ತಾಪಂ ಇಒ ಸ್ಥಾನಕ್ಕೆ ಇಬ್ಬರು ಅಧಿಕಾರಿಗಳ ಕುಸ್ತಿ!


Team Udayavani, Jan 18, 2020, 11:57 AM IST

18-January-4

ಹರಿಹರ: ಇಲ್ಲಿನ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಸ್ಥಾನಕ್ಕೆ ಇಬ್ಬರು ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ಹಾಲಿ ಕಾರ್ಯ ನಿರ್ವಹಿಸುತ್ತಿದ್ದ ಜಿ.ಡಿ.ಗಂಗಾಧರನ್‌ ಹಾಗೂ ಇಲ್ಲಿಗೆ ವರ್ಗಾವಣೆ ಗೊಂಡಿರುವ ಲಕ್ಷ್ಮೀಪತಿ ಬಿ. ಕಳೆದ 7-8 ತಿಂಗಳಿನಿಂದ ಒಂದೇ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.

ಎಂದಿನಂತೆ ಗುರುವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ಜಿ.ಡಿ.ಗಂಗಾಧರನ್‌ ತಮ್ಮ ಕುರ್ಚಿಯಲ್ಲಿ ಆಸೀನರಾಗಿದ್ದು, ಕೆಲ ಸಮಯದಲ್ಲೇ ಆಗಮಿಸಿದ ಲಕ್ಷ್ಮೀಪತಿ ಬಿ., ನ್ಯಾಯಾಲಯದ ಆದೇಶ ಪ್ರತಿ ನೀಡಿ ಅಧಿಕಾರ ಹಸ್ತಾಂತರಿಸಲು ಕೋರಿದರು. ಗಂಗಾಧರನ್‌ ಬರುವ ಮಾರ್ಚವರೆಗೂ ತಮ್ಮ ಅವಧಿಯಿದೆ ಎಂದು ಅಧಿಕಾರ ಹಸ್ತಾಂತರಿಸಲು ನಿರಾಕರಿಸಿದರಾದರೂ ಸಂಜೆವರೆಗೂ ಇಬ್ಬರೂ ಅಧಿಕಾರಿಗಳು ಒಂದೇ ಕಚೇರಿಯಲ್ಲಿ ಕುಳಿತು ಕಾರ್ಯ ನಿರ್ವಹಿಸಿದರು.

ಶುಕ್ರವಾರ ಅನಾರೋಗ್ಯ ಕಾರಣದಿಂದ ಗಂಗಾಧರನ್‌ ಕರ್ತವ್ಯಕ್ಕೆ ಗೈರಾಗಿದ್ದು, ಲಕ್ಷ್ಮೀಪತಿ ಒಬ್ಬರೆ ಕಚೇರಿಯಲ್ಲಿ ಕುಳಿತು ಕರ್ತವ್ಯ ನಿರ್ವಹಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀಪತಿ, ಕರ್ನಾಟಕ ಸೇವಾ ನಿಯಮದ ಪ್ರಕಾರ ಸ್ವಯಂ ಅಧಿ
ಕಾರ ಪಡೆದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.

ಕಳೆದ ಜು.20ರಂದೇ ತಾವು ಕೊಪ್ಪಳ ಜಿಲ್ಲೆಯಿಂದ ಹರಿಹರಕ್ಕೆ
ವರ್ಗಾವಣೆಗೊಂಡಿದ್ದು, ಜು. 22ರಂದು ಹರಿಹರದಲ್ಲಿ ಕರ್ತವ್ಯಕ್ಕೆ ಹಾಜರಾದೆ. ಆಗಲೇ ಗಂಗಾಧರನ್‌ರಿಗೆ ಗಂಗಾವತಿಗೆ ವರ್ಗಾವಣೆಯಾಗಿತ್ತು. ಆದರೆ ಅವರು ಪುನಃ ವರ್ಗಾವಣೆ ಆದೇಶ ಮಾರ್ಪಡಿಸಿಕೊಂಡು ಹರಿಹರಕ್ಕೆ ಬಂದರು. ನಾನು ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯ ಬೆಂಗಳೂರಿನ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದೆ. ನ.21 ರಂದು ನಾನು ಹರಿಹರಕ್ಕೆ ಮರು ಆದೇಶ ಮಾಡಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಲು ಬಂದಾಗ ಗಂಗಾಧರನ್‌ ಕಚೇರಿಯಲ್ಲಿ ಇರಲಿಲ್ಲ. ಅನಾರೋಗ್ಯ ಕಾರಣದಿಂದ ರಜೆಯಲ್ಲಿದ್ದಾರೆಂದು ತಿಳಿಯಿತು. ಪುನಃ ಡಿ.10ರಂದು ಗಂಗಾಧರನ್‌ ಆದೇಶ ಮಾರ್ಪಡಿಸಿಕೊಂಡು
ಹರಿಹರಕ್ಕೆ ಆಗಮಿಸಿ ಕರ್ತವ್ಯ ನಿರ್ವಹಿಸತೊಡಗಿದರು. ಪದೇ ಪದೇ ವರ್ಗಾವಣೆಯಿಂದ ಬೇಸತ್ತ ನಾನು ಕೆಎಟಿ ಮೊರೆ ಹೋಗಿದ್ದು, ಕೆಎಟಿ ಜ.14ರ ಆದೇಶದಲ್ಲಿ ಸರ್ಕಾರದ ಡಿ.10ರ ವರ್ಗಾವಣೆ ಆದೇಶ ರದ್ದುಪಡಿಸಿದೆ. ಅದರಂತೆ ನಾನು ಇಂದು ಕರ್ತವ್ಯಕ್ಕೆ ಹಾಜರಾಗಿದ್ದೇನೆ ಎಂದು ವಿವರಿಸಿದರು.

ಸರ್ಕಾರದ ಆದೇಶ ಪಾಲಿಸುತ್ತೇನೆ:
ಗಂಗಾಧರ್‌ ನ್ಯಾಯಾಲಯ ಆದೇಶವು ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ತಲುಪಿದ್ದು, ಅವರು ಮುಂದಿನ ಕ್ರಮ ಕೈಗೊಳ್ಳುತ್ತಾರೆ. ಸರ್ಕಾರದ ಆದೇಶದಂತೆ ನಾನು ನಡೆದುಕೊಳ್ಳುತ್ತೇನೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ರಜೆಯಲ್ಲಿದ್ದೇನೆ.
.ಜಿ.ಡಿ.ಗಂಗಾಧರನ್‌ ತಾಪಂ
ಇಒ, ಹರಿಹರ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.