ವರ್ಷದಿಂದ ಬಂದೇ ಇಲ್ಲ ಆವಾಸ್‌ ಯೋಜನೆ ಸಹಾಯಧನ


Team Udayavani, Jun 15, 2020, 5:35 PM IST

1-June-24

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹರಿಹರ: ನಗರ ಪ್ರದೇಶದ ಬಡವರಿಗೆ ಸೂರು ಕಲ್ಪಿಸುವ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಲ್ಲಿ ಕಳೆದೊಂದು ವರ್ಷದಿಂದ ಸರಿಯಾಗಿ ಸಹಾಯಧನ ಬಿಡುಗಡೆ ಆಗದ ಕಾರಣ, ಮನೆಗಳ ನಿರ್ಮಾಣ ಅರ್ಧಕ್ಕೆ ನಿಂತಿದ್ದು, ಫಲಾನುಭವಿಗಳು ಪರದಾಡಬೇಕಾಗಿದೆ.

ಆವಾಸ್‌ ಯೋಜನೆಯಡಿ ಸರ್ಕಾರ ಮನೆ ನಿರ್ಮಾಣದ ವಿವಿಧ ಹಂತಗಳಲ್ಲಿ ತಲಾ 37,000 ರೂಗಳಂತೆ 4 ಕಂತುಗಳಲ್ಲಿ ಒಟ್ಟು 1.5 ಲಕ್ಷ ರೂ. ಸಹಾಯಧನ ನೀಡುತ್ತದೆ. ಆದರೆ ನಗರದಲ್ಲಿ ಕಳೆದ ಸುಮಾರು 1 ವರ್ಷದಿಂದ ಅನುದಾನ ಬಿಡಗಡೆಯಾಗಿಲ್ಲ, ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಬಿಸಿಲು, ಮಳೆ-ಗಾಳಿಗೆ ಅರ್ಧ ಕಟ್ಟಿದ ಮನೆ ಕರಗಿ ಹೋಗುತ್ತಿವೆ ಎಂದು ಫಲಾನುಭವಿಗಳು ಗೋಳಿಡುತ್ತಿದ್ದಾರೆ. 2019ರಲ್ಲಿ ನಗರಸಭಾ ವ್ಯಾಪ್ತಿಯ ಒಟ್ಟು 232 ಫಲಾನುಭವಿಗಳು ಪಿಎಂ ಆವಾಸ್‌ ಯೋಜನೆಗೆ ಆಯ್ಕೆಯಾಗಿದ್ದು, ಇವರಲ್ಲಿ 23 ಜನರು ಅಡಿಪಾಯ ಹಾಕಿ, ಉಳಿದವರು ಗೋಡೆ ಹಂತದಲ್ಲಿ ಮನೆ ನಿರ್ಮಿಸಿಕೊಂಡು ಉಳಿದ ಕಾಮಗಾರಿಗೆ ಸರ್ಕಾರದ ಸಹಾಯಧನಕ್ಕೆ ಚಾತಕ ಪಕ್ಷಗಳಂತೆ ಕಾಯುತ್ತಿದ್ದಾರೆ.

ಈಗಾಗಲೇ ಇದ್ದ ಹಳೆ ಮನೆ ಕೆಡವಿಕೊಂಡು, ಕೈಲಿದ್ದ ಹಣವನ್ನೂ ಖಾಲಿ ಮಾಡಿಕೊಂಡು ಬಯಲು ಪಾಲಾಗಿರುವ ಫಲಾನುಭವಿಗಳು ಕಳೆದ 9-10 ತಿಂಗಳಿನಿಂದ ನಿತ್ಯ ನಗರಸಭೆಗೆ ಅಲೆದಾಡುತ್ತಿದ್ದಾರೆ. ಅಷ್ಟರಲ್ಲಿ ಕೋವಿಡ್ ವಕ್ಕರಿಸಿದ್ದು, ಲಾಕ್‌ಡೌನ್‌ ಮುಗಿದ ಕೂಡಲೇ ಅನುದಾನ ಬರಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು. ಈಗ ಲಾಕ್‌ಡೌನ್‌ ಮುಗಿದು ತಿಂಗಳೇ ಉರುಳಿದರೂ ಹಣ ಬಿಡುಗಡೆಯಾಗಿಲ್ಲ. ಮಳೆಗಾಲ ಬೇರೆ ಆರಂಭವಾಗಿದ್ದು, ಇರುವ ಮನೆಯನ್ನೂ ಕೆಡವಿಕೊಂಡಿರುವ ಬಡ ಜನರು ಮಳೆ-ಗಾಳಿ, ಚಳಿಗೆ ಪರಿತಪಿಸಬೇಕಾಗಿದೆ. ಇದ್ದುದರಲ್ಲೆ ಅನುಕೂಲವಿದ್ದವರು ಬಾಡಿಗೆ ಮನೆ ಹಿಡಿದಿದ್ದಾರಾದರೂ ಬಾಡಿಗೆ ಪಾವತಿಗೂ ಈಗ ಹಣವಿಲ್ಲದಾಗಿ ಪರದಾಡುತ್ತಿದ್ದಾರೆ.

ಲಾಕ್‌ಡೌನ್‌ನಿಂದ ವಸತಿ ಇಲಾಖೆಯ ಎಲ್ಲ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಈಗ ಲಾಕ್‌ಡೌನ್‌ ಮುಗಿದಿದ್ದು, ಸಂಬಂಧ ಪಟ್ಟ ಇಲಾಖೆಗೆ ಪತ್ರ ಬರೆದು ಆದಷ್ಟು ಬೇಗನೆ ಹಣ ಬಿಡುಗಡೆ ಮಾಡಲು ಒತ್ತಾಯಿಸಲಾಗಿದೆ.
ಎಸ್‌.ಲಕ್ಷ್ಮೀ, ಪೌರಾಯುಕ್ತೆ,
ನಗರಸಭೆ. ಹರಿಹರ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.