ಕಬ್ಬು ಬೆಳೆಯುವ ತಾಂತ್ರಿಕತೆ ಮಾಹಿತಿ ನೀಡಿ


Team Udayavani, Oct 5, 2018, 3:44 PM IST

dvg-3.jpg

ದಾವಣಗೆರೆ: ಕೃಷಿ ಇಲಾಖೆಯಿಂದ ಕಬ್ಬು ಬೇಸಾಯದ ಬಗ್ಗೆ ತಾಂತ್ರಿಕ ಮಾಹಿತಿ ಅವಶ್ಯಕತೆ ಇದೆ. ಹಾಗಾಗಿ ಬೆಳಗಾವಿ ಮಾದರಿಯಲ್ಲಿ ರೈತರಿಗೆ ಕಬ್ಬು ಬೆಳೆಯುವ ತಾಂತ್ರಿಕತೆ ತಿಳಿಸಿಕೊಡಬೇಕಿದೆ ಎಂದು ಲೋಕಿಕೆರೆ ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಚ್‌. ಓಬಳಪ್ಪ ಹೇಳಿದ್ದಾರೆ.

ದಾವಣಗೆರೆ ತಾಲೂಕಿನ ಕನಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳೇನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡ 2018-19ಸಾಲಿನ ಆತ್ಮ… ಯೋಜನೆಯಡಿ ಕಬ್ಬು ಬೆಳೆಯುವ ರೈತರಿಗೆ ಕಿಸಾನ್‌ ಗೋಷ್ಠಿ ಹಾಗೂ ಮಣ್ಣು ಆರೋಗ್ಯ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಾವಣಗೆರೆ ಭಾಗದ ರೈತರು ಕಬ್ಬಿನ
ಇಳುವರಿ ಎಕರೆಗೆ 100 ಟನ್‌ ಬೆಳೆದು ಹಾಗೂ ಹೆಚ್ಚು ಲಾಭ ಪಡೆಯಬೇಕಿದೆ ಎಂದು ಆಶಿಸಿದರು.

ನೂತನ ತಾಂತ್ರಿಕತೆಗಳಾದ ಒಂದುಗಣ್ಣು ನಾಟಿ, ಕಬ್ಬಿನ ಸಸಿ ತಯಾರಿಕೆ, ಅಂಗಾಂಶ ಕೃಷಿ ಮಾದರಿಯಲ್ಲಿ ಸಸಿ ಪಡೆದುಕೊಂಡು ಹಾಗೂ ಸ್ವಂತ ಬೀಜ ಹೊಲದಲ್ಲೆ ಬೆಳೆದು ನಾಟಿ ಮಾಡುವುದರಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂದು ತಿಳಿಸಿದರು.

ಕೃಷಿ ಇಲಾಖೆ ಉಪ ನಿರ್ದೇಶಕಿ ಡಾ| ಹಂಸವೇಣಿ ಮಾತನಾಡಿ, ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ಕಬ್ಬು ಉತ್ಪಾದನೆ ಹೆಚ್ಚಿಸಲು ಈ ಗ್ರಾಮದಲ್ಲಿ ಪ್ರಾತ್ಯಕ್ಷತೆ ಕೈಗೊಳ್ಳಲಾಗಿದೆ. ಉಚಿತವಾಗಿ ಸಾವಯವ ಗೊಬ್ಬರ, ಜಿಂಕ್‌, ಲಘು ಪೋಷಕಾಂಶ ಹಾಗೂ ಅಂತರಬೆಳೆ ಹಲಸಂದಿ ಬೀಜ ವಿತರಿಲಾಗಿದೆ. ಸಾವಯವ ಗೊಬ್ಬರ, ಜಿಂಕ್‌, ಲಘು ಪೋಷಕಾಂಶ ಬಳಸುವುದರಿಂದ ಇಳುವರಿ ಹೆಚ್ಚಿಸಬಹುದು ಎಂದು ತಿಳಿಸಿದರು. 

ಕೃಷಿ ಇಲಾಖೆಯಿಂದ ಕೆ-ಕಿಸಾನ್‌ ಕಾರ್ಯಕ್ರಮ ಪ್ರಾರಂಭವಾಗಿದೆ. ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ಸಂಖ್ಯೆ, ಪಹಣಿ, ಜಾತಿ ಪ್ರಮಾಣಪತ್ರ ಹಾಗೂ ಅಂಗವಿಕಲ ಪ್ರಮಾಣ ಪತ್ರವನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಿ ನೋಂದಣಿ ಮಾಡಿಸಿದ ಎಲ್ಲಾ ರೈತರು ಕೆ-ಕಿಸಾನ್‌ಕಾರ್ಡ್‌ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಆತ್ಮ ಉಪ ಯೋಜನೆಯ ನಿರ್ದೇಶಕ ಎಸ್‌.ಬಿ. ರಾಜಶೇಖರಪ್ಪ ಮಾತನಾಡಿ, ಕಬ್ಬಿನಲ್ಲಿ ಹೆಚ್ಚು ರಾಸಾಯನಿಕ ಗೊಬ್ಬರ ಬಳಸುವುದರಿಂದ ಹೆಚ್ಚು ಇಳುವರಿ ಪಡೆಯುವುದು ಸಾಧ್ಯವಿಲ್ಲ. ಸಾವಯವ ಗೊಬ್ಬರದಿಂದ ಅಧಿಕ ಇಳುವರಿ ಸಿಗಲಿದೆ. ಕಬ್ಬಿನಲ್ಲಿ ಇತ್ತೀಚಿನ ದಿನದಲ್ಲಿ ಗೊಣ್ಣೆಗಳ ಬಾಧೆ ಹೆಚ್ಚಾಗಿದೆ. ಮೇಟರೈಜಿಯಮ್‌ ಬಳಸುವುದರಿಂದ ಹತೋಟಿ ಆಗಲಿದೆ ಎಂದು ತಿಳಿಸಿದರು. 

ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ದನಗೌಡ, ರೈತರಿಗೆ ಇಲಾಖೆಯಲ್ಲಿ ದೊರೆಯುವ ಸಬ್ಸಿಡಿ ಹಾಗೂ ಪರಿಕರಗಳು, ಕೀಟನಾಶಕ, ತುಂತುರು ನೀರಾವರಿ ಘಟಕದ ಬಗ್ಗೆ ವಿವರಿಸಿ, ಇಲಾಖೆಯ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ಸಕಾಲದಲ್ಲಿ
ತಲುಪಿಸುವುದಾಗಿ ತಿಳಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಸಹಾಯಕ ಕೃಷಿ ಅಧಿಕಾರಿ ದುರುಗಪ್ಪ ಇತರರು ಇದ್ದರು. ಒಂದುಗಣ್ಣು ಪದ್ಧತಿಯಲ್ಲಿ ಹೆಚ್ಚು ಇಳುವರಿ ಪಡೆದ ರೈತ ಎನ್‌. ಹನುಮಂತಪ್ಪರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ರೈತರಿಗೆ ಎನ್‌ ಎಫ್‌ಎಸ್‌ಎಂ ಪರಿಕರ ವಿತರಿಸಲಾಯಿತು. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.