ಎತ್ತುಗಳ ಜಾತ್ರೆಗೆ ರೈತರಿಂದ ಉತ್ತಮ ಸ್ಪಂದನೆ
Team Udayavani, Apr 5, 2022, 2:44 PM IST
ಜಗಳೂರು: ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡದಗುಡ್ಡದಲ್ಲಿ ನಡೆದ ಎತ್ತುಗಳ ಜಾತ್ರೆಯಲ್ಲಿ ಎತ್ತುಗಳ ಮಾರಾಟಕ್ಕೆ ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಬೆಲೆ ಅಧಿಕವಾದರೂ ರೈತರು ವ್ಯವಸಾಯಕ್ಕೆ ಸೂಕ್ತವಾದ ಎತ್ತುಗಳನ್ನು ಖರೀದಿಸಿದರು. ಕೊಡದಗುಡ್ಡ ಗ್ರಾಮದಲ್ಲಿ ವೀರಭದ್ರಸ್ವಾಮಿಯ ರಥೋತ್ಸವದ ನಂತರ ಎತ್ತುಗಳ ಜಾತ್ರೆ ನಡೆಯುವುದು ವಾಡಿಕೆ. ಈ ಜಾತ್ರೆಗೆ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿಜಯನಗರ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಿಂದ ವ್ಯಾಪಾರಸ್ಥರು ಆಗಮಿಸಿ ವ್ಯಾಪಾರ ವಹಿವಾಟು ಮಾಡಿದರು.
ಕೊರೊನಾ ಹಿನ್ನಲೆಯಲ್ಲಿ ಕಳೆದೆರೆಡು ವರ್ಷಗಳಿಂದ ಎತ್ತುಗಳ ಜಾತ್ರೆಯನ್ನು ರದ್ದು ಮಾಡಲಾಗಿತ್ತು. ಈ ಬಾರಿ ಕೋವಿಡ್ ನಿಯಮಗಳು ಸಡಿಲಗೊಂಡ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಸಾವಿರಾರು ಜೋಡಿ ಎತ್ತುಗಳು ಮಾರಾಟವಾದವು. ಒಂದು ಜೊತೆ ಎತ್ತುಗಳಿಗೆ 60 ಸಾವಿರದಿಂದ 1.80 ಲಕ್ಷ ರೂ.ವರೆಗೆ ದರ ನಿಗದಿಯಾಗಿತ್ತು.
ತಂತ್ರಜ್ಞಾನ ಎಷ್ಟೇ ಮುಂದುವರೆದರೂ ವ್ಯವಸಾಯಕ್ಕೆ ಎತ್ತುಗಳೇ ಸೂಕ್ತ. ಬಿತ್ತನೆ ಮಾಡುವಾಗ ಮತ್ತು ಕಟಾವು ಮಾಡಿದ ಬೆಳೆಯನ್ನು ತುಳಿಸುವಾಗ ಎತ್ತುಗಳು ಬೇಕೆ ಬೇಕು. ಅಲ್ಲದೆ ಮನೆಯ ಮುಂದೆ ಎತ್ತುಗಳಿದ್ದರೆ ಅದರ ಸೊಗಸೇ ಬೇರೆ ಎನ್ನುತ್ತಾರೆ ರೈತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!