ಈಗ ದೊಗ್ಗಳ್ಳಿಗೂ ಬಂತು ಹಕ್ಕಿಜ್ವರ ?

ಏಕಾಏಕಿ ಸತ್ತ 30 ಕೋಳಿ, ಉಳಿದ ಕೋಳಿಗಳ ಕಲ್ಲಿಂಗ್‌ಬನ್ನಿಕೋಡಲ್ಲಿ ಎರಡನೇ ದಿನವೂ 500 ಕೋಳಿ ಸಂಹಾರ

Team Udayavani, Mar 20, 2020, 11:29 AM IST

20-March-4

ಹರಿಹರ: ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಡು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ತಾಲೂಕಿನ ದೊಗ್ಗಳ್ಳಿ ಗ್ರಾಮದಲ್ಲೂ ಬುಧವಾರ ಏಕಾಏಕಿ 30 ಕೋಳಿಗಳು ಸಾವನ್ನಪ್ಪಿದ್ದು, ಇಲ್ಲೂ ಸಹ ಹಕ್ಕಿಜ್ವರ ಇರುವ ಭೀತಿ ಎದುರಾಗಿದೆ.

ದೊಗ್ಗಳ್ಳಿ ಗ್ರಾಮದ ಶಿರಡಿ ಶ್ರೀ ಹಾಲಿನ ಡೇರಿ ಸಮೀಪದ ಕೋಳಿ ಫಾರಂನಲ್ಲಿನ ಬುಧವಾರ ಸಂಜೆಯಿಂದ ರಾತ್ರಿಯೊಳಗೆ 4-5 ತಾಸುಗಳ ಅವಧಿಯಲ್ಲಿ ಅಂದಾಜು 30 ಕೋಳಿಗಳು ಸತ್ತು ನೆಲಕ್ಕುರಳಿದವು. ವಿಷಯ ತಿಳಿಯುತ್ತಿದ್ದಂತೆ ಗುರುವಾರ ಆರೋಗ್ಯ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸತ್ತ 30 ಕೋಳಿಗಳನ್ನು ಪಶು ವೈದ್ಯಾಧಿಕಾರಿ ಡಾ|ಗುರುಶಾಂತಪ್ಪ ನೇತೃತ್ವದ ತಂಡ ವೈಜ್ಞಾನಿಕ ರೀತಿಯಲ್ಲಿ ಹೂಳಿದ್ದಲ್ಲದೆ, ಫಾರಂನಲ್ಲಿ ಇನ್ನುಳಿದ 30 ಜೀವಂತ ಕೋಳಿಗಳನ್ನೂ ಗೋಣು ತಿರುವಿ ಕೊಂದು, ಕಲ್ಲಿಂಗ್‌ ಕಾರ್ಯಾಚರಣೆ ಮಾಡಲಾಯಿತು. ಸತ್ತ ಕೋಳಿಗಳ ರಕ್ತದ ಮಾದರಿಗಳನ್ನು ಪಡೆದುಕೊಂಡು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ಬಂದ ನಂತರ ಹಕ್ಕಿಜ್ವರ ಇರುವ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ.

ಕೋಳಿ ಫಾರಂ ಹಾಗೂ ಸುತ್ತಮುತ್ತಲ 10 ಜನರಿಗೆ ಯಾವದೆ ಸೋಂಕು ಹರಡದಂತೆ ಟೀಮಿಪ್ಲೂಯು ಮಾತ್ರೆಯನ್ನು ನೀಡಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾ ಕಾರಿ ಡಾ|ಚಂದ್ರಮೋಹನ ತಿಳಿಸಿದ್ದಾರೆ.

ತಾಲೂಕಿನ ನೋಡಲ್‌ ಅಧಿ ಕಾರಿ ಡಾ|ನಟರಾಜ, ಬಿಳಸನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಕಾರಿ ಡಾ|ಆಶಾ, ಹಿರಿಯ ಆರೋಗ್ಯ ಸಹಾಯಕರಾದ ಮಂಜುನಾಥ, ಎಂ.ವಿ.ಹೊರಕೇರಿ ಸ್ಥಳಕ್ಕೆ ಭೇಟಿ ನೀಡಿದ್ದರು.

ಬನ್ನಿಕೋಡು-ಮುಂದುವರಿದ ಕಲ್ಲಿಂಗ್‌
ಬನ್ನಿಕೋಡು ಗ್ರಾಮದಲ್ಲಿ ಬುಧವಾರದಿಂದ ಆರಂಭವಾಗಿರುವ ವೈಜ್ಞಾನಿಕ ರೀತಿಯ ಕೋಳಿ ಸಂಹಾರ ಮಾಡುವ ಕಲ್ಲಿಂಗ್‌ ಆಪರೇಷನ್‌ ಗುರುವಾರವೂ ಸಹ ಮುಂದುವರಿಯಿತು. ಎರಡನೆ ದಿನ 500ಕ್ಕೂ ಹೆಚ್ಚು ಕೋಳಿಗಳನ್ನು ಹಿಡಿದು ಸಾಯಿಸಿ, ಗ್ರಾಮ ಹೊರವಲಯದ ಕೆರೆ ದಂಡೆಯಲ್ಲಿ 2 ಮೀಟರ್‌ ಉದ್ದ, 2 ಮೀಟರ್‌ ಅಗಲ ಮತ್ತು 2 ಮೀಟರ್‌ ಆಳದ ಗುಂಡಿ ತೆಗೆದು ಹೂಳಲಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೆಶಕ ಡಾ|ನಂದಾ ತಿಳಿಸಿದ್ದಾರೆ. ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಭಾಸ್ಕರ್‌ ನಾಯ್ಕ ನೇತೃತ್ವದ ರ್ಯಾಪಿಡ್‌ ರೆಸ್ಪಾನ್ಸ್‌ ಟೀಮ್‌ ಒಂದು ಕಿಲೊಮೀಟರ್‌ ವ್ಯಾಪ್ತಿಯಲ್ಲಿ ಕೋಳಿ, ಹಕ್ಕಿ-ಪಕ್ಷಿಗಳನ್ನು ಸಾಯಿಸುವ ಕಾರ್ಯಾಚರಣೆ ನಡೆಸಿದೆ. ಗ್ರಾಮದಲ್ಲಿ 1600ಕ್ಕೂ ಹೆಚ್ಚು ಕೋಳಿಗಳಿವೆ
ಎಂದು ಅಂದಾಜಿಸಲಾಗಿದ್ದು, ಮೊದಲ ದಿನ 332 ಕೋಳಿಗಳನ್ನು ಸಂಹರಿಸಲಾಗಿತ್ತು.

„ಸಮೀಕ್ಷೆ: ಬನ್ನಿಕೋಡು ಗ್ರಾಮದ ಅಕ್ಕಪಕ್ಕದ ಸಲಗನಹಳ್ಳಿ, ಬೇವಿನಹಳ್ಳಿ ಮುಂತಾದ ಗ್ರಾಮಗಳಲ್ಲೂ ಗುರುವಾರ ಕೋಳಿಗಳ ಸಮೀಕ್ಷೆ ನಡೆಸಲಾಗಿದೆ. ತಾಲೂಕಿನಾದ್ಯಂತ ಎಲ್ಲಾ ಕೋಳಿ ಫಾರಂ ಮಾತ್ರವಲ್ಲದೆ ಸಾಕಿದ ಕೋಳಿಗಳ ಮೇಲೂ ನಿಗಾ ಇಡಲಾಗಿದೆ ಎಂದು ಪಶು ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.