ಬೃಹತ್ ಶಕ್ತಿಯಾಗಿ ಬೆಳೆದಿದೆ ಸರ್ಕಾರಿ ನೌಕರರ ಸಂಘಟನೆ
•ನೌಕರರ ಸಮಸ್ಯೆ ಪರಿಹರಿಸುವುದಲ್ಲದೇ ಸಮಾಜಮುಖೀ ಕೆಲಸ
Team Udayavani, Jul 9, 2019, 2:55 PM IST
ಹೊನ್ನಾಳಿ: ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾಧ್ಯಕ್ಷ ಷಡಾಕ್ಷರಿ ಉದ್ಘಾಟಿಸಿದರು.
ಹೊನ್ನಾಳಿ: ಹಲವಾರು ದಶಕಗಳ ಹಿಂದೆ ಒಬ್ಬ ಧೀಮಂತ ಮಹಿಳೆಯಿಂದ ಆರಂಭಗೊಂಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇಂದು ಬೃಹತ್ ಶಕ್ತಿಯಾಗಿ ಬೆಳೆದು ನಿಂತಿದ್ದು, ಸರ್ಕಾರಿ ನೌಕರರ ಆಶಯಗಳನ್ನು ಸದಾ ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿದೆ ಎಂದು ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಸಂಘದ ನೂತನ ಪದಾಧಿಕಾರಿಗಳ ಅಧಿಕಾರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಂಘ ಕೇವಲ ತನ್ನ ನೌಕರರ ಹಿತಾಸಕ್ತಿ ಕಾಪಾಡದೇ ಜೊತೆಗೆ ರಕ್ತದಾನ, ಉನ್ನತ ಪರೀಕ್ಷೆಗಳಿಗೆ ತರಬೇತಿ, ಇಲಾಖೆ ತರಬೇತಿಗಳು, ನೌಕರರ ಆರೋಗ್ಯ ತಪಾಸಣೆ ಶಿಬಿರ ಹೀಗೆ ಹತ್ತು ಹಲವು ಸಮಾಜಮುಖೀ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದು ಹೇಳಿದರು.
ಇಂದಿಗೂ ಎನ್.ಪಿ.ಎಸ್ ಸೇರಿದಂತೆ ನೌಕರರ ಹಲವಾರು ಸಮಸ್ಯೆಗಳಿವೆ. ಹಳೆಯ ಪಿಂಚಣಿ ಪದ್ಧತಿ ಜಾರಿಗೆ ಯಾವುದೇ ಹೋರಾಟಕ್ಕೂ ಸಂಘ ಸಿದ್ಧವಿದ್ದು, ನೌಕರರು ಕೂಡ ಸಹಕಾರ ನೀಡಬೇಕೆಂದು ಹೇಳಿದರು.
ತಹಶೀಲ್ದಾರ್ ತುಷಾರ್ ಬಿ. ಹೂಸೂರು ಮಾತನಾಡಿ, ತಾವು ಈ ಹಿಂದೆ ಸೇವೆ ಸಲ್ಲಿಸಿದ ಪ್ರದೇಶಗಳಲ್ಲಿ ಸಂಘದ ಅಧ್ಯಕ್ಷನಾಗಿ ಕೆಲಸ ಮಾಡಿದ್ದು, ಹೊನ್ನಾಳಿ ತಾಲೂಕಿನ ಸಂಘದ ಕೆಲಸಗಳಿಗೆ ಸ್ಪಂದಿಸುವುದಾಗಿ ಹೇಳಿದರು.
ದಾವಣಗೆರೆ ಜಿಲ್ಲಾಧ್ಯಕ್ಷ ್ಷಪರಶುರಾಮ್ ಮಾತನಾಡಿ, ರಾಜ್ಯದಲ್ಲಿ ಸುಮಾರು 5.20 ಲಕ್ಷ ಸರ್ಕಾರಿ ನೌಕರರಿದ್ದು, ಎಲ್ಲಾ ನೌಕರರ ಸಹಕಾರದಿಂದ ಎನ್.ಪಿ.ಎಸ್. ಸೇರಿದಂತೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಈ ಹಿಂದಿನ ಅಧ್ಯಕ್ಷ ಜಿ.ಮಲ್ಲೇಶಪ್ಪ ನೂತನ ಅಧ್ಯಕ್ಷ ಬಸಣ್ಣ ಮಾದರ್ಗೆ ಅಧಿಕಾರ ಹಸ್ತಾಂತರಿಸಿದರು. ಹಿಂದಿನ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರು, ಶಿಕಾರಿಪುರ ತಾಲೂಕಿನ ಅಧ್ಯಕ್ಷರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ನೌಕರರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ರಾಜ್ಯ ಪರಿಷತ್ ಸದಸ್ಯರಾಗಿ ಜಿ.ನಾಗೇಶ್, ಖಜಾಂಚಿಯಾಗಿ ಎಂ.ಎಚ್.ಕೊಟ್ಯಪ್ಪ, ಕಾರ್ಯದರ್ಶಿ ಕೆ.ಆರ್.ರಂಗಪ್ಪ ಪದಗ್ರಹಣ ಮಾಡಿದರು. ತಾ.ಪಂ ಸದಸ್ಯ ವಿಜಯಕುಮಾರ್, ನಿಕಟಪೂರ್ವ ಅಧ್ಯಕ್ಷ ಜಿ.ಮಲ್ಲೇಶಪ್ಪ, ಗೌರವಾಧ್ಯಕ್ಷ ನ್ಯಾಮತಿ ನಾಗರಾಜ್, ಸುರೇಶ್ ಮಾಳಗಿ, ರವಿಗಾಳಿ, ಡಾ| ವಿಶ್ವನಟೇಶ್, ಶಿವಪದ್ಮ, ಸಿದ್ದಪ್ಪ ಹೊಸಕೇರಿ, ವಿ.ಹರೀಶ್, ಎಚ್.ಕೆ. ರಮೇಶ್, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕರಿಬಸಯ್ಯ, ಎಚ್.ಕೆ. ಚಂದ್ರಶೇಖರ್, ಮಂಜುನಾಥ್ ಇಂಗಳಗೊಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ