AM IST

dav-3.jpg

ಚನ್ನಗಿರಿ: ಆಧುನಿಕ ಯುಗದಲ್ಲಿ ಗ್ರಾಮೀಣ ಸೊಗಡಿನ ಜೀವನದ ಶೈಲಿ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಗ್ರಾಮೀಣ ಸಂಸ್ಕೃತಿಯನ್ನು ಒಂದೆಡೆ ಕಣ್ಮುಂದೆ ತರುವ ವೇಷ ಭೂಷಣದೊಂದಿಗೆ ವಿದ್ಯಾರ್ಥಿಗಳು ಗಮನ ಸೆಳೆದರು.

ಪಟ್ಟಣದ ಶ್ರೀ ಶಿವಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜ್‌ ಹಾಗೂ ಸ್ನಾತಕೋತ್ತರ ಕೇಂದ್ರ ವಿದ್ಯಾರ್ಥಿಗಳಿಂದ ಭಾರತೀಯ ಸಂಸ್ಕೃತಿಯ ಬಹುತ್ವದ ಹೆಜ್ಜೆ ಗುರುತು ಅನಾವರಣ ಮಾಡುವಂತಹ ವೈವಿಧ್ಯಮಯ ಉಡುಗೆ-ತೊಡುಗೆಗಳ ಜಾನಪದ ಸುಗ್ಗಿ-ಹುಗ್ಗಿ ಕಾರ್ಯಕ್ರಮದಲ್ಲಿ ಗ್ರಾಮೀಣ ಬದುಕು, ಸಂಸ್ಕೃತಿ, ಆಚಾರ ವಿಚಾರ, ಉಡುಗೆ ತೊಡುಗೆಗಳ ಝಲಕ್‌ ಒಂದೆಡೆ ಸೃಷ್ಟಿಸಿದ್ದು ನೊಡುಗರಿಗೆ ಜಾತ್ರೆಯ ವಾತಾವರಣವೇ ನಿರ್ಮಾಣವಾಗಿತ್ತು. 

ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆಗಳಾದ ಪಂಚೆ, ಶರ್ಟ್‌, ಶಾಲು, ಹಾಗೂ ಯುವತಿಯರು ಬಣ್ಣ-ಬಣ್ಣದ ರೇಷ್ಮೆ ಸೀರೆ ತೊಟ್ಟಿದ್ದರು. ಇನ್ನೂ ಕೆಲವರು ಲಂಬಾಣಿ ಹಾಗೂ ಕೊಡವರ ಉಡುಗೆ ತೊಟ್ಟು ಕಾರ್ಯಕ್ರಮಕ್ಕೆ ಮೆರುಗು ತಂದರು. 

ಜುಂಜುಂ ಮೇಳ, ಡೊಳ್ಳು ಕುಣಿತ ವಾದ್ಯಗಳೊಂದಿಗೆ ಕಾಲೇಜ್‌ ಆವರಣದಲ್ಲಿ ಯುವತಿಯರ ಕುಂಭಮೇಳದ ಬಳಿಕ ಜಾನಪದ ಸುಗ್ಗಿ-ಹುಗ್ಗಿ ಕಾರ್ಯಕ್ರಮಕ್ಕೆ ಜಾನಪದ ಕಲಾವಿದೆ ಪಾರ್ವತಮ್ಮ ಚಾಲನೆ ನೀಡಿದರು. 

ಟಗರಿನ ಕಾಳಗ: ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರೆ ಹಬ್ಬದ ದಿನಗಳಲ್ಲಿ, ಸುಗ್ಗಿ ಸಂದರ್ಭದಲ್ಲಿ ಟಗರಿನ ಕಾಳಗ ಆಯೋಜಿಸಲಾಗುತ್ತಿತ್ತು. ಪ್ರಸ್ತುತ ಅಂತಹ ಪದ್ಧತಿಗಳು ಕಣ್ಮರೆಯಾಗುತ್ತಿರುವ ದಿನಗಳಲ್ಲಿ ಅದನ್ನು ಮತ್ತೆ ಆಯೋಜಿಸವ ಮೂಲಕ ಗಮನ ಸೆಳೆಯಲಾಯಿತು.

ಶೃಂಗರಿಸಿದ ಎತ್ತಿನಗಾಡಿಯಲ್ಲಿ ಕಾಲೇಜ್‌ ಅವರಣದಲ್ಲಿ ವಿದ್ಯಾರ್ಥಿಗಳು ಸಂಚರಿಸಿದರು. ಹಳ್ಳಿಗಳಲ್ಲಿ ಇರುವಂತಹ ಪಂಚಾಯಿತಿ ಕಟ್ಟೆ, ಬಾವಿಕಟ್ಟೆ, ಹಳ್ಳಿಮನೆ, ಗುಡಿಸಲು, ದನ ಕೊಟ್ಟಿಗೆ, ಕೆರೆ ಕಟ್ಟೆಗಳ ನಿರ್ಮಾಣ, ಭತ್ತ ನಾಟಿ ಮಾಡುವ ಗದ್ದೆ, ಅರೋಗ್ಯ ಕೇಂದ್ರ, ಮದುವೆ ಮನೆ, ದೇವಸ್ಥಾನ ನಿರ್ಮಿಸಲಾಗಿತ್ತು. ಇನ್ನು ಗ್ರಾಮೀಣ ಆಹಾರ ಪದಾರ್ಥಗಳಾದ ರಾಗಿ, ಜೋಳ, ಅಕ್ಕಿ ರಾಶಿ ಹಾಕಲಾಗಿತ್ತು, ಹಬ್ಬ ಹರಿದಿನಗಳಾದ ಚೌಡಮ್ಮನ ಜಾತ್ರೆ, ಲಂಬಾಣಿ ನೃತ್ಯ, ಕೊಡಗು ನೃತ್ಯ, ಕೆರೆಏರಿ ಚೌಡಮ್ಮ, ಈದ್‌ಮಿಲಾದ್‌,
ಕುಕ್ಕವಾಡೇಶ್ವರಿ ಜಾತ್ರೆ, ದಸರಾ ಹಬ್ಬ, ಗಣೇಶ್‌ ಚತುರ್ಥಿ, ಗ್ರಾಮೀಣ ಕ್ರೀಡೆಗಳಾದ ಲಗೋರಿ, ಕುಂಟೆಬಿಲ್ಲೆ, ಹಳ್ಳಿಹಕ್ಕಿ ಹಾಡು, ಸೇರಿದಂತೆ ವಿವಿಧ ಗ್ರಾಮೀಣ ಬದುಕಿನ ಕ್ಷಣಗಳನ್ನು ಒಂದೇ ಸ್ಥಳದಲ್ಲಿ ಆಚರಿಸಿ, ಆಡಿ ಸಂಭ್ರಮಪಟ್ಟರು.

ಈ ವೇಳೆ ಅಂಧ ಕಲಾವಿದರು ಜಾನಪದ ಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದರು. ಕಾಲೇಜ್‌ನ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ವಿಭಿನ್ನ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿದರು. ಕೊನೆಗೆ ಕಾಲೇಜು ಪ್ರಾಂಶುಪಾಲರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಸಾಮೂಹಿಕವಾಗಿ ನೃತ್ಯಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. 

„ಸಿ.ಎಸ್‌. ಶಶೀಂದ್ರ ಚನ್ನಗಿರಿ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.