ಬಯಲು ಶೌಚಮುಕ್ತ ಘೋಷಣೆಗೆ ಸಿದ್ಧರಾಗಿ: ಸಿಇಒ ಅಶ್ವತಿ


Team Udayavani, Jul 14, 2017, 2:33 PM IST

14-DV-3.jpg

ದಾವಣಗೆರೆ: ಈ ವರ್ಷದ ಅಂತ್ಯದ ವೇಳೆ ಇಡೀ ಜಿಲ್ಲೆಯನ್ನು ಬಯಲು ಶೌಚಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಬೇಕಾದ ಎಲ್ಲಾ
ಕ್ರಮ ವಹಿಸಲು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಅಶ್ವತಿ ನೋಡೆಲ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸ್ವತ್ಛ ಭಾರತ್‌ ಮಿಷನ್‌ನ ನೋಡೆಲ್‌ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ,
ಮಾತನಾಡಿದ ಅವರು, ಹೊನ್ನಾಳಿ, ಹರಿಹರ, ದಾವಣಗೆರೆ, ಚನ್ನಗಿರಿ ತಾಲ್ಲೂಕುಗಳನ್ನು ಅಕ್ಟೋಬರ್‌ 2ರ ವೇಳೆಗೆ ಹಾಗೂ ಜಗಳೂರು ಹರಪನಹಳ್ಳಿ ತಾಲ್ಲೂಕುಗಳನ್ನು ಡಿಸೆಂಬರ್‌ ವೇಳೆಗೆ ಬಯಲು ಶೌಚಮುಕ್ತ ತಾಲೂಕುಗಳೆಂದು ಘೋಷಿಸಲು ಕ್ರಮ ವಹಿಸಿ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 2,82,278 ಕುಟುಂಬಗಳಿವೆ. ಈ ಪೈಕಿ 1,97,069 ಕುಟುಂಬಗಳಿಗೆ ಈಗಾಗಲೇ ಶೌಚಾಲಯ ಸವಲತ್ತು ಸಿಕ್ಕಿದೆ. ಅಲ್ಲಿಗೆ ಶೇ.70ರಷ್ಟು ಕುಟುಂಬಗಳು ಶೌಚಾಲಯ ಹೊಂದಿದಂತಾಗಿದ್ದು, ಉಳಿದ 85,209 ಕುಟುಂಬಗಳಿಗೆ ಶೌಚಾಲಯ
ಕಟ್ಟಿ ಕೊಡಬೇಕಿದೆ. ಈ ಕಾರ್ಯ ತ್ವರಿತ ಗತಿಯಲ್ಲಿ ಮುಗಿಸಿ ಎಂದರು. ನೋಡೆಲ್‌ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಕೆಲಸದ ಜೊತೆಗೆ ಈ ಕೆಲಸವನ್ನು ಆದ್ಯತೆ ಮೇರೆಗೆ ಮಾಡಬೇಕು. ಗ್ರಾಮೀಣ ಭಾಗಕ್ಕೆ ಭೇಟಿ ನೀಡಬೇಕು. ತಾಲ್ಲೂಕು ಮಟ್ಟದಲ್ಲಿ ನೋಡೆಲ್‌ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಪ್ರಗತಿ ಪರಿಶೀಲಿಸಬೇಕು. ಜನರಲ್ಲಿ ಅರಿವು ಮೂಡಿಸಿ, ಶೌಚಾಲಯ ನಿರ್ಮಾಣಕ್ಕೆ
ಸೂಚಿಸಬೇಕು ಎಂದು ಅವರು ತಿಳಿಸಿದರು. 

ಶೌಚಾಲಯ ಕಟ್ಟಿಕೊಳ್ಳಲು ಇದೀಗ ಜನ ಸಹ ಮುಂದೆ ಬರುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಳೆದ ವರ್ಷ ಪೂರ್ತಿ ನಾವು 19,000 ಶೌಚಾಲಯ ಮಾತ್ರ ಕಟ್ಟಿದ್ದೆವು. ಈ ಆರ್ಥಿಕ ವರ್ಷ ಆರಂಭವಾಗಿ ಇನ್ನೂ 3 ತಿಂಗಳು ಕಳೆದಿದ್ದು, ಈಗಾಗಲೇ 10 ಸಾವಿರ ಶೌಚಾಲಯ  ನಿರ್ಮಾಣ ಮಾಡಲಾಗಿದೆ. ಇದೇ ವೇಗ ಮುಂದುವರಿದರೆ ಶೀಘ್ರ ನಮ್ಮ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಎಂದು ಘೋಷಣೆ ಮಾಡಬಹುದು. ನವೆಂಬರ್‌ ವೇಳೆ ಬಯಲು ಶೌಚಮುಕ್ತ ಮಾಡುವ ಗುರಿ ಇಟ್ಟುಕೊಂಡು ಕೆಲಸಮಾಡಿ. ಜಾಗೃತಿ ಮೂಡಿಸಲು ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಿ,
ಅವರಿಗೆ ಒಂದು ಶೌಚಾಲಯ ನಿರ್ಮಾಣ ಕಾರ್ಯ ಆದರೆ 150 ರೂ.ಗಳ ಪ್ರೇರೇಪಣಾ ರೂಪದಲ್ಲಿ ನೀಡಲಾಗುವುದು ಎಂದು ಅವರು
ಹೇಳಿದರು. ಮಿಷನ್‌ನ ಯೋಜನಾ ನಿರ್ದೇಶಕ ಡಾ| ರಂಗಸ್ವಾಮಿ ಸಭೆ ಆರಂಭದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಸ್ವತ್ಛ ಭಾರತ ಮಿಷನ್‌ ಜಾರಿಗಾಗಿ ಹೋಬಳಿ ಮಟ್ಟದಲ್ಲಿ ನೋಡೆಲ್‌ ಅಧಿಕಾರಿಗಳನ್ನು ನೇಮಿಸಿ, ಜವಾಬ್ದಾರಿ ವಹಿಸಲಾಗಿದೆ ಎಂದರು. ಉಪ ಕಾರ್ಯದರ್ಶಿ ಷಡಾಕ್ಷರಪ್ಪ, ವಿವಿಧ ಇಲಾಖೆಯಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಸಾಮೂಹಿಕ ಸೀಮಂತ
ಗ್ರಾಮೀಣ ಭಾಗದಲ್ಲಿರುವ ಮಹಿಳೆಯರು ತಮ್ಮ ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿಸಿದರೆ ಸೀಮಂತ ಕಾರ್ಯ ಹಮ್ಮಿಕೊಂಡು ಅವರನ್ನು ಸನ್ಮಾನಿಸಲಾಗುವುದು. ಈ ಕುರಿತು ವ್ಯಾಪಕ ಪ್ರಚಾರ ಮಾಡಿ. ಜಿಲ್ಲೆಯಲ್ಲಿ ಹಾಲಿ 15,600 ಗರ್ಬಿಣಿಯರಿದ್ದು, ಇವರಿಗೆ ಈ ಕುರಿತು ಮಾಹಿತಿ ನೀಡಿ. ಜೊತೆಗೆ ಶಾಲಾಮಕ್ಕಳಿಗೆ ಪ್ರಾರ್ಥನೆ ವೇಳೆ ಕರಪತ್ರ ನೀಡಿ, ಶೌಚಾಲಯ ಇಲ್ಲದವರು ಇಲ್ಲಿಯೇ ಅರ್ಜಿ ಸಲ್ಲಿಸಿ, ಶೌಚಾಲಯ ನಿರ್ಮಾಣ ಮಾಡಿಕೊಳ್ಳಬಹುದು ಎಂಬುದನ್ನು ತಿಳಿಸಿ.
ಎಸ್‌. ಅಶ್ವತಿ, ಜಿಪಂ ಸಿಇಒ.

ಟಾಪ್ ನ್ಯೂಸ್

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.