ನಿರಂತರ ವಿದ್ಯುತ್‌ ಕೊಡಿ


Team Udayavani, Jan 19, 2019, 6:23 AM IST

dvg-5.jpg

ಮಲೇಬೆನ್ನೂರು: ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ 12 ಗಂಟೆ ವಿದ್ಯುತ್‌ ಮತ್ತು ಭದ್ರಾ ಕಾಲುವೆ ಕೊನೆಭಾಗದ ಜಮೀನುಗಳಿಗೆ ನೀರು ತಲುಪಿಸುವಂತೆ ಕ್ರಮಕ್ಕೆ ಒತ್ತಾಯಿಸಿ ಮಲೇಬೆನ್ನೂರು ಬೆಸ್ಕಾಂ ಕಚೇರಿ ಎದುರು ಕೊನೆಭಾಗದ ರೈತರು ಧರಣಿ ನಡೆಸಿದರು.

ರೈತ ಮುಖಂಡ ಕುರುವ ಗಣೇಶ್‌ ಮಾತನಾಡಿ, ಜಲಾಶಯಗಳು ತುಂಬಿದ್ದರೂ ಕೊನೆಭಾಗದ ರೈತರಿಗೆ ನೀರು ಸಿಗುತ್ತಿಲ್ಲ. ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಇಲ್ಲ. ರಾಜಕಾರಣಿಗಳು ರೆಸಾರ್ಟ್‌ ವಾಸ ಮಾಡುತ್ತಿದ್ದು ರೈತರ ಗತಿ ಏನು? 2011-12ರಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ರೈತರು ಹಣ ತುಂಬಿದ್ದರೂ ಇನ್ನೂ ಸತಾಯಿಸುತ್ತಿದ್ದಾರೆ. ಈ ಪರಿಸ್ಥಿತಿ ಮುಂದುವರಿದರೆ ರೈತರು ಬಾರಕೋಲು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಾಜಿ ಶಾಸಕ ಬಿ.ಪಿ. ಹರೀಶ್‌ ಮಾತನಾಡಿ, ಹೊಳೆ ಮತ್ತು ಹಳ್ಳದ ಪಕ್ಕದಲ್ಲಿರುವ ರೈತರ ಪಂಪ್‌ಸೆಟ್‌ಗಳಿಗೆ ನಿರಂತರವಾಗಿ 12 ತಾಸು ವಿದ್ಯುತ್‌ ನೀಡಬೇಕು. ಮಲೇಬೆನ್ನೂರು, ಸಾಸ್ವೆಹಳ್ಳಿ ಮತ್ತು ಬಸವಾಪಟ್ಟಣ ವಿಭಾಗಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಶಾಸಕರು ಮತ್ತು ಉಸ್ತುವಾರಿ ಸಚಿವರು ಈ ಕೂಡಲೇ ಹುದ್ದೆಗಳನ್ನು ತುಂಬಬೇಕು ಎಂದು ತಾಕೀತು ಮಾಡಿದರು.

ರೈತ ಮುಖಂಡ ಹಾಳೂರು ನಾಗರಾಜ್‌ ಮಾತನಾಡಿ, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ರಾಜೀನಾಮೆ ನೀಡಿ ನಮ್ಮೊಂದಿಗೆ ಹೋರಾಟಕ್ಕೆ ಧುಮುಕಬೇಕು ಎಂದು ಆಗ್ರಹಿಸಿದರು.

ನೀರಾವರಿ ಇಂಜಿನಿಯರ್‌ ರವಿಚಂದ್ರ ಮತ್ತು ರಾಜೇಂದ್ರ ಮಾತನಾಡಿ, ಇನ್ನೆರಡು ದಿನಗಳಲ್ಲಿ ಕೋಮಾರನಹಳ್ಳಿ ಬಳಿ 4.4 ಅಡಿ ನೀರು ತಂದುಕೊಡುತ್ತೇನೆ. ನಾನು ವಾರಕ್ಕೆ ಮೂರು ದಿನ ಮಲೇಬೆನ್ನೂರು ಕಚೇರಿಗೆ ಬರುತ್ತೇನೆ. ರೈತರು ಶಾಂತವಾಗಿರಬೇಕು ಎಂದು ವಿನಂತಿಸಿದರು.

ಶಾಸಕ ಎಸ್‌. ರಾಮಪ್ಪನವರು ಸಿಎಲ್‌ಪಿ ಸಭೆಯಲ್ಲಿದ್ದಾರೆ. ಸಭೆ ಮುಗಿದ ತಕ್ಷಣ ವಿದ್ಯುತ್‌ ಸಚಿವರೊಂದಿಗೆ ಮಾತನಾಡಿ ಸತತವಾಗಿ 10 ತಾಸುಗಳವರೆಗೆ ತ್ರಿಫೇಸ್‌ ವಿದ್ಯುತ್‌ ನೀಡುವಂತೆ ಆದೇಶ ಮಾಡಿಸಿಕೊಂಡು ಬರುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಶಾಸಕರ ಅಪ್ತಸಹಾಯಕ ದೂರವಾಣಿಯಲ್ಲಿ ರೈತರಿಗೆ ತಿಳಿಸಿದರು.

ಇನ್ನೆರಡು ದಿನ ಕಾದು ನೋಡಿ ಹೋರಾಟದ ರೂಪುರೇಷೆಯನ್ನು ಸಿದ್ಧಪಡಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರಾದ ಪಿ. ನಿಜಗುಣ, ಡಿ.ಜಿ. ಷಣ್ಮುಖಯ್ಯ, ಕೆ. ಮಲ್ಲಪ್ಪ, ಡಿ. ರೇವಣಪ್ಪ, ಬಿ.ಎಸ್‌. ಹನುಮಗೌಡ, ಕಾವೇರಿ ಕುಬೇರಗೌಡ, ಚೋಳಪ್ಪರ ಬೀರಪ್ಪ, ಹನುಮಂತಪ್ಪ ಹಿಂಡಸಘಟ್ಟ, ರಾಮಪ್ಪ ಗಡಿಗೇರ, ಪ್ರಸನ್ನಕುಮಾರ್‌, ಹನುಮಗೌಡ ಬಸಟ್ಟೇರ, ಹನುಮಗೌಡ ದಡ್ಡೇರ, ಹರೀಶ್‌ ಕೆ.ಡಿ. ಪರಮೇಶ್‌, ಹುಲ್ಲತ್ತಿ ರುದ್ರಗೌಡ, ಸಿದ್ದನಗೌಡ, ಆಟೋ ಕಲ್ಯಾಣಿ ಬಸವರಾಜ್‌, ಹಾಗೂ ಜಿ. ಬೇವಿನಹಳ್ಳಿ, ನಂದಿಗುಡಿ, ಕೊಕ್ಕನೂರು, ಗೋವಿನಹಾಳು, ವಾಸನ, ಪಾಳ್ಯ, ಹಿಂಡಸಘಟ್ಟ, ಹನಗವಾಡಿ, ಹೊಳೇಸಿರಿಗೆರೆ ಮುಂತಾದ ಗ್ರಾಮಗಳ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಗೆ ಮುನ್ನ ರೈತರು ನಂದಿಗುಡಿ ರಸ್ತೆಯಲ್ಲಿರುವ ಶ್ರೀ ಆಂಜನೇಯ ದೇವರಿಗೆ ಪೂಜೆ ಸಲ್ಲಿಸಿ ಮೆರವಣಿಗೆ ಪ್ರಾರಂಭಿಸಿದರು. ಹಳೇ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. ವೃತ್ತ ನಿರೀಕ್ಷಕ ಗುರುನಾಥ್‌, ಪಿಎಸ್‌ಐ ಮೇಘರಾಜ್‌ ಮತ್ತು ರವಿ ಜಿಲ್ಲಾ ಮೀಸಲು ಪಡೆ ಸಿಬ್ಬಂದಿಯೊಂದಿಗೆ ಭದ್ರತೆ ಒದಗಿಸಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.