ನಾಗರಿಕ ಸಮಸ್ಯೆ ನಿವಾರಣೆಗೆ ಒತ್ತು ನೀಡಿ


Team Udayavani, Jun 26, 2018, 9:45 AM IST

davangere.jpg

ದಾವಣಗೆರೆ:ನಗರದ ನಾಗರಿಕರ ಸಮಸ್ಯೆ ನಿವಾರಣೆಗೆ ಒತ್ತುಕೊಟ್ಟು ಕೆಲಸ ಮಾಡಿ ಎಂದು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಮಾಹನಗರಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿಗೆ ತಾಕೀತು ಮಾಡಿದರು.

ಸೋಮವಾರ, ತಮ್ಮ ಕ್ಷೇತ್ರದ ವಿವಿಧ ವಾರ್ಡ್‌ ಮುಖಂಡರು, ಪಾಲಿಕೆ ಮಾಜಿ ಸದಸ್ಯರೊಂದಿಗೆ ಪಾಲಿಕೆ ಕಚೇರಿಯಲ್ಲಿ ಆಯುಕ್ತ ಮಂಜುನಾಥ್‌ ಆರ್‌. ಬಳ್ಳಾರಿಯವರನ್ನು ಭೇಟಿಯಾಗಿ ಮಾತನಾಡಿದ ಅವರು, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಅನೇಕ ಕಡೆಗಳಲ್ಲಿ 10 ದಿನಕ್ಕೊಮ್ಮೆ ನೀರು ಕೊಡಲಾಗುತ್ತಿದೆ. 

ಮೋಟಾರ್‌, ಪಂಪ್‌ ಸಮಸ್ಯೆ ಎಂದು ಹೇಳಲಾಗುತ್ತಿದೆ. ಇವೆಲ್ಲವನ್ನೂ ನಿವಾರಿಸಿ, ಜನರಿಗೆ ವಾರದಲ್ಲಿ 2 ಬಾರಿ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ವಹಿಸಿ ಎಂದು ಸೂಚಿಸಿದರು. ನಗರದ ಹಲವೆಡೆ ಒಣಗಿದ ಮರಗಳಿವೆ. ಇವುಗಳ ರೆಂಬೆ, ಕೊಂಬೆ ಆಗಿಂದಾಗ್ಗೆ ಬೀಳುತ್ತಿವೆ. ಮಳೆ, ಗಾಳಿಯಲ್ಲಿ ಮರಗಳೇ ಬುಡಸಮೇತ ನೆಲಕ್ಕುರುಳುವ ಆತಂಕ ಇದೆ. ಅಂತಹ ಮರಗಳನ್ನು ಗುರುತಿಸಿ, ತಕ್ಷಣ ಅವನ್ನು ತೆರವುಗೊಳಿಸಲು ಮುಂದಾಗಿ ಎಂದು ಅವರು
ಹೇಳಿದರು.

ಕಸದ ಸಮಸ್ಯೆಯಂತೂ ನಗರದಲ್ಲಿ ತೀವ್ರವಾಗಿ ಕಾಡುತ್ತಿದೆ. ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಆಗಿಂದಾಗ್ಗೆ ನೀವೂ ಸಹ ದಿಢೀರ್‌ ಭೇಟಿಕೊಟ್ಟು ಸ್ವಚ್ಛತೆ ಪರಿಶೀಲನೆ ಮಾಡಿ. ಇದರ ಜೊತೆಗೆ ನಗರದಲ್ಲಿರುವ ಹಂದಿಗಳ ಹಾವಳಿ ನಿಯಂತ್ರಣಕ್ಕೂ ಕ್ರಮ ವಹಿಸಿ ಎಂದು ಅವರು ಹೇಳಿದರು.

ಆಯುಕ್ತ ಮಂಜುನಾಥ ಆರ್‌. ಬಳ್ಳಾರಿ, ಹಾಲಿ ನಗರದಲ್ಲಿ ನೀರಿನ ಸಮಸ್ಯೆ ಇದೆ. ನದಿಯಲ್ಲೂ ನೀರಿನ ಹರಿವು ಕಡಿಮೆಯಾಗಿರುವುದೇ ಇದಕ್ಕೆ ಕಾರಣ. ಇತ್ತ ಕೆರೆಗಳಲ್ಲಿರುವ ನೀರು ಖಾಲಿಯಾಗಿದೆ. ಹೀಗಾಗಿಯೇ ಹಾಲಿ ರಾಜನಹಳ್ಳಿಯಿಂದ ದಿನಕ್ಕೆ 60 ಎಂಎಲ್‌ಡಿ ಮಾತ್ರ ನೀರೆತ್ತಲಾಗುತ್ತಿದೆ. ದಿನಕ್ಕೆ ನಮಗೆ 80 ಎಂಎಲ್‌ಡಿ ನೀರು ಬೇಕು. ಬರುವ 60 ಎಂಎಲ್‌ ಡಿಯಲ್ಲಿ 10 ಎಂಎಲ್‌ಡಿ ಕಲುಷಿತ ನೀರು ಸೇರಿರುತ್ತದೆ. ಅದನ್ನು ಹೊರತುಪಡಿಸಿ 50 ಎಂಎಲ್‌ಡಿ ಮಾತ್ರ ನಮಗೆ ಲಭ್ಯವಾಗುತ್ತಿದೆ. ಇದೇ ಕಾರಣಕ್ಕೆ ವಾರಕ್ಕೆ ಒಮ್ಮೆ ನೀರು ಕೊಡಲಾಗುತ್ತಿದೆ ಎಂದು ತಿಳಿಸಿದರು.

ಒಣ ಮರಗಳ ತೆರವು ಕಾರ್ಯಾಚರಣೆ ನಾಳೆಯಿಂದಲೇ ಆರಂಭವಾಗಲಿದೆ. ಇನ್ನು ಪಾರ್ಕ್‌ ನಿರ್ವಹಣೆ ಸಮಸ್ಯೆ ಇದೆ. ನಗರದಲ್ಲಿ 190 ಪಾರ್ಕ್‌ ಇವೆ. ಆದರೆ, ಸಿಬ್ಬಂದಿ ಇರುವುದು 40 ಮಂದಿ ಮಾತ್ರ. ಅವರೂ ಸಹ ನಿವೃತ್ತಿ ಅಂಚಿನಲ್ಲಿದ್ದಾರೆ. ಇದೇ ಕಾರಣಕ್ಕೆ ಪಾರ್ಕ್‌ಗಳ ನಿರ್ವಹಣೆಗೆ ಖಾಸಗಿ ಏಜೆನ್ಸಿ ಮೂಲಕ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಆಲೋಚಿಸಲಾಗಿದೆ. ಇದರ ಜೊತೆಗೆ ಸಂಘ, ಸಂಸ್ಥೆಗಳಿಗೂ ಪಾರ್ಕ್‌ ನಿರ್ವಹಣೆ ನೀಡಲು ಯೋಚಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು ಎಂದು ಅವರು ಹೇಳಿದರು.

ಮಾಜಿ ಮೇಯರ್‌ ವಿಠಲ್‌, ಸದಸ್ಯ ಪಿ.ಎಸ್‌. ಜಯಣ್ಣ, ಮುಖಂಡರಾದ ಎ.ವೈ. ಪ್ರಕಾಶ್‌, ಬಿ.ಎಸ್‌. ಜಗದೀಶ್‌, ಶಿವರಾಜ ಪಾಟೀಲ್‌, ಮನು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.