ಪಾಲಿಕೆ-ಗ್ರಾಪಂ ಉಪ ಚುನಾವಣೆ ಶಾಂತಿಯುತ


Team Udayavani, Mar 30, 2021, 1:48 PM IST

ಪಾಲಿಕೆ-ಗ್ರಾಪಂ ಉಪ ಚುನಾವಣೆ ಶಾಂತಿಯುತ

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ತೆರವಾಗಿದ್ದ ಎರಡು ವಾರ್ಡ್‌ಗಳಿಗೆ ಹಾಗೂ ಜಿಲ್ಲೆಯ ನಾಲ್ಕು ಗ್ರಾಪಂಗಳಿಗೆ ಸೋಮವಾರ ಶಾಂತಿಯುತ ಮತದಾನ ನಡೆಯಿತು.

ಮಹಾನಗರ ಪಾಲಿಕೆಯ 20ನೇ ವಾರ್ಡ್‌ ಭಾರತ್‌ ಕಾಲೋನಿ ಹಾಗೂ 22ನೇ ವಾರ್ಡ್‌ಯಲ್ಲಮನಗರದ ಎರಡು ಸ್ಥಾನಗಳಿಗೆಹಾಗೂ ದಾವಣಗೆರೆ ತಾಲೂಕಿನ ಬೇತೂರು,ಕನಗೊಂಡನಹಳ್ಳಿ, ಕುಕ್ಕವಾಡ ಹಾಗೂ ಹೊನ್ನಾಳಿತಾಲೂಕಿನ ಅರಬಗಟ್ಟೆ ಗ್ರಾಮ ಪಂಚಾಯಿತಿಯಒಂದು ಸ್ಥಾನಗಳಿಗೆ ಚುನಾವಣೆ ನಡೆಯಿತು. ಮಹಾನಗರ ಪಾಲಿಕೆಯ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 15 ಬೂತ್‌ಗಳಲ್ಲಿಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ವಾರ್ಡ್‌20ರ ಕಣದಲ್ಲಿದ್ದ ಇಬ್ಬರು ಹಾಗೂ ವಾರ್ಡ್‌22ರ ಕಣದಲ್ಲಿದ್ದ ಏಳು ಜನರ ಭವಿಷ್ಯವನ್ನುಮತದಾರರು ಹೋಳಿಯ ದಿನ ಬರೆದಿದ್ದುಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಎರಡೂವಾರ್ಡ್‌ಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು.

ಜಿಲ್ಲೆಯ ನಾಲ್ಕು ಗ್ರಾಪಂಗಳ ಉಪ ಚುನಾವಣೆ17 ಮತಗಟ್ಟೆಗಳಲ್ಲಿ ನಡೆಯಿತು. ಒಟ್ಟು ನಾಲ್ಕು ಗ್ರಾಪಂಗಳ ಒಟ್ಟು 43 ಸ್ಥಾನಗಳಿಗೆ 102ಜನರು ಸ್ಪರ್ಧಿಸಿದ್ದರು. ಮತದಾನ ಪ್ರಕ್ರಿಯೆಸುಗಮವಾಗಿ ನಡೆಯಲು ಪೊಲೀಸರು,ಮತಗಟ್ಟೆ ಸಿಬ್ಬಂದಿ ಸೇರಿ 200ಕ್ಕೂ ಹೆಚ್ಚು ನೌಕರರು ಕಾರ್ಯನಿರ್ವಹಿಸಿದರು. ಮತಗಟ್ಟೆಗೆ ಆಗಮಿಸುವ ಎಲ್ಲ ಮತದಾರರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ಸ್ಯಾನಿಟೈಸರ್‌ಹಾಗೂ ಥರ್ಮಲ್‌ ಸ್ಕಾÂನಿಂಗ್‌ ವ್ಯವಸ್ಥೆಮಾಡಲಾಗಿತ್ತು. ಮಾಸ್ಕ್ ಬಿಟ್ಟು ಬಂದವರಿಗೆ ಕೆಲವು ಬೂತ್‌ಗಳಲ್ಲಿ ರಾಜಕೀಯ ಪಕ್ಷಗಳಕಾರ್ಯಕರ್ತರೇ ಮಾಸ್ಕ್ ವಿತರಿಸಿದರು.ಮತಗಟ್ಟೆಯ ಹೊರಗೆ ಸರದಿಯಲ್ಲಿ ಸಾಮಾಜಿಕಅಂತರಕ್ಕಾಗಿ ಕಾಯ್ದುಕೊಳ್ಳಲು ಗುರುತುಗಳನ್ನು ಹಾಕಲಾಗಿತ್ತು.

ಪಾಲಿಕೆ ಉಪ ಚುನಾವಣೆ: ಶೇಕಡಾವಾರು ಮತ ವಿವರ :

ದಾವಣಗೆರೆ: ಮಹಾನಗರ ಪಾಲಿಕೆಯ 20ನೇ ವಾರ್ಡ್‌ನ ಉಪ ಚುನಾವಣೆಯಲ್ಲಿ ಶೇ. 60.73ಮತ್ತು 22ನೇ ವಾರ್ಡ್‌ನಲ್ಲಿ ಶೇ.52.68 ರಷ್ಟು ಮತದಾನವಾಗಿದೆ. ಒಟ್ಟಾರೆ ಶೇ.52.68 ರಷ್ಟು ಮತ ಚಲಾವಣೆಯಾಗಿದೆ. ಭಾರತ್‌ ಕಾಲೋನಿಯ 20ನೇ ವಾರ್ಡ್‌ನಲ್ಲಿ 7 ಮತಗಟ್ಟೆಯಲ್ಲಿ 3625ಪುರುಷರು, 3773 ಮಹಿಳಾ ಮತದಾರರು ಒಳಗೊಂಡಂತೆ ಒಟ್ಟು 7398 ಮತದಾರರಿದ್ದಾರೆ. ಉಪಚುನಾವಣೆಯಲ್ಲಿ 2,265 ಪುರುಷರು, 2,228 ಮಹಿಳಾ ಮತದಾರರು ಸೇರಿದಂತೆ ಒಟ್ಟು 4,493ಮತದಾರರು ಮತ ಚಲಾಯಿಸಿದ್ದಾರೆ. ಗಂಡು ಮಕ್ಕಳು ಶೇ. 62.48 ಹಾಗೂ ಮಹಿಳೆಯರು ಶೇ.59.05 ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ. ಒಟ್ಟಾರೆ ಶೇ. 60.73 ಮತದಾನ ದಾಖಲಾಗಿದೆ.ಯಲ್ಲಮ್ಮ ನಗರದ 22ನೇ ವಾರ್ಡ್‌ನ 8 ಮತಗಟ್ಟೆಯಲ್ಲಿ 4,013 ಪುರುಷರು, 4,042ಮಹಿಳೆಯರು ಹಾಗೂ ಒಬ್ಬರು ಇತರೆ ಮತದಾರರು ಸೇರಿದಂತೆ ಒಟ್ಟು 8056 ಮತದಾರರಿದ್ದಾರೆ. 2,113 ಪುರುಷರು, 2,131 ಮಹಿಳಾ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ. ಶೇ. 56.25 ಪ್ರಮಾಣದಲ್ಲಿ ಪುರುಷರು, ಶೇ.52.72 ಪ್ರಮಾಣದಲ್ಲಿ ಮಹಿಳಾ ಮತದಾರರು ತಮ್ಮ ವಾರ್ಡ್‌ಗಳ ಸದಸ್ಯರ ಭವಿಷ್ಯ ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.