Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Team Udayavani, Apr 17, 2024, 9:51 AM IST
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರು ಮಂಗಳವಾರ ತಮ್ಮ ಜನ್ಮದಿನವನ್ನು ಸರಳವಾಗಿ
ಆಚರಿಸಿಕೊಂಡರು.
ಜಿಎಂಐಟಿ ಅತಿಥಿಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪತಿ, ಸಂಸದ ಜಿ.ಎಂ. ಸಿದ್ದೇಶ್ವರ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು. ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಹೋದರಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ದೇವರು ಆರೋಗ್ಯ, ಆಯುಷ್ಯ ನೀಡಲಿ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹಾರೈಸಿದರು. ನಂತರ ಆವರಗೆರೆ ಬಳಿಯ ಗೋಶಾಲೆಗೆ ಭೇಟಿ ನೀಡಿದ ಗಾಯಿತ್ರಿ ಸಿದ್ದೇಶ್ವರ, ಗೋಮಾತೆಗೆ ಮೇವು ತಿನ್ನಿಸಿ ಪೂಜೆ ಸಲ್ಲಿಸಿದರು.
ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗವಾಯಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಅಂಧ ಮಕ್ಕಳಿಗೆ ಸಿಹಿ ವಿತರಿಸಿದರು. ಅವರಗೆರೆಯ ಜೈನ
ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಸಚಿವ ಮುರುಗೇಶ ನಿರಾಣಿ, ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್,
ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್,ಟಿ. ಗಣೇಶ ದಾಸಕರಿಯಪ್ಪ, ಜಿ.ಎಸ್.ಅನಿತ್ಕುಮಾರ್, ಜಿ.ಎಸ್. ಅಶ್ವಿನಿ, ಗ್ಯಾರಳಿ ಶಿವು, ಗೌತಮ್ ಜೈನ್
ಇತರರು ಇದ್ದರು.
ಇದನ್ನೂ ಓದಿ: Baba Ramdev: ನೀವು ಅಮಾಯಕರೇನೂ ಅಲ್ಲ: ರಾಮ್ದೇವ್ಗೆ ಸುಪ್ರೀಂ ಚಾಟಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!