ಲಂಚ ಪಡೆಯುತ್ತಿದ್ದ ಹರಿಹರದ ಬೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ
Team Udayavani, Feb 23, 2023, 2:35 PM IST
ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕದ ಅನುಮೋದನೆ ನೀಡಲು ಗುತ್ತಿಗೆದಾರರಿಂದ ಆರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಹರಿಹರದ ಬೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಹರಿಹರ ನಗರ ಬೆಸ್ಕಾಂನ ಸಹಾಯಕ ಇಂಜಿನಿಯರ್ ಬಿ.ಎಂ. ಕರಿಬಸಯ್ಯ ಲೋಕಾಯುಕ್ತರ ಬಲೆಗೆ ಬಿದ್ದವರು.
ವಿದ್ಯುತ್ ಗುತ್ತಿಗೆದಾರ, ಹರಿಹರದ ನಿವಾಸಿ ಮಹೇಶ್ವರಪ್ಪ ಬೇವಿನಹಳ್ಳಿ ಎಂಬುವರಿಗೆ ಐಪಿ ಸೆಟ್ ವಿದ್ಯುತ್ ಅನುಮೋದನೆ ನೀಡಲು ಮೊದಲಿಗೆ ಕರಿಬಸಯ್ಯ ಪ್ರತಿ ಒಂದಕ್ಕೆ ಐದು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅಂತಿಮವಾಗಿ ಪ್ರತಿ ಒಂದಕ್ಕೆ ಒಂದು ಸಾವಿರದಂತೆ ಒಪ್ಪಿಕೊಂಡು ಮುಂಗಡವಾಗಿ ಒಂದು ಸಾವಿರ ರೂಪಾಯಿ ಲಂಚ ತೆಗೆದುಕೊಂಡಿದ್ದರು.
ಗುತ್ತಿಗೆದಾರ ಮಹೇಶ್ವರಪ್ಪ ಬೇವಿನಹಳ್ಳಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಗುರುವಾರ ಬೆಸ್ಕಾಂ ಕಚೇರಿಯಲ್ಲೇ ಕರಿಬಸಯ್ಯ ಆರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಂಜಿನಿಯರ್ ಕರಿಬಸಯ್ಯ ಅವರನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ, ಡಿಎಸ್ಪಿ ರಾಮಕೃಷ್ಣ, ವೃತ್ತ ನಿರೀಕ್ಷಕ ಎಚ್.ಎಸ್. ರಾಷ್ಟ್ರಪತಿ, ಆಂಜನೇಯ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು