ಮಳಿಗೆಗಳ ತೆರವಿಗೆ ನೋಟಿಸ್‌

ಗಾಂಧಿ ಮೈದಾನದ ಅಂಚಿನಲ್ಲಿರುವ ಕ್ರೀಡಾ ಇಲಾಖೆಗೆ ಸೇರಿದ ಮಳಿಗೆ

Team Udayavani, Mar 5, 2020, 11:29 AM IST

5-March-03

ಹರಿಹರ: ನಗರದ ಗಾಂಧಿ  ಮೈದಾನದ ಅಂಚಿನಲ್ಲಿರುವ ವಾಣಿಜ್ಯ ಸಂಕೀರ್ಣ ಮಳಿಗೆಗಳ ಬಾಡಿಗೆ ಒಪ್ಪಂದದ ಅವಧಿ ಮೀರಿರುವ ಹಿನ್ನೆಲೆಯಲ್ಲಿ ಮೇ 30ರೊಳಗೆ ತೆರವುಗೊಳಿಸುವಂತೆ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮಳಿಗೆದಾರರಿಗೆ ನೋಟಿಸ್‌ ನೀಡಿದೆ.

ಕ್ರೀಡಾಂಗಣದ ವಾಣಿಜ್ಯ ಸಂಕೀರ್ಣದ ನೆಲ ಮಹಡಿಯ 26 ಮಳಿಗೆಗಳ ಮಾಲೀಕರಿಗೆ ಮೇ 30ಕ್ಕೆ ಅವಧಿ ಪೂರ್ಣಗೊಳ್ಳುವ ಕಾರಣ ಅಷ್ಟರಲ್ಲಿ ತೆರವುಗೊಳಿಸುವಂತೆ ನೋಟಿಸಿನಲ್ಲಿ ಸೂಚಿಸಲಾಗಿದೆ. ನಿಯಮಾವಳಿಯಂತೆ 12 ವರ್ಷಕ್ಕೊಮ್ಮೆ ಮಳಿಗೆಗಳ ಮರು ಹರಾಜು ನಡೆಯಬೇಕಿರುವುದರಿಂದ ಇಲಾಖೆ ಪ್ರಕ್ರಿಯೆ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

ಜಿಲ್ಲೆಯ 2ನೇ ದೊಡ್ಡ ನಗರವೆನಿಸಿದ ಹರಿಹರದಲ್ಲಿ ಹಳೆ ಪಿ.ಬಿ.ರಸ್ತೆ ಮತ್ತು ಮುಖ್ಯ ರಸ್ತೆಯಲ್ಲಿ ಹೆಚ್ಚಿನ ವಾಣಿಜ್ಯ ವಹಿವಾಟು ನಡೆಯುತ್ತದೆ. ಹೀಗಾಗಿ ಮರು ಹರಾಜು ಪ್ರಕ್ರಿಯೆ ನಡೆದರೆ ತಮ್ಮ ಕನಸಿನ ಒಂದು ಮಳೆಗೆ ಪಡೆದು ಏನಾದರೂ ವ್ಯಾಪಾರ, ವಹಿವಾಟು ಮಾಡುವವರಿಗೆ ಆಸೆ ಚಿಗುರಿದೆ.

ಅವಧಿ ಮುಗಿದಿದೆ: ಕಳೆದ 2001ರಲ್ಲಿ ಮಳಿಗೆಗಳನ್ನು ಬಾಡಿಗೆ ಆಧಾರದ ಮೇಲೆ ನೀಡಲಾಗಿತ್ತು. ಅವ ಧಿ ಮೀರಿದ ಹಿನ್ನೆಲೆ 26 ಮಳಿಗೆಗಳಿಗೆ ಪರಿಷ್ಕೃತ ಬಾಡಿಗೆ ನಿಗದಿ ಪಡಿಸಿ, ಮರು ಹರಾಜು ಮಾಡಲು ಇಲಾಖೆ ಈ ಕ್ರಮ ಜರುಗಿಸಿದೆ. ಬಾಡಿಗೆದಾರರಿಗೆ ಮಳಿಗೆ ತೆರವುಗೊಳಿಸಲು ಅಗತ್ಯ ಸಮಯ ನೀಡಿ ನೋಟಿಸ್‌ ನೀಡಲಾಗಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ. ಶ್ರೀನಿವಾಸ ಮಾಹಿತಿ ನೀಡಿದರು.

ತೆರೆಮರೆ ಕಸರತ್ತು: ವಾಣಿಜ್ಯ ಸಂಕೀರ್ಣದಲ್ಲಿ ಹಾಲಿ ಬಾಡಿಗೆದಾರರಲ್ಲಿ ಕೆಲವರು ತಮ್ಮ ಮಳಿಗೆಗಳನ್ನು ತಮ್ಮ ಸುಪರ್ದಿಯಲ್ಲಿಯೇ ಉಳಿಸಿಕೊಳ್ಳಲು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ಪ್ರಭಾವಿ ರಾಜಕಾರಣಿಗಳು, ಮುಖಂಡರು ಹಾಗೂ ಅಧಿ ಕಾರಿಗಳ ಮನವೊಲಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆಂದು ತಿಳಿದು ಬಂದಿದೆ.

ಗೋದಾಮಿಗೆ ಅವಕಾಶ ಬೇಡ: ಕೆಲ ವ್ಯಾಪಾರಿಗಳು ಕುಟುಂಬಸ್ಥರ ಹೆಸರಿನಲ್ಲಿ ಒಂದಕ್ಕಿಂತ ಅಧಿ ಕ ಮಳಿಗೆ ಪಡೆದುಕೊಂಡು, ಒಂದು ಮಳಿಗೆಯಲ್ಲಿ ವ್ಯಾಪಾರ ಮಾಡುತ್ತಾ ಉಳಿದ ಮೂರ್‍ನಾಲ್ಕು ಮಳಿಗೆಗಳನ್ನು ಗೋದಾಮು ಮಾಡಿಕೊಂಡಿದ್ದಾರೆ. ಇದರಿಂದ ವಾಣಿಜ್ಯ ಸಂಕೀರ್ಣದ ಇತರೆ ವ್ಯಾಪಾರಿಗಳಿಗೆ ಅಲ್ಲದೆ ಗ್ರಾಹಕರಿಗೂ ತೊಂದರೆಯಾಗುತ್ತಿದೆ. ಗೋದಾಮುಗಳನ್ನು ಊರಾಚೆ ಮಾಡಿಕೊಳ್ಳಬೇಕೆಂಬ ನಿಯಮವಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ದಸಂಸ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್‌ ಆರೋಪಿಸಿದ್ದಾರೆ.

ಮಳಿಗೆಗಳ ಮರು ಹರಾಜು ಕಾನೂನು ಬದ್ಧ ಹಾಗೂ ವಾಸ್ತವವಾಗಿ ನಡೆಯಬೇಕು. ಅಧಿಕಾರಿ, ಜನಪ್ರತಿನಿಧಿ ಗಳೊಂದಿಗೆ ಸೇರಿ ತೋರಿಕೆಗೆ ಮರು ಹರಾಜು ಪ್ರಕ್ರಿಯೆ ಮಾಡಿ ಮುಗಿಸಿದರೆ ಕ್ರೀಡಾ ಇಲಾಖೆ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ನಿರುದ್ಯೋಗಿಗಳಿಗೆ ಅವಕಾಶವಾಗಲಿ
ಕಳೆದ ಹಲವು ವರ್ಷಗಳಿಂದ ವಾಣಿಜ್ಯ ಮಳಿಗೆಗಳ ಪೈಕಿ ಹಲವು ಮಳೆಗಗಳು ನಿಯಮ ಬಾಹಿರವಾಗಿ ಬಳಕೆಯಾಗಿವೆ. ಬಾಡಿಗೆ ಪಡೆದವರು ಉಪ ಬಾಡಿಗೆಗೆ ನೀಡುವುದು. ವ್ಯಾಪಾರ ಮಾಡಲು ಎಂದು ಹೇಳಿ ಗೋದಾಮು ಮಾಡಿಕೊಳ್ಳುವುದು. ಹೀಗೆ ವಾಣಿಜ್ಯ ಸಂಕೀರ್ಣದ ಸ್ಥಾಪನೆಯ ಉದ್ದೇಶವನ್ನು ಗಾಳಿಗೆ ತೂರಲಾಗಿದೆ. ಇಲಾಖೆಯು ಮರು ಹರಾಜು ಪ್ರಕ್ರಿಯೆ ಕೈಗೊಂಡಿರುವುದು ಸ್ವಾಗತಾರ್ಹ. ಈ ಮರು ಹರಾಜಿನಲ್ಲಿ ಹೊಸ, ಬಡ, ನಿರುದ್ಯೋಗಿಗಳಿಗೆ ಮಳಿಗೆಗಳು ಸಿಗುವಂತಾದರೆ ಮರು ಹರಾಜಿನ ಉದ್ದೇಶ ಈಡೇರಿದಂತಾಗುತ್ತದೆ.
ಜಿ.ಸಿ.ರವಿಶಂಕರ್‌,
ನಿವಾಸಿ, ಹರಿಹರ

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.