
ಕಾಣದ ಕೈಗಳು ನನಗೆ ಟಿಕೆಟ್ ತಪ್ಪಿಸಿದ್ದವು: ಮಾಜಿ ಶಾಸಕ ಎಸ್.ರಾಮಪ್ಪ
Team Udayavani, May 30, 2023, 6:34 PM IST

ದಾವಣಗೆರೆ: ಕೆಲವಾರು ಕಾಣದ ಕೈಗಳು ತಮಗೆ ಬಿ-ಫಾರಂ ತಪ್ಪಿಸಿದವು ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಎಸ್. ರಾಮಪ್ಪ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ವಿರೋಧ ಪಕ್ಷದಲ್ಲಿದ್ದರೂ 600 ಕೋಟಿಗೂ ಅಧಿಕ ಅನುದಾನ ತಂದು ಹಲವಾರು ಅಭಿವೃದ್ಧಿ ಕೆಲಸ ಮಾಡಿಸಿರುವೆ. ಈಗಲೂ 70-80 ಕೋಟಿಯ ಕೆಲಸ ನಡೆಯುತ್ತಿವೆ. ಅಭಿವೃದ್ಧಿಯ ಬಗ್ಗೆ ಯಾರೂ ಮಾತನಾಡುವುದಿಲ್ಲ. ಸ್ವಾಮೀಜಿವರಿಂದ ಹಿಡಿದು ಹೈಕಮಾಂಡ್ ಜೊತೆಗೆ ಎಲ್ಲರೊಂದಿಗೆ ಚೆನ್ನಾಗಿದ್ದೆ. ಆದರೂ, ಕೆಲವಾರು ಕಾಣದ ಕೈಗಳು ನನಗೆ ಬಿ-ಫಾರಂ ತಪ್ಪಿಸಿದವು ಎಂದರು.
ರಾಮಪ್ಪ ಗೆದ್ದೇ ಗೆಲ್ಲುತ್ತಾರೆ ಎಂದು ಐದು ಸರ್ವೇಗಳಲ್ಲೂ ಹೇಳಲಾಗಿತ್ತು. ನಾನೇ ಸ್ಪರ್ಧಿಸಿದ್ದರೆ ಖಂಡಿತವಾಗಿಯೂ 25 ಸಾವಿರದಷ್ಟು ಮತಗಳಲ್ಲಿ ಗೆದ್ದೇ ಗೆಲ್ಲುತ್ತಿದ್ದೆ. ಆದರೆ, ಕೆಲವರು ಬಿ-ಫಾರಂ ತಪ್ಪಿಸಿದರು. ಪಂಚಮಸಾಲಿ, ನಮ್ಮ ಸಮಾಜ, ವಾಲ್ಮೀಕಿ ಸ್ವಾಮೀಜಿಯವರು ಪತ್ರ ಬರೆದಿದ್ದಾರೆ ಎಂದು ಕೆಲವರು ಹೇಳುತ್ತಾರೆ. ಆದರೆ, ಅವರು ಪತ್ರ ಬರೆದಿದ್ದಾರೆ ಎಂದು ನನಗೆ ಅನಿಸುವುದಿಲ್ಲ. ನಾನು ಎಲ್ಲ ಸ್ವಾಮೀಜಿಗಳೊಂದಿಗೆ ಚೆನ್ನಾಗಿ ಇದ್ದೇನೆ. ಆದರೂ, ಕೆಲವರು ಬಿ-ಫಾರಂ ತಪ್ಪಿಸಿದರು. ಅವರು ಯಾರು ಎಂಬುದು ನನಗಿಂತಲೂ ಜನರಿಗೆ ಗೊತ್ತಿದೆ ಎಂದು ಮಾರ್ಮಿಕವಾಗಿ ತಿಳಿಸಿದರು.
ನನಗೆ ವಿಧಾನ ಪರಿಷತ್ತು ಸದಸ್ಯತ್ವ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ಇತರೆ ನಾಯಕರಿಗೆ ಮನವಿ ಸಲ್ಲಿಸಿದ್ದೇನೆ. ರಾಮಪ್ಪನಿಗೆ ಅನ್ಯಾಯವಾಗಿದೆ. ನ್ಯಾಯ ಕೊಡಿಸಬೇಕು ಎಂದು ಅನೇಕರು ಹೇಳಿದ್ದಾರೆ. ನಾನು ಎಂಎಲ್ಸಿ ಸ್ಥಾನವನ್ನೇ ಕೊಡಬೇಕು ಎಂದು ಕೇಳಿದ್ದೇನೆ. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೂ ಹೈಕಮಾಂಡ್ ತೀರ್ಮಾನವನ್ನ ಒಪ್ಪುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಂದಿಗಾವಿ ಶ್ರೀನಿವಾಸ್ ಅವರು ಸಹ ಎಂಎಲ್ಸಿಗೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ನಲ್ಲಿ ಯಾರು ಬೇಕಾದರೂ ಮನವಿ ಮಾಡಿಕೊಳ್ಳಬಹುದು. ಯಾರಿಗೂ ಕೊಡಬೇಡಿ ಎನ್ನುವುದಕ್ಕೆ ಆಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್ ಸೇರಲ್ಲ: ರೇಣುಕಾಚಾರ್ಯ

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

BJP; ಎರಡ್ಮೂರು ತಿಂಗಳು ಮಾಧ್ಯಮಗಳ ಮುಂದೆ ಮಾತಾಡಲ್ಲ: ಸಂಸದ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ

Panemangalore Bridge: ಬಸ್ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್ಗಾರ್ಡ್ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

ಇನ್ನು ಏಳಲ್ಲ ,ಎಂಟು ಖಂಡ!- 375 ವರ್ಷಗಳ ಹಿಂದೆ ಕಾಣೆಯಾಗಿದ್ದ ಖಂಡ ವಿಜ್ಞಾನಿಗಳಿಂದ ಪತ್ತೆ