ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳು: ನ್ಯಾ| ಬೇನಾಳ


Team Udayavani, Dec 15, 2018, 3:35 PM IST

dvg-3.jpg

ಹರಿಹರ: ಮಾನವನ ಮೂಲಭೂತ ಹಕ್ಕುಗಳಾದ ಸ್ವಾತಂತ್ರ್ಯ, ಸಮಾನತೆಗೆ ಚ್ಯುತಿಯಾಗಬಾರದೆಂದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳನ್ನು ಘೋಷಣೆ ಮಾಡಲಾಗಿದೆ ಎಂದು ಹಿರಿಯ ಸಿವಿಲ್‌  ನ್ಯಾಯಾಧಿಧೀಶರಾದ ವೈ.ಕೆ. ಬೇನಾಳ ಹೇಳಿದರು.

ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ನಗರದ ಎಸ್‌ಜೆವಿಪಿ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಹುಟ್ಟಿನಿಂದ ಮಾನವರೆಲ್ಲರೂ ಸಮಾನರು ಮತ್ತು ಸ್ವತಂತ್ರರು. ಪ್ರತಿಯೊಬ್ಬರಿಗೂ ಸಮಾಜದಲ್ಲಿ ಉತ್ತಮವಾಗಿ, ನೆಮ್ಮದಿಯಿಂದ ಮತ್ತೂಬ್ಬರಿಗೆ
ತೊಂದರೆಯಾಗದ ರೀತಿ ಬದುಕಲು ಅವಕಾಶ ಕಲ್ಪಿಸುವುದೇ ಮಾನವ ಹಕ್ಕುಗಳು ಎಂದರು.

ನಮ್ಮ ಸಂವಿಧಾನದಲ್ಲಿ ಪ್ರಸ್ತಾಪಿಸಿರುವ ಮೂಲಭೂತ ಹಕ್ಕುಗಳು ಮಾನವ ಹಕ್ಕುಗಳೇ ಆಗಿದ್ದು, ದೇಶದ ಯಾವುದೇ ಪ್ರಜೆ ಅನ್ಯಾಯಕ್ಕೊಳಗಾದಾಗ ಜಾತಿ, ಜನಾಂಗ, ಧರ್ಮ, ಭಾಷೆ, ಸಂಸ್ಕೃತಿ ತಾರತಮ್ಯವಿಲ್ಲದೆ ನ್ಯಾಯ ದೊರಕಿಸಿಕೊಳ್ಳುವ ಅವಕಾಶ ಸಂವಿಧಾನದಲ್ಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಾಗರಾಜ ಹಲವಾಗಲು ಮಾತನಾಡಿ, ವಿಶ್ವದ ಎಲ್ಲಾ ನಾಗರಿಕರಿಗೂ ಜಾತಿ, ಧರ್ಮ, ದೇಶ, ಭಾಷೆ, ಸಂಸ್ಕೃತಿಯ ಭೇದವಿಲ್ಲದೆ ಸಮಾನವಾಗಿ ಮತ್ತು ಸ್ವಾತಂತ್ರ್ಯದಿಂದ ಬದುಕುವ ವಾತಾವರಣವನ್ನು ಸೃಷ್ಟಿಸುವುದೇ ಮಾನಹ ಹಕ್ಕುಗಳ ಧ್ಯೇಯವಾಗಿದೆ ಎಂದರು.
 
ಎಪಿಪಿ ಶಂಶೀರ ಅಲಿಖಾನ್‌ ಮಾತನಾಡಿ, ಆಧುನಿಕ ನಾಗರಿಕ ಸಮಾಜದಲ್ಲೂ ಮಾನವ ಹಕ್ಕುಗಳಿಗೆ ಮತ್ತೆ ಆತಂಕ ಎದುರಾಗಿದೆ. ಪ್ರಪಂಚದಾದ್ಯಂತ ಅಲ್ಲಲ್ಲಿ ಮತಾಂಧರ ಭಯೋತ್ಪಾದನಾ ಕೃತ್ಯ, ಯುದ್ಧ ಭೀತಿ ಕಾಣುತ್ತಿದ್ದೇವೆ. ವಿದ್ಯಾರ್ಥಿಗಳು ಶಾಲಾ-ಕಾಲೇಜು ಹಂತದಲ್ಲೇ ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದರು. ಡಿ.ಎಂ. ಹಾಲಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಶೋಷಣೆ ವಿರುದ್ಧ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ವಕೀಲರಾದ ಜಚ್‌.ಎಂ. ಷಡಾಕ್ಷರಯ್ಯ, ಜಿ.ಎಚ್‌. ಭಾಗೀರಥಿ ಮಾತನಾಡಿದರು. ಎಜಿಪಿ ಚನ್ನಪ್ಪ, ಉಪನ್ಯಾಸಕರಾದ ಚಂದ್ರಶೇಖರ ಮಠ, ಸೌಭಾಗ್ಯ, ಕಂದಮ್‌, ಕೆ.ಬಿ. ಕಾಂಬಳೆ ಮತ್ತಿತರರಿದ್ದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.