ಉತ್ತಮ ಮಳೆ: ಶೇಂಗಾ ಬಿತ್ತನೆ ಕಾರ್ಯ ಬಹುತೇಕ ಪೂರ್ಣ
Team Udayavani, Aug 10, 2020, 2:24 PM IST
ಮೊಳಕಾಲ್ಮೂರು: ತಾಲೂಕಿನಲ್ಲಿ ಸುರಿದ ಉತ್ತಮವಾದ ಹದ ಮಳೆಯಿಂದ ಶೇ. 95 ರಷ್ಟು ಶೇಂಗಾ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ.
ಬಹುತೇಕ ರೈತರು ಜಮೀನುಗಳನ್ನು ಬಿತ್ತನೆಗೆ ಸಿದ್ಧಪಡಿಸಿಕೊಂಡಿದ್ದರು. ಶೇಂಗಾ ಬಿತ್ತನೆಗೆ ಸರ್ಕಾರದಿಂದ ಸುಮಾರು 4 ಸಾವಿರ ಕ್ವಿಂಟಲ್ ಬಿತ್ತನೆ ಬೀಜ ಸರಬರಾಜಾಗಿತ್ತು. ತಾಲೂಕಿನಲ್ಲಿ ಸುಮಾರು 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಗುರಿ ಹೊಂದಿದ್ದು, ಸುಮಾರು 31 ಸಾವಿರ ಹೆಕ್ಟೇರ್ ಪ್ರದೇಶಕ್ಕಿಂತಲೂ ಹೆಚ್ಚು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಖುಷ್ಕಿ ಜಮೀನುಗಳಲ್ಲಿ ಪ್ರಮುಖ ಶೇಂಗಾ ಬೆಳೆ ಸೇರಿದಂತೆ ಸಜ್ಜೆ, ಜೋಳ, ನವಣೆ, ಹುರುಳಿ, ತೊಗರಿ, ಅಲಸಂದಿ, ಹೆಸರುಕಾಳು ಸೇರಿದಂತೆ ಇನ್ನಿತರ ಬಿತ್ತನೆ ಬೀಜಗಳನ್ನು ಬಿತ್ತನೆ ಮಾಡಲಾಗಿದೆ. ನೀರಾವರಿ ಜಮೀನುಗಳಲ್ಲಿ ಭತ್ತ, ರಾಗಿ, ಹೈಬ್ರಿಡ್ ಜೋಳ, ಮುಸುಕಿನ ಜೋಳ, ಹತ್ತಿ, ಈರುಳ್ಳಿ ಹಾಗೂ ಇನ್ನಿತರ ಬೆಳೆಗಳ ನಾಟಿ ಹಾಗೂ ಬಿತ್ತನೆ ಮಾಡಲಾಗಿದೆ.
ತಾಲೂಕಿನಲ್ಲಿ ಸಕಾಲಕ್ಕೆ ಉತ್ತಮವಾದ ಮಳೆಯಾಗಿರುವ ಕಾರಣ ರೈತರು ಸುಮಾರು 31 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯವನ್ನು ಪೂರೈಸಿದ್ದಾರೆ. ಶೇಂಗಾ ಹಾಗೂ ಇನ್ನಿತರ ಬೆಳೆಗಳಿಗೆ ಹೆಚ್ಚಿನ ಮಳೆಯಿಂದ ಯಾವುದೇ ರೋಗ ಬಾರದಂತೆ ಕೃಷಿ ಇಲಾಖೆಯ ನಿರ್ದೇಶನದಲ್ಲಿ ಔಷಧಿ ಸಿಂಪಡಿಸಿ ಬೆಳೆಯನ್ನು ರಕ್ಷಿಸಿಕೊಳ್ಳಬೇಕು.- ಅಶೋಕ, ಸಹಾಯಕ ಕೃಷಿ ನಿರ್ದೇಶಕ
10-12 ವರ್ಷಗಳ ನಂತರ ಮೊಳಕಾಲ್ಮೂರು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಇದು ರೈತರು ಸಕಾಲಕ್ಕೆ ಬಿತ್ತೆನೆ ಮಾಡಿಕೊಳ್ಳಲು ಸಹಕಾರಿಯಾಗಿದೆ. ಬೆಳಗಲ್ ಈಶ್ವರಯ್ಯಸ್ವಾಮಿ, ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ