ಜಿಎಸ್‌ಟಿ ಜನ-ಗ್ರಾಹಕಸ್ನೇಹಿ ಪದ್ಧತಿ


Team Udayavani, Aug 5, 2017, 3:20 PM IST

05-DV-4.jpg

ದಾವಣಗೆರೆ: ಒಂದು ದೇಶ-ಒಂದು ತೆರಿಗೆ ಎಂಬ ಘೋಷಣೆಯೊಂದಿಗೆ ಜಾರಿಗೆ ಬಂದಿರುವ ಜಿಎಸ್‌ಟಿ ಗ್ರಾಹಕ ಸ್ನೇಹಿಯಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ತಿಳಿಸಿದ್ದಾರೆ. 

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಸರಕು ಮತ್ತು ಸೇವಾ ತೆರಿಗೆ ಅರಿವು… ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಗ್ರಾಹಕರು ಜಿಎಸ್‌ಟಿ ಕುರಿತು ಯಾವುದೇ ಗೊಂದಲ ಇಟ್ಟುಕೊಳ್ಳಬೇಕಿಲ್ಲ. ಜಿಎಸ್‌ಟಿ ಒಂದು ಜನಸ್ನೇಹಿ ಪದ್ಧತಿ ಎಂದರು. 

ಜಿಎಸ್‌ಟಿಯಿಂದ ನಾವು ಕಟ್ಟುವ ತೆರಿಗೆ ಮಾಹಿತಿ ದೊರೆಯುತ್ತದೆ. ಇನ್ನು ತಯಾರಕನಿಗೂ ಇದರಿಂದ ಉಪಯೋಗ ಇದೆ. ಮೊದಲು ವಸ್ತು ತಯಾರಕ
ಪ್ರತಿ ಹಂತದಲ್ಲೂ ತೆರಿಗೆ ಕಟ್ಟುತ್ತಿದ್ದ. ಕಚ್ಚಾವಸ್ತುಗಳಿಂದ ಹಿಡಿದು ಉತ್ಪನ್ನ ಮಾರುಕಟ್ಟೆಗೆ ಹೋಗುವವರೆಗೆ ವಿವಿಧ ಹಂತಗಳಲ್ಲಿ ತೆರಿಗೆ ಕಟ್ಟಬೇಕಿತ್ತು. ಆ ಎಲ್ಲ ತೆರಿಗೆ ಸೇರಿಸಿ ಗ್ರಾಹಕರ ಮೇಲೆ ಹಾಕಿದಾಗ ಹೊರೆ ಆಗುತ್ತಿತ್ತು. ಉತ್ಪನ್ನ ತಯಾರಾದ ಮೇಲೆ ಮಾರಾಟ ತೆರಿಗೆ, ಸೇವಾ ತೆರಿಗೆ ಹೀಗೆ ಅನೇಕ ತೆರಿಗೆ ಹಾಕಲಾಗುತ್ತಿತ್ತು. ಆದರೆ ಇನ್ನು ಮುಂದೆ ಹೀಗಾಗುವುದಿಲ್ಲ ಎಂದರು.

ಆದರೂ ನಮ್ಮಲ್ಲೊಂದು ಪ್ರಶ್ನೆ ಉಳಿದುಕೊಂಡಿದೆ. ಜಿಎಸ್‌ಟಿ ಜಾರಿಯಾಗಿದೆ. ಆದರೆ ವಸ್ತುಗಳ ಬೆಲೆ ಕಡಿಮೆಯಾಗಿವೆಯೇ? ಸದ್ಯಕ್ಕೆ ಆ ರೀತಿ ಕಾಣಿಸದಿದ್ದರೂ ಮುಂದಿನ ದಿನಗಳಲ್ಲಿ ಅದರ ಪರಿಣಾಮ ಗೋಚರವಾಗಲಿದೆ. ಗ್ರಾಹಕ ವಸ್ತುವೊಂದನ್ನು ಕೊಂಡಾಗ ಏನು ಗಮನಿಸಬೇಕು. ಅದರಲ್ಲಿ ಮೋಸ ಹೋದರೆ ಏನು ಮಾಡಬೇಕು. ಇದರಲ್ಲಿ ಗ್ರಾಹಕರ, ವ್ಯಾಪಾರಿಗಳ ಪಾತ್ರವೇನು, ಒಟ್ಟಾರೆ ದೇಶದ ಬೆಳವಣಿಗೆಯಲ್ಲಿ ಜಿಎಸ್‌ಟಿ ಹೇಗೆ ಪರಿಣಾಮಕಾರಿ ಎಂಬ ನಿಟ್ಟಿನಲ್ಲಿ ನಡೆಯುತ್ತಿರುವ ಈ ಕಾರ್ಯಾಗಾರ ಎಲ್ಲರಿಗೂ ಸದುಪಯೋಗವಾಗಲಿ ಎಂದು ಆಶಿಸಿದರು.

ಕಸ್ಟಮ್‌ ಸೆಂಟ್ರಲ್‌ ಎಕ್ಸೈಜ್‌ ಸಹಾಯಕ ಆಯುಕ್ತ ದ್ಯಾಮಪ್ಪ ಐರಣಿ ಮಾತನಾಡಿ, ಈ ಹಿಂದೆ ಕೇಂದ್ರ ಸರ್ಕಾರದ ಕಸ್ಟಮ್‌ ಸುಂಕ ಗ್ರಾಹಕರ ಕಣ್ಣಿಗೆ ಕಾಣಿಸುತ್ತಿರಲಿಲ್ಲ. ಪ್ರತಿ ರಾಜ್ಯಗಳಲ್ಲಿ ಒಂದೊಂದು ರೀತಿಯ ತೆರಿಗೆ ವ್ಯವಸ್ಥೆಯಿತ್ತು. ಬೆಲೆಗಳಲ್ಲಿ ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸವಿರುತ್ತಿತ್ತು. ಹಾಗಾಗಿ ಗಡಿ ಭಾಗದ ಜನ ಬೆಲೆ ಕಡಿಮೆ ಇರುವ ರಾಜ್ಯಗಳಿಗೆ ಹೋಗಿ ವಸ್ತು ಖರೀದಿಸುತ್ತಿದ್ದರು. ಈಗ 20 ಲಕ್ಷ ಮೇಲ್ಪಟ್ಟು ವಹಿವಾಟಿರುವ ಎಲ್ಲರು ತಮ್ಮ ಅಂಗಡಿ ಮುಂಭಾಗದಲ್ಲಿ ಜಿಎಸ್‌ಟಿ ಸರ್ಟಿಫಿಕೇಟ್‌ ಪ್ರದರ್ಶಿಸಬೇಕು ಎಂದು ತಿಳಿಸಿದರು. 

200 ರೂಪಾಯಿಗಿಂತ ಹೆಚ್ಚಿನ ಮೌಲ್ಯದ ವಸ್ತು ಖರೀದಿಸಿದರೆ ಕಡ್ಡಾಯವಾಗಿ ರಸೀದಿ ಕೋಡಬೇಕು. ಒಂದು ವೇಳೆ 200 ರೂಪಾಯಿಗಿಂತ ಕಡಿಮೆ ವಸ್ತು ಖರೀದಿಸಿದರೆ ಗ್ರಾಹಕರು ಬಿಲ್‌ ಕೇಳಿದರೆ ಕೊಡುವುದಿಲ್ಲ ಎನ್ನುವಂತಿಲ್ಲ. ವಸ್ತುವಿನ ಎಂಆರ್‌ಪಿ ಆದ ಮೇಲೆ ಅದರ ಮೇಲೆ ಜಿಎಸ್‌ಟಿ ಹಾಕಲು ಬರುವುದಿಲ್ಲ. ಜಿಎಸ್‌ಟಿ ಸಂಬಂಧಿತ ದೂರು, ಮಾಹಿತಿಗೆ ಸಹಾಯವಾಣಿ 0120-4888999, 18001200232ಗೆ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.

ವಾಣಿಜ್ಯ ತೆರಿಗೆ ಉಪ ಆಯುಕ್ತ ಎಂ ಬಸವಣ್ಣ, ಜಂಟಿ ಆಯುಕ್ತ ಶ್ರೀನಿವಾಸ್‌ ವಿವಿಧ ಇಲಾಖಾ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.