ಆಡಿಟ್‌ ಕಾರಣಕ್ಕೆ ಜನೌಷಧಿ ಕೇಂದ್ರ ಬಂದ್‌?


Team Udayavani, Jun 21, 2020, 8:19 AM IST

ಆಡಿಟ್‌ ಕಾರಣಕ್ಕೆ  ಜನೌಷಧಿ ಕೇಂದ್ರ ಬಂದ್‌?

ಹರಿಹರ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ಜನೌಷಧ ಕೇಂದ್ರ ಶನಿವಾರ ಬಂದ್‌ ಆಗಿದ್ದರಿಂದ ಔಷಧ ಸಿಗದೆ ರೋಗಿಗಳ ಪರದಾಡಬೇಕಾಯಿತು. ವೈದ್ಯರು ಬರೆದುಕೊಟ್ಟ ಚೀಟಿ ಹಿಡಿದುಕೋಂಡು ಜನೌಷ  ಕೇಂದ್ರದತ್ತ ಧಾವಿಸುತ್ತಿದ್ದ ರೋಗಿಗಳು ಆಡಿಟಿಂಗ್‌ ನಿಮಿತ್ತ “ಈ ದಿನ ರಜೆ’ ಎಂದು ಬಾಗಿಲ ಮೇಲೆ ಬರೆದದ್ದನ್ನು ಕಂಡು ಹಿಂತಿರುಗುತ್ತಿದ್ದರು. ಆಸ್ಪತ್ರೆಯಲ್ಲಿ ಆಡಿಟಿಂಗ್‌ ನಡೆಸುವ ಅಥವಾ ಆ ನೆಪದಲ್ಲಿಕೇಂದ್ರ ಬಂದ್‌ ಮಾಡುವ ಮೂಲಕ ಔಷಧ ದೊರೆಯದಂತೆ ಮಾಡಿರುವ ಬಗ್ಗೆ ಬಡ ರೋಗಿಗಳಿಗೆ ಹಿಡಿಶಾಪ ಹಾಕಿ ಸ್ಥಳದಿಂದ ನಿರ್ಗಮಿಸಿದರು.

ಲಾಕ್‌ಡೌನ್‌ ಅವಧಿಯಲ್ಲೂ ಜನೌಷಧ ಕೇಂದ್ರ ಅರ್ಧ ದಿನ ಮಾತ್ರ ಕಾರ್ಯ ನಿರ್ವಹಿಸಿದ್ದರಿಂದ ಸಾವಿರಾರು ರೋಗಿಗಳಿಗೆ ತೊಂದರೆಯಾಗಿತ್ತು. ಈ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟವಾದ ನಂತರ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಕೇಂದ್ರ ನಿರ್ವಹಿಸುವ ಎಂಎಸ್‌ಐಎಲ್‌ ಅಧಿಕಾರಿಗಳಿಗೆ ನೋಟೀಸ್‌ ಕಳುಹಿಸಿ ಕೈತೊಳೆದುಕೊಂಡಿದ್ದರು. ಕಡಿಮೆ ಹಣದಲ್ಲಿ ಔಷಧ ಸಿಗುವುದೆಂದು ದೂರದ ಆಸ್ಪತ್ರೆಗೆ ಬರುವ ಬಹುತೇಕ ಬಡ, ಮಧ್ಯಮ ವರ್ಗದವರು ಜನೌಷ  ಕೇಂದ್ರದ ಸೌಕರ್ಯ ಸಿಗದೆ ನಿರಾಶರಾಗುತ್ತಿದ್ದಾರೆ.

ಗ್ರಾಮಸ್ಥರಂತೂ ಔಷಧ ಖರೀದಿಸಲೆಂದೆ ಮರುದಿನ ಬೆಳಿಗ್ಗೆ ಮತ್ತೆ ಬರಬೇಕು. ತುರ್ತು ಇರುವವರು ಅನಿವಾರ್ಯವಾಗಿ ಖಾಸಗಿ ಅಂಗಡಿಗಳಲ್ಲಿ ಖರೀದಿಸಿದರೆ ಹಣವಿಲ್ಲದವರು ಔಷಧಿ  ಇಲ್ಲದೆ ಕಾಯಿಲೆಯಿಂದ ನರಳಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ಬಿ. ಮುಗ್ಪುಮ್‌ ಆಕ್ರೋಶ ವ್ಯಕ್ತಪಡಿಸಿದರು.

ಜನೌಷಧ ಕೇಂದ್ರದಲ್ಲಿ ಒಬ್ಬರೇ ಸಿಬ್ಬಂದಿಯನ್ನು ನಿಯೋಜಿಸಿದ್ದು, ಅನಾರೋಗ್ಯ ಮತ್ತಿತರೆ ಅನಿವಾರ್ಯ ಕಾರಣ ಅವರು ರಜೆ ಹಾಕಿದರೆ ಕೇಂದ್ರ ಬಂದ್‌ ಮಾಡಲಾಗುತ್ತದೆ. ಕನಿಷ್ಠ ಮತ್ತೂಬ್ಬ ಸಿಬ್ಬಂದಿ ನೇಮಿಸಿಕೊಳ್ಳುವ ಅಲ್ಲದೆ ಕೇಂದ್ರಗಳ ಕಾರ್ಯನಿರ್ವಹಣೆ ಮೇಲೆ ನಿಗಾ ಇಡುವ ಮೂಲಕ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯ ಸುಲಲಿತವಾಗಿ ತಲುಪುವಂತೆ ನೋಡಿಕೊಳ್ಳಬೇಕೆಂಬುದು ಜನರ ಆಗ್ರಹ.

ಆಡಿಟಿಂಗ್‌ಗೆಂದು ರಜೆ ಮಾಡುತ್ತೇವೆಂದು ನನಗೆ ಮಾಹಿತಿ ಕೊಟ್ಟಿಲ್ಲ. ಕೆಲಸದ ಅವಧಿಯಲ್ಲಿ ಬಂದ್‌ ಮಾಡಿ ಆಡಿಟಿಂಗ್‌ ನಡೆಸಿರುವ ಬಗ್ಗೆ ಹಾಗೂ ಮತ್ತೂಬ್ಬ ಸಿಬ್ಬಂದಿ ನೇಮಿಸಲು ಎಂಎಸ್‌ ಐಎಲ್‌ ಬೆಂಗಳೂರು ಕಚೇರಿಗೆ ಪತ್ರ ಬರೆಯುತ್ತೇನೆ. -ಡಾ| ಎಲ್‌. ಹನುಮ ನಾಯ್ಕ, ಸಿಎಂಒ, ಸರಕಾರಿ ಆಸ್ಪತ್ರೆ, ಹರಿಹರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.