ಮೊಬೈಲ್ ಫೋನ್ ಗೀಳಿಂದ ಹೊರಬನ್ನಿ
Team Udayavani, Aug 3, 2017, 2:21 PM IST
ದಾವಣಗೆರೆ: ಮೊಬೈಲ್ ಗೀಳು ಬದಿಗಿರಿಸಿ ಹೆಚ್ಚು ಅಧ್ಯಯನದಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಯಶೋಧಾ ಎಸ್. ವಂಟಿಗೋಡಿ ಸಲಹೆ ನೀಡಿದ್ದಾರೆ.
ಬುಧವಾರ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಪುನಶ್ಚೇತನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಮೊಬೈಲ್ ಹೆಚ್ಚು ಬಳಸುತ್ತಾ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದರಿಂದ ಹೊರ ಬಂದು ಉತ್ತಮ ಜೀವನ ಪಿಸಿಕೊಳ್ಳುವಂತಾಗಬೇಕು ಎಂದು ಆಶಿಸಿದರು. ನಿರಂತರ ಅಭ್ಯಾಸ ಸಾಧನೆಯ ಕೀಲಿ ಕೈ. ವಿದ್ಯಾರ್ಥಿ ಜೀವನದಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂಬುದನ್ನು ತಿಳಿಸುವ ಉದ್ದೇಶಕ್ಕಾಗಿ ಏರ್ಪಡಿಸಿರುವ ಈ ಕಾರ್ಯಕ್ರಮ ಅರ್ಥಪೂರ್ಣ. ಈ ಕಾಲೇಜಿನಲ್ಲಿ ದೊರೆಯುವ ಉತ್ತಮ ಸೌಲಭ್ಯ ಸದುಪಯೋಗಪಡಿಸಿಕೊಂಡು ಜ್ಞಾನವಂತರು, ಸಾಧಕರಾಗಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಪಿ.ಎಸ್. ಶಿವಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಂದಿರ ದೂಷಿಸದೆ ನಿರಂತರ ಪರಿಶ್ರಮದಿಂದ ಸಾಧಕರಾಗಬೇಕು. ಬಾವಿಯೊಳಗಿನ ಕಪ್ಪೆಗಳಾಗದೆ ಸಕಲ ಪಂಡಿತರಾಗಬೇಕು ಎಂದು ಕಿವಿ ಮಾತು ಹೇಳಿದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಎಚ್.ಎಸ್. ಮಂಜುನಾಥ್ ಕುರ್ಕಿ ಮಾತನಾಡಿ, ಶಿಕ್ಷಣ ಎಂದರೆ ಜೀವನ ಪ್ರಜ್ಞೆ ಮೂಡಿಸುವುದು. ವಿದ್ಯೆ ಜ್ಞಾನಕ್ಕಾಗಿಯೇ ಹೊರತು ಉದ್ಯೋಗಕ್ಕಾಗಿಯೇ ಅಲ್ಲ ಎಂದರು.
ಮೇ| ಆರ್. ಗೌರಮ್ಮ ಮಾತನಾಡಿ, ಎವಿಕೆ ಕಾಲೇಜು ತನ್ನದೇ ಆದ ಭವ್ಯ ಇತಿಹಾಸ ಒಳಗೊಂಡಿದ್ದು ಇಲ್ಲಿ ಅಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿನಿಯರು ರಾಜ್ಯ, ರಾಷ್ಟ್ರ ಮಟ್ಟದ ಹುದ್ದೆಯಲ್ಲಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ| ಬಿ.ಪಿ. ಕುಮಾರ್ ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ಕಾರ್ಯಕ್ರಮದ ಸಂಘಟಕ ಜಿ.ಓ. ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು. ಭಾವನಾ ಪ್ರಾರ್ಥಿಸಿದರು. ಸಿಂಧು ಸ್ವಾಗತಿಸಿದರು. ಧನ್ಯತಾ, ಸಂಜನಾ ನಿರೂಪಿಸಿದರು. ಅರ್ಪಿತ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ