ಸೀರಿಯಲ್‌ ಪ್ರಭಾವಕ್ಕೆ ಬಲಿಯಾದಳೇ ಬಾಲಕಿ?


Team Udayavani, Nov 30, 2017, 6:35 AM IST

watching-TV-serial.jpg

ಹರಿಹರ: ಕೆಲ ದಿನದ ಹಿಂದೆ ಬೆಂಕಿ ತಗುಲಿ 7 ವರ್ಷದ ಬಾಲಕಿ ಮೃತಪಟ್ಟ ಪ್ರಕರಣ ಈಗ ಹೊಸ ತಿರುವು ಪಡೆದಿದ್ದು ಹಲವು ಊಹಾ ಪೋಹಗಳಿಗೆ ಎಡೆಮಾಡಿಕೊಟ್ಟಿದೆ.

ನಗರದ ಆಶ್ರಯ ಬಡಾವಣೆಯಲ್ಲಿ ಬೆಂಕಿ ತಗುಲಿ ಬಾಲಕಿ ಪ್ರಾರ್ಥನಾ ಮೃತಪಟ್ಟಿದ್ದಳು. ಘಟನೆ ನಡೆದು 18 ದಿನಗಳ
ನಂತರ ಬಾಲಕಿ ಸಾವಿಗೆ ಟಿವಿಯಲ್ಲಿ ಪ್ರಸಾರವಾಗುವ ಸೀರಿಯಲ್‌ (ಧಾರಾವಾಹಿ) ಕಾರಣ ಎಂಬ ಗುಲ್ಲೆದ್ದಿದೆ. ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ಧಾರಾವಾಹಿಯೊಂದರ ದೃಶ್ಯ ನೋಡಿ ಬಾಲಕಿ ಬೆಂಕಿ ಹಚ್ಚಿ ಕೊಂಡಿದ್ದಳೆಂಬ ಸುದ್ದಿ ಹರಡಿದೆ. ಆದರೆ ಘಟನೆ ನಡೆದ ನಂತರ ಬಾಲಕಿ ತಾಯಿ ಆಕಸ್ಮಿಕವಾಗಿ ಬೆಂಕಿ ತಗುಲಿ ಮಗಳು ಮೃತಪಟ್ಟಿದ್ದಾಳೆ ಎಂದು ದೂರು ದಾಖಲಿಸಿದ್ದರು.

ಚೈತ್ರಾ ಮತ್ತು ಮಂಜುನಾಥ್‌ ದಂಪತಿಯ 7 ವರ್ಷದ ಪುತ್ರಿ ಪ್ರಾರ್ಥನಾ ನ.11ರ ಮಧ್ಯಾಹ್ನ ಶಾಲೆಯಿಂದ ಬಂದು ಮನೆಯಲ್ಲಿ ಸಹೋದರಿಯೊಂದಿಗೆ ಆಟವಾಡುತ್ತಿದ್ದಾಗ ಬೆಂಕಿ ತಗುಲಿ ಗಾಯಗೊಂಡಿದ್ದಳು. ಕೂಡಲೇ ಬಾಲಕಿಯನ್ನು
ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಾವಣಗೆರೆ ಎಸ್‌.ಎಸ್‌.ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ನ.12ರ ಬೆಳಗಿನ ಜಾವ ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದಳು.

ಧಾರಾವಾಹಿ ಪರಿಣಾಮ: ಬಾಲಕಿ ಮೃತಪಟ್ಟು 18 ದಿನ ಕಳೆದ ನಂತರ ಆಕೆಯ ಪೋಷಕರು ಮಗಳ ಸಾವಿಗೆ ಬೇರೆಯದ್ದೇ ಆದ ಕಾರಣ ನೀಡುತ್ತಿದ್ದಾರೆ. ತಮ್ಮ ಮಗಳು ಸಾವಿಗೀಡಾಗಲು ಖಾಸಗಿ ವಾಹಿನಿಯೊಂದರ ಧಾರಾವಾಹಿಯಲ್ಲಿ ಪ್ರಸಾರವಾದ ದೃಶ್ಯವೇ ಕಾರಣ. ಅದರಲ್ಲಿ ಮಹಿಳೆಯೊಬ್ಬಳು ಬೆಂಕಿ ಹಚ್ಚಿಕೊಂಡು ನನ್ನನ್ನು ಕಾಪಾಡುವಂತೆ ದೇವರ ಮೊರೆ ಇಡುವುದನ್ನು ನೋಡಿದ ಬಾಲಕಿ ತಾನೂ ಅದನ್ನು ಅನುಕರಿಸಲು ಹೋಗಿ ಅನಾಹುತ ಮಾಡಿಕೊಂಡಿದ್ದಾಳೆ ಎಂದು ಹೇಳುತ್ತಿದ್ದಾರೆ. ಬಾಲಕಿ ಪ್ರಾರ್ಥನಾ ನಗರದ ಸೆಂಟ್‌ ಮೇರೀಸ್‌ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದಳು. ತಂದೆ ಮಂಜುನಾಥ್‌ ಕಟ್ಟಡ ಕಟ್ಟುವ ಕೆಲಸ ಮಾಡುತ್ತಿದ್ದರೆ, ತಾಯಿ ಚೈತ್ರಾ ಮನೆಗೆಲಸ ಮಾಡುತ್ತಿದ್ದಾರೆ. ಇವರ 2 ಹೆಣ್ಣು, ಒಂದು ಗಂಡು ಮಗುವಿನಲ್ಲಿ ಪ್ರಾರ್ಥನಾ ಹಿರಿಯ ಮಗಳಾಗಿದ್ದಳು. ಪ್ರಾರ್ಥನಾ ಆಸ್ಪತ್ರೆಯಲ್ಲಿ ಸಾವಿಗೀಡಾದ ದಿನ ತಾಯಿ ಚೈತ್ರಾ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಘಟನೆ ಕುರಿತಂತೆ ಅದರಲ್ಲಿ ವಿವರಣೆ ನೀಡಿದ್ದಾರೆ.

ಹೀಗೆ ದೂರು ದಾಖಲಾಗಿದ್ದರೂ ಇದೀಗ ಪೋಷಕರು ಬೇರೆಯದ್ದೇ ಕಾರಣ ಹೇಳುತ್ತಿರುವುದು ಯಾಕೆ ಎಂಬ ಅನುಮಾನ ಮೂಡಿದೆ. ಇನ್ನೊಂದೆಡೆ ಧಾರಾವಾಹಿ ನೋಡಿ ಬಾಲಕಿ ಪ್ರಭಾವಕ್ಕೊಳಗಾಗಿಯೇ ಈ ರೀತಿ ಮಾಡಿಕೊಂಡಿರಬಹುದು ಎಂಬುದನ್ನು ಅಲ್ಲಗಳೆಯುವಂತಿಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಬಾಲಕಿ ಪ್ರಾರ್ಥನಾ ಪ್ರಕರಣದಲ್ಲಿ ಧಾರಾವಾಹಿಯ ಪ್ರಭಾವವಿದೆ ಎಂದೆ ನಿಸುತ್ತಿಲ್ಲ. ಸಹಜವಾಗಿಯೇ ಮಕ್ಕಳಲ್ಲಿ ಕುತೂಹಲ ಹೆಚ್ಚು, ಅದರಂತೆಯೇ ಪ್ರಾರ್ಥನಾ ಬೆಂಕಿ ಕಡ್ಡಿ ಗೀರಿ ಪೇಪರ್‌ ಸುಡಲು ಮುಂದಾಗಿರುವ ಸಾಧ್ಯತೆಯಿದೆ.
–  ಶ್ರೀಧರ್‌, ಪಿಎಸ್‌ಐ, ಹರಿಹರ ನಗರ ಠಾಣೆ

ಪ್ರಾರ್ಥನಾ ಮನೆಯ ಸದಸ್ಯರು ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ “ನಂದಿನಿ’ ಧಾರಾವಾಹಿಯನ್ನು ವೀಕ್ಷಿಸುತ್ತಿದ್ದರು. ಅದರಲ್ಲಿ ಬರುವ ಪ್ರಸಂಗದಿಂದ ಪ್ರೇರಿತರಾಗಿ ಈ ಘಟನೆ ನಡೆದಿದೆ ಎಂದು ಅಕ್ಕಪಕ್ಕದ ಮನೆಯವರು ಹೇಳುತ್ತಿದ್ದಾರೆ.
– ಡಿ.ಹನುಮಂತಪ್ಪ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.