ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ
Team Udayavani, Mar 28, 2024, 10:16 AM IST
ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಬುಧವಾರ ನಗರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ವಿವಿಧ ಪಾರ್ಕ್ಗಳಲ್ಲಿ ಮತಯಾಚನೆ ಮಾಡಿದ ಅವರು, ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಯೋಜನೆಗಳ ಜನೋಪಯೋಗಿಯಾಗಿವೆ. ಇಡೀ ವಿಶ್ವವೇ ಮೋದಿ ಅವರನ್ನು ಗಮನಿಸುತ್ತಿದೆ.
ಭಾರತ ಮತ್ತೂಮ್ಮೆ ವಿಶ್ವಗುರು ಸ್ಥಾನದಲ್ಲಿ ಇರಲು ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ದಾವಣಗೆರೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ದಾವಣಗೆರೆಗೆ ಸ್ಮಾರ್ಟ್ ಸಿಟಿ, ವಿವಿಧ ರೈಲ್ವೆ ಯೋಜನೆಗಳು, ಅಂಚೆಕಚೇರಿ ಪ್ರಧಾನ ಕಚೇರಿ, ಪಾಸ್ ಪೋರ್ಟ್ ಸೇವಾ ಕೇಂದ್ರ, ರಾಜ್ಯ ವಿಮಾ ಕಾರ್ಮಿಕರ ಆಸ್ಪತ್ರೆ, ಕೇಂದ್ರಿಯ ವಿದ್ಯಾಲಯ ಸೇರಿದಂತೆ ಅನೇಕ ಯೋಜನೆ ನೀಡಿದೆ. ಮುಂದಿನ ದಿನಗಳಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ, ಆರ್ಥಿಕ ಮುನ್ನಡೆ ಸಾಧಿಸಬೇಕೆಂದರೆ ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿ ಆಗಬೇಕು. ಅವರ ಕೈಬಲಪಡಿಸಲು ನನ್ನನ್ನು ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿ ಕೇಂದ್ರಕ್ಕೆ ಕಳುಹಿಸಬೇಕು ಎಂದರು.
ಶಾಸಕ ಬಿ.ಪಿ.ಹರೀಶ್, ಡಾ| ಬಿ.ಎಸ್. ನಾಗಪ್ರಕಾಶ್, ಜಿ.ಎಸ್.ಅನಿತ್ ಕುಮಾರ್, ಎಸ್ಟಿ ಮೋರ್ಚಾ ರಾಜ್ಯ ಉಪಾ ಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಎಚ್.ಎನ್.ಶಿವಕುಮಾರ್, ಸಿದ್ದೇಶ್, ನಾಗಣ್ಣ, ಹರೀಶ್, ಜೋತಿ ಸಿದ್ದೇಶ್, ಉಪ ಮೇಯರ್ ಯಶೋಧಾ ಯಗಪ್ಪ, ಶಾರದಾ ರಾಯ್ಕರ್, ಸಚಿನ್ ಇತರರು ಇದ್ದರು.
ಕ್ರಿಕೆಟ್ ಆಡಿ ಖುಷಿ ಪಟ್ಟ ಗಾಯತ್ರಿ
ರಸ್ತೆ ಬದಿಯಲ್ಲಿ ಸ್ವತ್ಛತಾ ಕಾರ್ಯ ಮಾಡುತ್ತಿದ್ದ ಪೌರಕಾರ್ಮಿಕರ ಜೊತೆ ಸಮಾಲೋಚನೆ ನಡೆಸಿದ ಗಾಯತ್ರಿ ಸಿದ್ದೇಶ್ವರ, ಪ್ರಧಾನಿ ನರೇಂದ್ರ ಮೋದಿ ಅವರು ಪೌರಕಾರ್ಮಿಕರ ಕಷ್ಟ ಅರಿತುಕೊಂಡು ಸ್ವತ್ಛ ಭಾರತ್ ಯೋಜನೆ ಜಾರಿಗೊಳಿಸಿದ್ದಾರೆ. ಅಷ್ಟೇ ಅಲ್ಲ, ಮೋದಿ ಯಾವಾಗಲೂ ಪೌರಕಾರ್ಮಿಕರಿಗೆ ಗೌರವ
ಸಲ್ಲಿಸುತ್ತಾ ಬಂದಿದ್ದಾರೆ ಎಂದು ತಿಳಿಸಿದರು. ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಹುಡುಗರ ಜೊತೆ ಕೆಲ ಸಮಯ ಕಳೆದರು. ಬ್ಯಾಟಿಂಗ್ ಮಾಡುವ ಮೂಲಕ ಮತದಾನದ ಹಕ್ಕು ಹೊಂದಿರುವ ಎಲ್ಲ ಯುವಕರು ಬಿಜೆಪಿಗೆ ಮತ ಚಲಾಯಿಸುವಂತೆ ಕೋರಿದರು. ಬ್ಯಾಡ್ಮಿಂಟನ್ ಕೂಡ ಆಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್