ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ರಾಜ್ಯಪಾಲ ಗೆಹ್ಲೋತ್ ಭೇಟಿ
ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ
Team Udayavani, Mar 25, 2022, 11:18 AM IST
ದಾವಣಗೆರೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಗುರುವಾರ ಹರಿಹರದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿದ್ದರು.
ಶ್ರೀ ವಚನಾನಂದ ಸ್ವಾಮೀಜಿ ಕೆಲವು ದಿನಗಳ ಹಿಂದೆ ರಾಜಭವನಕ್ಕೆ ತೆರಳಿದ್ದ ವೇಳೆ ಯೋಗ ಸಾಧನೆ ಹಾಗೂ ಸಾಮಾಜಿಕ ಸುಧಾರಣೆ ಬಗ್ಗೆ ಸುಮಾರು ಎರಡು ಗಂಟೆಗಳ ಕಾಲ ವಿಸ್ತೃತವಾಗಿ ಚರ್ಚೆ ನಡೆಸುವ ಅವಕಾಶವನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ನೀಡಿದ್ದರು. ಹರಿಹರಕ್ಕೆ ಭೇಟಿ ನೀಡುವಂತೆ ಶ್ರೀಗಳು ಅವರಲ್ಲಿ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ರಾಜ್ಯಪಾಲರು ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೂ ಆಗಮಿಸಿದ್ದರು.
ಸಿಖ್ ಸಂಪ್ರದಾಯದ ಗುರುದ್ವಾರದಲ್ಲಿ ಕಂಡು ಬರುವಂತಹ ವಾತಾವರಣ ಇಲ್ಲಿದೆ. ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಅನುಭವವನ್ನು ಹೊಂದಿರುವಂತಹ ಶ್ರೀ ವಚನಾನಂದ ಸ್ವಾಮೀಜಿ ಮುತುವರ್ಜಿಯಿಂದ ಕೈಗೊಂಡಿರುವಂತಹ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಠದ ಪರಂಪರೆ, ಇತಿಹಾಸದ ಹಾಗೂ ಪಂಚಮಸಾಲಿ ಸಮಾಜ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಮಹಾಯೋಗಿನಿ ಅಕ್ಕಮಹಾದೇವಿ, ಕಿತ್ತೂರಿನ ರಾಣಿ ಚೆನ್ನಮ್ಮ ,ಕೆಳದಿ ರಾಣಿ ಚೆನ್ನಮ್ಮ, ಬೆಳವಡಿ ರಾಣಿ ಮಲ್ಲಮ್ಮ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದ ಮೈಲಾರ ಮಹಾದೇವಪ್ಪ, ಅಕ್ಷರಯೋಗಿ ಅರಟಾಳ ರುದ್ರಗೌಡ, ಸರ್. ಕಂಬಳಿ ಸಿದ್ದಪ್ಪ, ಅದರಗುಂಚಿ ಶಂಕರಗೌಡ ಮುಂತಾದ ಮಹನೀಯರ ಬಗ್ಗೆ ಮಾಹಿತಿ ಪಡೆದುಕೊಂಡ ರಾಜ್ಯಪಾಲರು, ಪಂಚಮಸಾಲಿ ಸಮುದಾಯದ ವೀರ ಮಹಿಳೆಯರು ರಾಜ್ಯಕ್ಕೆ ನೀಡಿದಂತಹ ಕೊಡುಗೆಯನ್ನು ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ